Homeಕರೋನಾ ತಲ್ಲಣಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

- Advertisement -
- Advertisement -

ಆಕ್ಸಿಜನ್, ಜೀವರಕ್ಷಕ ಔಷಧಿಗಳ ಹಂಚಿಕೆಯಲ್ಲಿ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಅನ್ಯಾಯವೆಸಗಿತು. ಈಗ ಕೋವಿಡ್ ಲಸಿಕೆ ಹಂಚಿಕೆಯಲ್ಲೂ ತಾರತಮ್ಯ ಎಸಗುತ್ತಿದೆ. ಈ ಅನ್ಯಾಯಗಳನ್ನು ಖಂಡಿಸಿ ಭಾನುವಾರ ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ #ಲಸಿಕೆಯಲ್ಲೂಮೋಸ ಎಂಬ ಟ್ವಿಟರ್ ಅಭಿಯಾನ ನಡೆಸಲಿದೆ ಎಂದು ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗ‌ ಧರೆಗಿಳಿಯಲಿದೆ ಎಂದು ಹೇಳಿದ್ದರು. ಆದರೆ ಈಗ ಆಗುತ್ತಿರುವುದೇ ಬೇರೆ. ಅನ್ಯಾಯಗಳ ಕುರಿತು ಪ್ರಶ್ನೆ ಮಾಡುವ ಶಕ್ತಿಯೂ ರಾಜ್ಯ ನಾಯಕರಿಗಿಲ್ಲ. ಕನ್ನಡಿಗರು ಈಗಾಗಲೇ ನೊಂದಿದ್ದಾರೆ, ನರಳುತ್ತಿದ್ದಾರೆ. ನಮ್ಮ‌ ತಾಳ್ಮೆಯ ಪರೀಕ್ಷೆ ಮಾಡಬೇಡಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಸಿಜನ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯವನ್ನು ನಾವು ಕಣ್ಣಾರೆ ನೋಡಿದ್ದೇವೆ. ಜೀವಾನಿಲ ಸಿಗದೆ ನೂರಾರು ಮಂದಿ ರಾಜ್ಯದಲ್ಲಿ ಮೃತಪಟ್ಟರು. ಕೊನೆಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಗಳ ಮಧ್ಯಪ್ರವೇಶದಿಂದಾಗಿ ಒಂದಷ್ಟು ಆಕ್ಸಿಜನ್ ಲಭಿಸಿತು. ಒಕ್ಕೂಟ ಸರ್ಕಾರ ನ್ಯಾಯಾಲಯಗಳ ಆದೇಶವನ್ನೂ ಸರಿಯಾಗಿ ಪಾಲಿಸುತ್ತಿಲ್ಲ. ಆದರೂ ಇದನ್ನು ಕೇಳುವವರು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೋಗಿಗಳಿಗೆ ಬಳಸಲಾಗುವ ರೆಮ್ಡಿಸಿವಿರ್ ಹಂಚಿಕೆಯಲ್ಲೂ ಗುಜರಾತ್, ಉತ್ತರಪ್ರದೇಶ ಇತ್ಯಾದಿ ರಾಜ್ಯಗಳಿಗೆ ಸಿಂಹಪಾಲು ನೀಡಿ ಕರ್ನಾಟಕವನ್ನು ವಂಚಿಸಲಾಯಿತು. ಈಗ ಬ್ಲಾಕ್ ಫಂಗಸ್ ರೋಗಿಗಳಿಗೆ ನೀಡಲಾಗುವ ಆಂಫೋಟೆರಿಸಿನ್ ಬಿ ಔಷಧಿ ಹಂಚಿಕೆಯಲ್ಲೂ ಅನ್ಯಾಯ ನಡೆಯುತ್ತಿದೆ. ಹಲವಾರು ಜಿಲ್ಲೆಗಳಿಗೆ ಈ ಔಷಧಿ ಸಿಗದೆ ರೋಗಿಗಳು ಸಾಯುತ್ತಿದ್ದಾರೆ. ಇದಕ್ಕೆ‌ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ಮೇ.25ರ ಅಂತ್ಯಕ್ಕೆ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಶೇ.6.7ರಷ್ಟು ಕೋವಿಡ್ ಲಸಿಕೆ ಹಂಚಿಕೆ ಮಾಡಿದೆ. ಅದೇ ಸಂದರ್ಭದಲ್ಲಿ ಗುಜರಾತ್ ಗೆ ಶೇ. 7.91ರಷ್ಟು, ಉತ್ತರ ಪ್ರದೇಶಕ್ಕೆ 8.29ರಷ್ಟು ಲಸಿಕೆ ನೀಡಿದೆ. ಈ ತಾರತಮ್ಯ ಯಾಕೆ? ವ್ಯಾಕ್ಸಿನ್ ಹಂಚಿಕೆಯಲ್ಲಿ ಈ ಮಲತಾಯಿ ಧೋರಣೆ ಯಾಕೆ? ಒಕ್ಕೂಟ ಸರ್ಕಾರಕ್ಕೆ ಎಲ್ಲರ ಜೀವವೂ ಮುಖ್ಯವಲ್ಲವೇ ಎಂದು ಕಿಡಿಕಾರಿದ್ದಾರೆ.

