Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ಫೆಡರಲ್ ನ್ಯಾಯಾಧೀಶರು ಗುರುವಾರ (23) ತಾತ್ಕಾಲಿಕ ತಡೆ ನೀಡಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ಅಮೆರಿಕದ ಫೆಡರಲ್ ನ್ಯಾಯಾಧೀಶ ಜಾನ್ ಕಫ್ನೌರ್ ಅವರು, ಈ ಆದೇಶ “ಸ್ಪಷ್ಟವಾಗಿ ಅಸಂವಿಧಾನಿಕ” ಎಂದಿದ್ದಾಗಿ ವರದಿಗಳು ತಿಳಿಸಿವೆ.

ವಿಚಾರಣೆ ಸಂದರ್ಭ ನ್ಯಾಯಾಂಗ ಇಲಾಖೆಯ ಪರ ವಕೀಲ ಬ್ರೆಟ್ ಶುಮಾಟೆ ವಾದ ಮಂಡಿಸುವಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶ ಕಫ್ನೌರ್, “ಟ್ರಂಪ್ ಆದೇಶ ಸಾಂವಿಧಾನಿಕ ಎಂದು ಪರಿಗಣಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆದೇಶದ ಕುರಿತು ವಿವರಿಸಲು ಸಮಯವಕಾಶ ನೀಡುವಂತೆ ವಕೀಲರು ಮನವಿ ಮಾಡಿದ್ದಾರೆ.

ಅಮೆರಿಕದ ಅರಿಝೋನಾ, ಇಲಿನಾಯ್ಸ್, ಒರೆಗಾನ್ ಮತ್ತು ವಾಷಿಂಗ್ಟನ್ ರಾಜ್ಯಗಳು ಟ್ರಂಪ್ ಆದೇಶದ ವಿರುದ್ದ ನ್ಯಾಯಾಲದ ಮೊರೆ ಹೋಗಿವೆ. ಈ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ನ್ಯಾಯಾಧೀಶರು ಟ್ರಂಪ್ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ತಡೆಯಾಜ್ಞೆ ಇಡೀ ದೇಶಕ್ಕೆ ಅನ್ವಯಿಸುತ್ತದೆ.

ಟ್ರಂಪ್ ಆದೇಶದ ವಿರುದ್ದ ದೇಶದ 22 ರಾಜ್ಯಗಳು, ವಲಸಿಗರ ಹಕ್ಕುಗಳ ಗುಂಪುಗಳು ಮತ್ತು ವೈಯಕ್ತಿಕ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿವೆ. ಈ ಪೈಕಿ ಜನ್ಮದತ್ತ ಯುಎಸ್‌ ಪೌರತ್ವ ಪಡೆದ ಅಟಾರ್ನಿ ಜನರಲ್‌ಗಳು, ತಮ್ಮ ಮಗು ಅಮೆರಿಕದ ನಾಗರಿಕತ್ವ ಪಡೆಯದಿರಬಹುದು ಎಂದು ಆಂತಕದಲ್ಲಿರುವ ಗರ್ಭಿಣಿಯರೂ ಸೇರಿದ್ದಾರೆ.

ವಿಚಾರಣೆ ಪ್ರಾರಂಭಿಸಿರುವ ನ್ಯಾಯಾಧೀಶ ಕಫ್ನೌರ್ ಅವರು, ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ “ಈ ಆದೇಶವು ಮನಸ್ಸನ್ನು ಗೊಂದಲಕ್ಕೆ ತಳ್ಳಿದೆ” ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ನ್ಯಾಯಾಧೀಶರ ತಡೆಯಾಜ್ಞೆ ಆದೇಶಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರದ ಪರ ವಕೀಲ ಶುಮಾಟೆ ಅವರು 14 ದಿನಗಳ ತಡೆಯಾಜ್ಞೆ ಬದಲು, ಆದೇಶವನ್ನು ವಿವರಿಸಲು ಸಮಯವಕಾಶ ನೀಡುವಂತೆ ಕೋರಿದ್ದಾರೆ.

ಜನ್ಮದತ್ತ ಪೌರತ್ವ ರದ್ದು ಸೇರಿದಂತೆ ಟ್ರಂಪ್ ಅವರು ಪದಗ್ರಹಣ ದಿನದಂದು ಸಹಿ ಮಾಡಿರುವ ಕಾರ್ಯಕಾರಿ ಆದೇಶಗಳು ಫೆಬ್ರವರಿ 19ರಿಂದ ಜಾರಿಗೆ ಬರಲಿವೆ. ಇದು ಅಮೆರಿಕದಲ್ಲಿ ಜನಿಸಿದ ಭಾರತೀಯರು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...