Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ಫೆಡರಲ್ ನ್ಯಾಯಾಧೀಶರು ಗುರುವಾರ (23) ತಾತ್ಕಾಲಿಕ ತಡೆ ನೀಡಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ಅಮೆರಿಕದ ಫೆಡರಲ್ ನ್ಯಾಯಾಧೀಶ ಜಾನ್ ಕಫ್ನೌರ್ ಅವರು, ಈ ಆದೇಶ “ಸ್ಪಷ್ಟವಾಗಿ ಅಸಂವಿಧಾನಿಕ” ಎಂದಿದ್ದಾಗಿ ವರದಿಗಳು ತಿಳಿಸಿವೆ.

ವಿಚಾರಣೆ ಸಂದರ್ಭ ನ್ಯಾಯಾಂಗ ಇಲಾಖೆಯ ಪರ ವಕೀಲ ಬ್ರೆಟ್ ಶುಮಾಟೆ ವಾದ ಮಂಡಿಸುವಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶ ಕಫ್ನೌರ್, “ಟ್ರಂಪ್ ಆದೇಶ ಸಾಂವಿಧಾನಿಕ ಎಂದು ಪರಿಗಣಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆದೇಶದ ಕುರಿತು ವಿವರಿಸಲು ಸಮಯವಕಾಶ ನೀಡುವಂತೆ ವಕೀಲರು ಮನವಿ ಮಾಡಿದ್ದಾರೆ.

ಅಮೆರಿಕದ ಅರಿಝೋನಾ, ಇಲಿನಾಯ್ಸ್, ಒರೆಗಾನ್ ಮತ್ತು ವಾಷಿಂಗ್ಟನ್ ರಾಜ್ಯಗಳು ಟ್ರಂಪ್ ಆದೇಶದ ವಿರುದ್ದ ನ್ಯಾಯಾಲದ ಮೊರೆ ಹೋಗಿವೆ. ಈ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ನ್ಯಾಯಾಧೀಶರು ಟ್ರಂಪ್ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ತಡೆಯಾಜ್ಞೆ ಇಡೀ ದೇಶಕ್ಕೆ ಅನ್ವಯಿಸುತ್ತದೆ.

ಟ್ರಂಪ್ ಆದೇಶದ ವಿರುದ್ದ ದೇಶದ 22 ರಾಜ್ಯಗಳು, ವಲಸಿಗರ ಹಕ್ಕುಗಳ ಗುಂಪುಗಳು ಮತ್ತು ವೈಯಕ್ತಿಕ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿವೆ. ಈ ಪೈಕಿ ಜನ್ಮದತ್ತ ಯುಎಸ್‌ ಪೌರತ್ವ ಪಡೆದ ಅಟಾರ್ನಿ ಜನರಲ್‌ಗಳು, ತಮ್ಮ ಮಗು ಅಮೆರಿಕದ ನಾಗರಿಕತ್ವ ಪಡೆಯದಿರಬಹುದು ಎಂದು ಆಂತಕದಲ್ಲಿರುವ ಗರ್ಭಿಣಿಯರೂ ಸೇರಿದ್ದಾರೆ.

ವಿಚಾರಣೆ ಪ್ರಾರಂಭಿಸಿರುವ ನ್ಯಾಯಾಧೀಶ ಕಫ್ನೌರ್ ಅವರು, ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ “ಈ ಆದೇಶವು ಮನಸ್ಸನ್ನು ಗೊಂದಲಕ್ಕೆ ತಳ್ಳಿದೆ” ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ನ್ಯಾಯಾಧೀಶರ ತಡೆಯಾಜ್ಞೆ ಆದೇಶಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರದ ಪರ ವಕೀಲ ಶುಮಾಟೆ ಅವರು 14 ದಿನಗಳ ತಡೆಯಾಜ್ಞೆ ಬದಲು, ಆದೇಶವನ್ನು ವಿವರಿಸಲು ಸಮಯವಕಾಶ ನೀಡುವಂತೆ ಕೋರಿದ್ದಾರೆ.

ಜನ್ಮದತ್ತ ಪೌರತ್ವ ರದ್ದು ಸೇರಿದಂತೆ ಟ್ರಂಪ್ ಅವರು ಪದಗ್ರಹಣ ದಿನದಂದು ಸಹಿ ಮಾಡಿರುವ ಕಾರ್ಯಕಾರಿ ಆದೇಶಗಳು ಫೆಬ್ರವರಿ 19ರಿಂದ ಜಾರಿಗೆ ಬರಲಿವೆ. ಇದು ಅಮೆರಿಕದಲ್ಲಿ ಜನಿಸಿದ ಭಾರತೀಯರು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...