Homeಕರೋನಾ ತಲ್ಲಣಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

- Advertisement -
- Advertisement -

ಆಕ್ಸಿಜನ್, ಜೀವರಕ್ಷಕ ಔಷಧಿಗಳ ಹಂಚಿಕೆಯಲ್ಲಿ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಅನ್ಯಾಯವೆಸಗಿತು. ಈಗ ಕೋವಿಡ್ ಲಸಿಕೆ ಹಂಚಿಕೆಯಲ್ಲೂ ತಾರತಮ್ಯ ಎಸಗುತ್ತಿದೆ. ಈ ಅನ್ಯಾಯಗಳನ್ನು ಖಂಡಿಸಿ ಭಾನುವಾರ ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ #ಲಸಿಕೆಯಲ್ಲೂಮೋಸ ಎಂಬ ಟ್ವಿಟರ್ ಅಭಿಯಾನ ನಡೆಸಲಿದೆ ಎಂದು ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗ‌ ಧರೆಗಿಳಿಯಲಿದೆ ಎಂದು ಹೇಳಿದ್ದರು. ಆದರೆ ಈಗ ಆಗುತ್ತಿರುವುದೇ ಬೇರೆ. ಅನ್ಯಾಯಗಳ ಕುರಿತು ಪ್ರಶ್ನೆ ಮಾಡುವ ಶಕ್ತಿಯೂ ರಾಜ್ಯ ನಾಯಕರಿಗಿಲ್ಲ. ಕನ್ನಡಿಗರು ಈಗಾಗಲೇ ನೊಂದಿದ್ದಾರೆ, ನರಳುತ್ತಿದ್ದಾರೆ. ನಮ್ಮ‌ ತಾಳ್ಮೆಯ ಪರೀಕ್ಷೆ ಮಾಡಬೇಡಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಸಿಜನ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯವನ್ನು ನಾವು ಕಣ್ಣಾರೆ ನೋಡಿದ್ದೇವೆ. ಜೀವಾನಿಲ ಸಿಗದೆ ನೂರಾರು ಮಂದಿ ರಾಜ್ಯದಲ್ಲಿ ಮೃತಪಟ್ಟರು. ಕೊನೆಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಗಳ ಮಧ್ಯಪ್ರವೇಶದಿಂದಾಗಿ ಒಂದಷ್ಟು ಆಕ್ಸಿಜನ್ ಲಭಿಸಿತು. ಒಕ್ಕೂಟ ಸರ್ಕಾರ ನ್ಯಾಯಾಲಯಗಳ ಆದೇಶವನ್ನೂ ಸರಿಯಾಗಿ ಪಾಲಿಸುತ್ತಿಲ್ಲ. ಆದರೂ ಇದನ್ನು ಕೇಳುವವರು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೋಗಿಗಳಿಗೆ ಬಳಸಲಾಗುವ ರೆಮ್ಡಿಸಿವಿರ್ ಹಂಚಿಕೆಯಲ್ಲೂ ಗುಜರಾತ್, ಉತ್ತರಪ್ರದೇಶ ಇತ್ಯಾದಿ ರಾಜ್ಯಗಳಿಗೆ ಸಿಂಹಪಾಲು ನೀಡಿ ಕರ್ನಾಟಕವನ್ನು ವಂಚಿಸಲಾಯಿತು. ಈಗ ಬ್ಲಾಕ್ ಫಂಗಸ್ ರೋಗಿಗಳಿಗೆ ನೀಡಲಾಗುವ ಆಂಫೋಟೆರಿಸಿನ್ ಬಿ ಔಷಧಿ ಹಂಚಿಕೆಯಲ್ಲೂ ಅನ್ಯಾಯ ನಡೆಯುತ್ತಿದೆ. ಹಲವಾರು ಜಿಲ್ಲೆಗಳಿಗೆ ಈ ಔಷಧಿ ಸಿಗದೆ ರೋಗಿಗಳು ಸಾಯುತ್ತಿದ್ದಾರೆ. ಇದಕ್ಕೆ‌ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ಮೇ.25ರ ಅಂತ್ಯಕ್ಕೆ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಶೇ.6.7ರಷ್ಟು ಕೋವಿಡ್ ಲಸಿಕೆ ಹಂಚಿಕೆ ಮಾಡಿದೆ. ಅದೇ ಸಂದರ್ಭದಲ್ಲಿ ಗುಜರಾತ್ ಗೆ ಶೇ. 7.91ರಷ್ಟು, ಉತ್ತರ ಪ್ರದೇಶಕ್ಕೆ 8.29ರಷ್ಟು ಲಸಿಕೆ ನೀಡಿದೆ. ಈ ತಾರತಮ್ಯ ಯಾಕೆ? ವ್ಯಾಕ್ಸಿನ್ ಹಂಚಿಕೆಯಲ್ಲಿ ಈ ಮಲತಾಯಿ ಧೋರಣೆ ಯಾಕೆ? ಒಕ್ಕೂಟ ಸರ್ಕಾರಕ್ಕೆ ಎಲ್ಲರ ಜೀವವೂ ಮುಖ್ಯವಲ್ಲವೇ ಎಂದು ಕಿಡಿಕಾರಿದ್ದಾರೆ.