ಮೇ.1 ರ ನಂತರ ರಾಜ್ಯ ಸರ್ಕಾರಗಳಿಗೂ ನೇರವಾಗಿ ಲಸಿಕೆ ಕೊಂಡುಕೊಳ್ಳುವ ಅವಕಾಶವನ್ನು ಒಕ್ಕೂಟ ಸರ್ಕಾರ ನೀಡಿದ ನಂತರ ಒಟ್ಟು ಮೂರು ಕೋಟಿ ಲಸಿಕೆಗಳಿಗೆ ಬೇಡಿಕೆ ನೀಡಲಾಗಿದೆ, ಹಣವನ್ನೂ ತೆಗೆದಿರಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಕೈ ಸೇರಿರುವುದು ಕೇವಲ 14 ಲಕ್ಷ ಲಸಿಕೆ ಮಾತ್ರ.‌ ರಾಜ್ಯಕ್ಕೆ ಬರಬೇಕಾದ ಲಸಿಕೆಯನ್ನು ತಡೆಯುತ್ತಿರುವ ಕಾಣದ ಕೈಗಳು ಯಾವುವು ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳಿಗೆ ಇದ್ದ 100 ರೂಪಾಯಿ ಸೇವಾಶುಲ್ಕವನ್ನು ರಾಜ್ಯ‌ ಸರ್ಕಾರ 300 ರುಪಾಯಿಗಳಿಗೆ ಹೆಚ್ಚಿಸಿದೆ. ಖಾಸಗಿ ಆಸ್ಪತ್ರೆಗಳ ಲಾಬಿಗೆ ರಾಜ್ಯ ಸರ್ಕಾರ ಮಣಿದಿರುವುದು ಸ್ಪಷ್ಟವಾಗಿದೆ. ಖಾಸಗಿ ಆಸ್ಪತ್ರೆಗಳು ಮನಸಿಗೆ ಬಂದ ದರಕ್ಕೆ ಲಸಿಕೆಯನ್ನು ನೀಡುತ್ತಿತ್ತು, ಲಸಿಕೆ ಹೆಸರಲ್ಲಿ ಹಗಲು ದರೋಡೆಯೇ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೋವಿಡ್ ಮೂರನೇ ಅಲೆ ಬರುವುದರೊಳಗೆ ರಾಜ್ಯದ ಎಲ್ಲ ನಾಗರಿಕರಿಗೂ ಲಸಿಕೆ ನೀಡಬೇಕಾಗಿರುವುದು ರಾಜ್ಯ ಮತ್ತು ಒಕ್ಕೂಟ‌ ಸರ್ಕಾರದ ಹೊಣೆಗಾರಿಕೆಯಾಗಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮೂರನೇ ಅಲೆಯಲ್ಲೂ ಅಮಾಯಕ ಜನರು ಸಾವಿಗೀಡಾಗುವ ಸಂಭವವಿದೆ. ಜನರ ಸಿಟ್ಟು ರಟ್ಟೆಗೆ ಬರುವ ಮುನ್ನ‌ ಸರ್ಕಾರಗಳು ಎಚ್ಚೆತ್ತು ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...