Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ಫೆಡರಲ್ ನ್ಯಾಯಾಧೀಶರು ಗುರುವಾರ (23) ತಾತ್ಕಾಲಿಕ ತಡೆ ನೀಡಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ಅಮೆರಿಕದ ಫೆಡರಲ್ ನ್ಯಾಯಾಧೀಶ ಜಾನ್ ಕಫ್ನೌರ್ ಅವರು, ಈ ಆದೇಶ “ಸ್ಪಷ್ಟವಾಗಿ ಅಸಂವಿಧಾನಿಕ” ಎಂದಿದ್ದಾಗಿ ವರದಿಗಳು ತಿಳಿಸಿವೆ.

ವಿಚಾರಣೆ ಸಂದರ್ಭ ನ್ಯಾಯಾಂಗ ಇಲಾಖೆಯ ಪರ ವಕೀಲ ಬ್ರೆಟ್ ಶುಮಾಟೆ ವಾದ ಮಂಡಿಸುವಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶ ಕಫ್ನೌರ್, “ಟ್ರಂಪ್ ಆದೇಶ ಸಾಂವಿಧಾನಿಕ ಎಂದು ಪರಿಗಣಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆದೇಶದ ಕುರಿತು ವಿವರಿಸಲು ಸಮಯವಕಾಶ ನೀಡುವಂತೆ ವಕೀಲರು ಮನವಿ ಮಾಡಿದ್ದಾರೆ.

ಅಮೆರಿಕದ ಅರಿಝೋನಾ, ಇಲಿನಾಯ್ಸ್, ಒರೆಗಾನ್ ಮತ್ತು ವಾಷಿಂಗ್ಟನ್ ರಾಜ್ಯಗಳು ಟ್ರಂಪ್ ಆದೇಶದ ವಿರುದ್ದ ನ್ಯಾಯಾಲದ ಮೊರೆ ಹೋಗಿವೆ. ಈ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ನ್ಯಾಯಾಧೀಶರು ಟ್ರಂಪ್ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ತಡೆಯಾಜ್ಞೆ ಇಡೀ ದೇಶಕ್ಕೆ ಅನ್ವಯಿಸುತ್ತದೆ.

ಟ್ರಂಪ್ ಆದೇಶದ ವಿರುದ್ದ ದೇಶದ 22 ರಾಜ್ಯಗಳು, ವಲಸಿಗರ ಹಕ್ಕುಗಳ ಗುಂಪುಗಳು ಮತ್ತು ವೈಯಕ್ತಿಕ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿವೆ. ಈ ಪೈಕಿ ಜನ್ಮದತ್ತ ಯುಎಸ್‌ ಪೌರತ್ವ ಪಡೆದ ಅಟಾರ್ನಿ ಜನರಲ್‌ಗಳು, ತಮ್ಮ ಮಗು ಅಮೆರಿಕದ ನಾಗರಿಕತ್ವ ಪಡೆಯದಿರಬಹುದು ಎಂದು ಆಂತಕದಲ್ಲಿರುವ ಗರ್ಭಿಣಿಯರೂ ಸೇರಿದ್ದಾರೆ.

ವಿಚಾರಣೆ ಪ್ರಾರಂಭಿಸಿರುವ ನ್ಯಾಯಾಧೀಶ ಕಫ್ನೌರ್ ಅವರು, ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ “ಈ ಆದೇಶವು ಮನಸ್ಸನ್ನು ಗೊಂದಲಕ್ಕೆ ತಳ್ಳಿದೆ” ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ನ್ಯಾಯಾಧೀಶರ ತಡೆಯಾಜ್ಞೆ ಆದೇಶಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರದ ಪರ ವಕೀಲ ಶುಮಾಟೆ ಅವರು 14 ದಿನಗಳ ತಡೆಯಾಜ್ಞೆ ಬದಲು, ಆದೇಶವನ್ನು ವಿವರಿಸಲು ಸಮಯವಕಾಶ ನೀಡುವಂತೆ ಕೋರಿದ್ದಾರೆ.

ಜನ್ಮದತ್ತ ಪೌರತ್ವ ರದ್ದು ಸೇರಿದಂತೆ ಟ್ರಂಪ್ ಅವರು ಪದಗ್ರಹಣ ದಿನದಂದು ಸಹಿ ಮಾಡಿರುವ ಕಾರ್ಯಕಾರಿ ಆದೇಶಗಳು ಫೆಬ್ರವರಿ 19ರಿಂದ ಜಾರಿಗೆ ಬರಲಿವೆ. ಇದು ಅಮೆರಿಕದಲ್ಲಿ ಜನಿಸಿದ ಭಾರತೀಯರು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...