ಮೇ.1 ರ ನಂತರ ರಾಜ್ಯ ಸರ್ಕಾರಗಳಿಗೂ ನೇರವಾಗಿ ಲಸಿಕೆ ಕೊಂಡುಕೊಳ್ಳುವ ಅವಕಾಶವನ್ನು ಒಕ್ಕೂಟ ಸರ್ಕಾರ ನೀಡಿದ ನಂತರ ಒಟ್ಟು ಮೂರು ಕೋಟಿ ಲಸಿಕೆಗಳಿಗೆ ಬೇಡಿಕೆ ನೀಡಲಾಗಿದೆ, ಹಣವನ್ನೂ ತೆಗೆದಿರಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಕೈ ಸೇರಿರುವುದು ಕೇವಲ 14 ಲಕ್ಷ ಲಸಿಕೆ ಮಾತ್ರ.‌ ರಾಜ್ಯಕ್ಕೆ ಬರಬೇಕಾದ ಲಸಿಕೆಯನ್ನು ತಡೆಯುತ್ತಿರುವ ಕಾಣದ ಕೈಗಳು ಯಾವುವು ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳಿಗೆ ಇದ್ದ 100 ರೂಪಾಯಿ ಸೇವಾಶುಲ್ಕವನ್ನು ರಾಜ್ಯ‌ ಸರ್ಕಾರ 300 ರುಪಾಯಿಗಳಿಗೆ ಹೆಚ್ಚಿಸಿದೆ. ಖಾಸಗಿ ಆಸ್ಪತ್ರೆಗಳ ಲಾಬಿಗೆ ರಾಜ್ಯ ಸರ್ಕಾರ ಮಣಿದಿರುವುದು ಸ್ಪಷ್ಟವಾಗಿದೆ. ಖಾಸಗಿ ಆಸ್ಪತ್ರೆಗಳು ಮನಸಿಗೆ ಬಂದ ದರಕ್ಕೆ ಲಸಿಕೆಯನ್ನು ನೀಡುತ್ತಿತ್ತು, ಲಸಿಕೆ ಹೆಸರಲ್ಲಿ ಹಗಲು ದರೋಡೆಯೇ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೋವಿಡ್ ಮೂರನೇ ಅಲೆ ಬರುವುದರೊಳಗೆ ರಾಜ್ಯದ ಎಲ್ಲ ನಾಗರಿಕರಿಗೂ ಲಸಿಕೆ ನೀಡಬೇಕಾಗಿರುವುದು ರಾಜ್ಯ ಮತ್ತು ಒಕ್ಕೂಟ‌ ಸರ್ಕಾರದ ಹೊಣೆಗಾರಿಕೆಯಾಗಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮೂರನೇ ಅಲೆಯಲ್ಲೂ ಅಮಾಯಕ ಜನರು ಸಾವಿಗೀಡಾಗುವ ಸಂಭವವಿದೆ. ಜನರ ಸಿಟ್ಟು ರಟ್ಟೆಗೆ ಬರುವ ಮುನ್ನ‌ ಸರ್ಕಾರಗಳು ಎಚ್ಚೆತ್ತು ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...