Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ಫೆಡರಲ್ ನ್ಯಾಯಾಧೀಶರು ಗುರುವಾರ (23) ತಾತ್ಕಾಲಿಕ ತಡೆ ನೀಡಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ಅಮೆರಿಕದ ಫೆಡರಲ್ ನ್ಯಾಯಾಧೀಶ ಜಾನ್ ಕಫ್ನೌರ್ ಅವರು, ಈ ಆದೇಶ “ಸ್ಪಷ್ಟವಾಗಿ ಅಸಂವಿಧಾನಿಕ” ಎಂದಿದ್ದಾಗಿ ವರದಿಗಳು ತಿಳಿಸಿವೆ.

ವಿಚಾರಣೆ ಸಂದರ್ಭ ನ್ಯಾಯಾಂಗ ಇಲಾಖೆಯ ಪರ ವಕೀಲ ಬ್ರೆಟ್ ಶುಮಾಟೆ ವಾದ ಮಂಡಿಸುವಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶ ಕಫ್ನೌರ್, “ಟ್ರಂಪ್ ಆದೇಶ ಸಾಂವಿಧಾನಿಕ ಎಂದು ಪರಿಗಣಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆದೇಶದ ಕುರಿತು ವಿವರಿಸಲು ಸಮಯವಕಾಶ ನೀಡುವಂತೆ ವಕೀಲರು ಮನವಿ ಮಾಡಿದ್ದಾರೆ.

ಅಮೆರಿಕದ ಅರಿಝೋನಾ, ಇಲಿನಾಯ್ಸ್, ಒರೆಗಾನ್ ಮತ್ತು ವಾಷಿಂಗ್ಟನ್ ರಾಜ್ಯಗಳು ಟ್ರಂಪ್ ಆದೇಶದ ವಿರುದ್ದ ನ್ಯಾಯಾಲದ ಮೊರೆ ಹೋಗಿವೆ. ಈ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ನ್ಯಾಯಾಧೀಶರು ಟ್ರಂಪ್ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ತಡೆಯಾಜ್ಞೆ ಇಡೀ ದೇಶಕ್ಕೆ ಅನ್ವಯಿಸುತ್ತದೆ.

ಟ್ರಂಪ್ ಆದೇಶದ ವಿರುದ್ದ ದೇಶದ 22 ರಾಜ್ಯಗಳು, ವಲಸಿಗರ ಹಕ್ಕುಗಳ ಗುಂಪುಗಳು ಮತ್ತು ವೈಯಕ್ತಿಕ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿವೆ. ಈ ಪೈಕಿ ಜನ್ಮದತ್ತ ಯುಎಸ್‌ ಪೌರತ್ವ ಪಡೆದ ಅಟಾರ್ನಿ ಜನರಲ್‌ಗಳು, ತಮ್ಮ ಮಗು ಅಮೆರಿಕದ ನಾಗರಿಕತ್ವ ಪಡೆಯದಿರಬಹುದು ಎಂದು ಆಂತಕದಲ್ಲಿರುವ ಗರ್ಭಿಣಿಯರೂ ಸೇರಿದ್ದಾರೆ.

ವಿಚಾರಣೆ ಪ್ರಾರಂಭಿಸಿರುವ ನ್ಯಾಯಾಧೀಶ ಕಫ್ನೌರ್ ಅವರು, ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ “ಈ ಆದೇಶವು ಮನಸ್ಸನ್ನು ಗೊಂದಲಕ್ಕೆ ತಳ್ಳಿದೆ” ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ನ್ಯಾಯಾಧೀಶರ ತಡೆಯಾಜ್ಞೆ ಆದೇಶಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರದ ಪರ ವಕೀಲ ಶುಮಾಟೆ ಅವರು 14 ದಿನಗಳ ತಡೆಯಾಜ್ಞೆ ಬದಲು, ಆದೇಶವನ್ನು ವಿವರಿಸಲು ಸಮಯವಕಾಶ ನೀಡುವಂತೆ ಕೋರಿದ್ದಾರೆ.

ಜನ್ಮದತ್ತ ಪೌರತ್ವ ರದ್ದು ಸೇರಿದಂತೆ ಟ್ರಂಪ್ ಅವರು ಪದಗ್ರಹಣ ದಿನದಂದು ಸಹಿ ಮಾಡಿರುವ ಕಾರ್ಯಕಾರಿ ಆದೇಶಗಳು ಫೆಬ್ರವರಿ 19ರಿಂದ ಜಾರಿಗೆ ಬರಲಿವೆ. ಇದು ಅಮೆರಿಕದಲ್ಲಿ ಜನಿಸಿದ ಭಾರತೀಯರು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...