Homeಚಳವಳಿಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

- Advertisement -
- Advertisement -

ಇಂಜಿನಿಯರಿಂಗ್ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟುಗಳ ಮೇಲೆ ಏಕಾಏಕಿ 10 ಸಾವಿರ ರೂ.ವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ಈ ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಸಂಘಟಕರು, “ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಲ್ಕ ರಚನೆ 21-22 (ದಿನಾಂಕ : 14-11-2021)ರ ಸುತ್ತೋಲೆ ಪ್ರಕಾರ, ಈ ವರ್ಷದ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ 10 ಸಾವಿರದವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ರಾಜ್ಯದ ವಿದ್ಯಾರ್ಥಿಗಳನ್ನು ಅತ್ಯಂತ ಆತಂಕಕ್ಕೆ ತಳ್ಳಿದೆ. ಈಗಾಗಲೇ ದಾಖಲೆ ಪರಿಶೀಲನೆ ಪ್ರಕ್ರಿಯೆ ಮುಗಿದು, ಮೊದಲ ಸುತ್ತಿನ ಸೀಟು ಹಂಚಿಕೆ ಆಗಿದೆ. ಈಗ ಧಿಡೀರನೆ ಶುಲ್ಕ ಏರಿಕೆ ಮಾಡಿರುವುದು ವಿದ್ಯಾರ್ಥಿ ವಿರೋಧಿ ಮಾತ್ರವಲ್ಲ ಕಾನೂನು ಬಾಹಿರ ನಡೆಯಾಗುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯದ ಜನತೆ ಹಾಗೂ ವಿದ್ಯಾರ್ಥಿ ಸಮೂಹವು ಕೋವಿಡ್ ಸಾಂಕ್ರಾಮಿಕ ಹಾಗೂ ನಂತರದ ಲಾಕ್‌ಡೌನ್ ಸಮಯದಲ್ಲಿ ಅತ್ಯಂತ ಸಂಕಷ್ಟವನ್ನು ಎದುರಿಸಿದ್ದಾರೆ. ಸಂಸಾರವನ್ನು ತೂಗಿಸಲು ಹಲವರು ಉದ್ಯೋಗ ಅರಸಿದ್ದರೆ, ಹಲವರು ತಮ್ಮ ಪೋಷಕರು-ಸಂಬಂಧಿಕರನ್ನು ಕಳೆದುಕೊಂಡು ಈಗಲೂ ಆ ಆಘಾತದಿಂದ ಹೊರ ಬರಲು ಸಾಧ್ಯವಾಗಿಲ್ಲ. ಜನಸಾಮಾನ್ಯರ ಆದಾಯ ಕುಂಠಿತವಾಗಿದೆ. ಇದರೊಂದಿಗೆ, ಈ ಬಾರಿ ಅತ್ಯಂತ ಭೀಕರ ಮಳೆಯಿಂದಾಗಿ, ರಾಜ್ಯದಲ್ಲಿ ಕಾಫಿ ತೋಟಗಳು ಸೇರಿದಂತೆ ಹೊಲಗಳಲ್ಲಿ ಶೇ. 70 ರಷ್ಟು ಬೆಳೆ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿ ಇರುವ ರೈತ ಸಮುದಾಯದ ವಿದ್ಯಾರ್ಥಿಗಳಿಗೆ ಈ ಹಾನಿಯು ಅತ್ಯಂತ ಭೀಕರ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆರ್ಥಿಕ ಬಿಕ್ಕಟ್ಟಿನ ಜೊತೆಗೆ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಹಲವು ಏರುಪೇರುಗಳು ಸಂಭವಿಸಿವೆ. ಒಂದೆಡೆ, ಈ ಎಲ್ಲ ಸವಾಲುಗಳ ನಡುವೆ ಸಿಲುಕಿರುವ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕನಸನ್ನು ಸಂಪೂರ್ಣ ಕೈಬಿಡುವಂತಾಗಿದೆ. ಹೀಗಿರುವಾಗ, ಏಕಾಏಕಿ ಶುಲ್ಕ ಏರಿಕೆಯ ನಿರ್ಧಾರವು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಅತಿ ದೊಡ್ಡ ಪ್ರಹಾರ ಮಾಡಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ಈ ವರ್ಷ ಪದವಿ ಕೋರ್ಸಿಗೆ ಪ್ರತಿ ವರ್ಷಕ್ಕಿಂತ 50 ಸಾವಿರ ಹೆಚ್ಚಿಗೆ ವಿದ್ಯಾರ್ಥಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪಿಯುಸಿ ದಾಖಲಾತಿಯೂ ಗಣನೀಯವಾಗಿ ಏರಿಕೆ ಆಗಿದೆ. ಅಂದರೆ, ಈ ಪರಿಸ್ಥಿತಿಯು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಗೆ ಮಾಡುವ ತಕ್ಷಣದ ಅವಶ್ಯಕತೆಯನ್ನು ಬಿಂಬಿಸುತ್ತದೆ. ಸರ್ಕಾರವು ಹೆಚ್ಚುವರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕಿತ್ತು, ಹೆಚ್ಚುವರಿ ಬೋಧಕರನ್ನು ನೇಮಕಾತಿ ಮಾಡಬೇಕಿತ್ತು, ಹೆಚ್ಚುವರಿ ಮೂಲಸೌಕರ್ಯಗಳನ್ನು ಒದಗಿಸುವ ಯೋಚನೆ ನಡೆಸಬೇಕಿತ್ತು, ಹೆಚ್ಚುವರಿ ಗ್ರಂಥಾಲಯಗಳು- ಪ್ರಯೋಗಾಲಯಗಳನ್ನು ನಿರ್ಮಿಸಬೇಕಿತ್ತು ಎಂಬುದು ನಮ್ಮೆಲ್ಲರ ಅಪೇಕ್ಷೆ ಎಂದು ತಿಳಿಸಿದರು.

ಸರ್ಕಾರ ಶುಲ್ಕ ಏರಿಕೆಯ ನಿರ್ಧಾರವನ್ನು ವಾಪಸ್ ಪಡೆದು, ಮೊದಲು ಇದ್ದ ಶುಲ್ಕವನ್ನು ಮಾತ್ರ ಪಡೆಯಬೇಕು ಹಾಗೂ ಇತರೆ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಈ ಕೂಡಲೇ ನಿಲ್ಲಿಸಲು ಆದೇಶ ನೀಡಬೇಕು. ಇದರೊಂದಿಗೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹತ್ತು ಘಂಟೆ ಅವಧಿಯಷ್ಟು ಪಾಠ ಮಾಡಬೇಕು ಎಂಬ ನಿರ್ಧಾರ, ಈಗಾಗಲೇ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಮತ್ತಷ್ಟು ಒತ್ತಡಕ್ಕೆ ತಳ್ಳುತ್ತದೆ. ಹಾಗಾಗಿ, ಈ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಎಐಡಿಎಸ್‌ಒ ಮೈಸೂರು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಉಪಾಧ್ಯಕ್ಷರಾದ ಆಸಿಯಾ ಬೇಗಂ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸ್ವಾತಿ, ನಿತಿನ್, ಚೆಲುವನ್ ಹಾಗೂ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಅಮಿತ್, ಚುಕ್ಕಿ, ವಿದ್ಯಾರ್ಥಿಗಳಾದ ಹರ್ಷ, ಚಂದನಾ, ಹೇಮಲತಾ ಹಾಜರಿದ್ದರು.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....