Homeಚಳವಳಿಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

- Advertisement -
- Advertisement -

ಇಂಜಿನಿಯರಿಂಗ್ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟುಗಳ ಮೇಲೆ ಏಕಾಏಕಿ 10 ಸಾವಿರ ರೂ.ವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ಈ ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಸಂಘಟಕರು, “ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಲ್ಕ ರಚನೆ 21-22 (ದಿನಾಂಕ : 14-11-2021)ರ ಸುತ್ತೋಲೆ ಪ್ರಕಾರ, ಈ ವರ್ಷದ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ 10 ಸಾವಿರದವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ರಾಜ್ಯದ ವಿದ್ಯಾರ್ಥಿಗಳನ್ನು ಅತ್ಯಂತ ಆತಂಕಕ್ಕೆ ತಳ್ಳಿದೆ. ಈಗಾಗಲೇ ದಾಖಲೆ ಪರಿಶೀಲನೆ ಪ್ರಕ್ರಿಯೆ ಮುಗಿದು, ಮೊದಲ ಸುತ್ತಿನ ಸೀಟು ಹಂಚಿಕೆ ಆಗಿದೆ. ಈಗ ಧಿಡೀರನೆ ಶುಲ್ಕ ಏರಿಕೆ ಮಾಡಿರುವುದು ವಿದ್ಯಾರ್ಥಿ ವಿರೋಧಿ ಮಾತ್ರವಲ್ಲ ಕಾನೂನು ಬಾಹಿರ ನಡೆಯಾಗುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯದ ಜನತೆ ಹಾಗೂ ವಿದ್ಯಾರ್ಥಿ ಸಮೂಹವು ಕೋವಿಡ್ ಸಾಂಕ್ರಾಮಿಕ ಹಾಗೂ ನಂತರದ ಲಾಕ್‌ಡೌನ್ ಸಮಯದಲ್ಲಿ ಅತ್ಯಂತ ಸಂಕಷ್ಟವನ್ನು ಎದುರಿಸಿದ್ದಾರೆ. ಸಂಸಾರವನ್ನು ತೂಗಿಸಲು ಹಲವರು ಉದ್ಯೋಗ ಅರಸಿದ್ದರೆ, ಹಲವರು ತಮ್ಮ ಪೋಷಕರು-ಸಂಬಂಧಿಕರನ್ನು ಕಳೆದುಕೊಂಡು ಈಗಲೂ ಆ ಆಘಾತದಿಂದ ಹೊರ ಬರಲು ಸಾಧ್ಯವಾಗಿಲ್ಲ. ಜನಸಾಮಾನ್ಯರ ಆದಾಯ ಕುಂಠಿತವಾಗಿದೆ. ಇದರೊಂದಿಗೆ, ಈ ಬಾರಿ ಅತ್ಯಂತ ಭೀಕರ ಮಳೆಯಿಂದಾಗಿ, ರಾಜ್ಯದಲ್ಲಿ ಕಾಫಿ ತೋಟಗಳು ಸೇರಿದಂತೆ ಹೊಲಗಳಲ್ಲಿ ಶೇ. 70 ರಷ್ಟು ಬೆಳೆ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿ ಇರುವ ರೈತ ಸಮುದಾಯದ ವಿದ್ಯಾರ್ಥಿಗಳಿಗೆ ಈ ಹಾನಿಯು ಅತ್ಯಂತ ಭೀಕರ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆರ್ಥಿಕ ಬಿಕ್ಕಟ್ಟಿನ ಜೊತೆಗೆ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಹಲವು ಏರುಪೇರುಗಳು ಸಂಭವಿಸಿವೆ. ಒಂದೆಡೆ, ಈ ಎಲ್ಲ ಸವಾಲುಗಳ ನಡುವೆ ಸಿಲುಕಿರುವ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕನಸನ್ನು ಸಂಪೂರ್ಣ ಕೈಬಿಡುವಂತಾಗಿದೆ. ಹೀಗಿರುವಾಗ, ಏಕಾಏಕಿ ಶುಲ್ಕ ಏರಿಕೆಯ ನಿರ್ಧಾರವು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಅತಿ ದೊಡ್ಡ ಪ್ರಹಾರ ಮಾಡಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ಈ ವರ್ಷ ಪದವಿ ಕೋರ್ಸಿಗೆ ಪ್ರತಿ ವರ್ಷಕ್ಕಿಂತ 50 ಸಾವಿರ ಹೆಚ್ಚಿಗೆ ವಿದ್ಯಾರ್ಥಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪಿಯುಸಿ ದಾಖಲಾತಿಯೂ ಗಣನೀಯವಾಗಿ ಏರಿಕೆ ಆಗಿದೆ. ಅಂದರೆ, ಈ ಪರಿಸ್ಥಿತಿಯು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಗೆ ಮಾಡುವ ತಕ್ಷಣದ ಅವಶ್ಯಕತೆಯನ್ನು ಬಿಂಬಿಸುತ್ತದೆ. ಸರ್ಕಾರವು ಹೆಚ್ಚುವರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕಿತ್ತು, ಹೆಚ್ಚುವರಿ ಬೋಧಕರನ್ನು ನೇಮಕಾತಿ ಮಾಡಬೇಕಿತ್ತು, ಹೆಚ್ಚುವರಿ ಮೂಲಸೌಕರ್ಯಗಳನ್ನು ಒದಗಿಸುವ ಯೋಚನೆ ನಡೆಸಬೇಕಿತ್ತು, ಹೆಚ್ಚುವರಿ ಗ್ರಂಥಾಲಯಗಳು- ಪ್ರಯೋಗಾಲಯಗಳನ್ನು ನಿರ್ಮಿಸಬೇಕಿತ್ತು ಎಂಬುದು ನಮ್ಮೆಲ್ಲರ ಅಪೇಕ್ಷೆ ಎಂದು ತಿಳಿಸಿದರು.

ಸರ್ಕಾರ ಶುಲ್ಕ ಏರಿಕೆಯ ನಿರ್ಧಾರವನ್ನು ವಾಪಸ್ ಪಡೆದು, ಮೊದಲು ಇದ್ದ ಶುಲ್ಕವನ್ನು ಮಾತ್ರ ಪಡೆಯಬೇಕು ಹಾಗೂ ಇತರೆ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಈ ಕೂಡಲೇ ನಿಲ್ಲಿಸಲು ಆದೇಶ ನೀಡಬೇಕು. ಇದರೊಂದಿಗೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹತ್ತು ಘಂಟೆ ಅವಧಿಯಷ್ಟು ಪಾಠ ಮಾಡಬೇಕು ಎಂಬ ನಿರ್ಧಾರ, ಈಗಾಗಲೇ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಮತ್ತಷ್ಟು ಒತ್ತಡಕ್ಕೆ ತಳ್ಳುತ್ತದೆ. ಹಾಗಾಗಿ, ಈ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಎಐಡಿಎಸ್‌ಒ ಮೈಸೂರು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಉಪಾಧ್ಯಕ್ಷರಾದ ಆಸಿಯಾ ಬೇಗಂ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸ್ವಾತಿ, ನಿತಿನ್, ಚೆಲುವನ್ ಹಾಗೂ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಅಮಿತ್, ಚುಕ್ಕಿ, ವಿದ್ಯಾರ್ಥಿಗಳಾದ ಹರ್ಷ, ಚಂದನಾ, ಹೇಮಲತಾ ಹಾಜರಿದ್ದರು.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...