Homeಕರ್ನಾಟಕವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಮೂರು ದಿನಗಳ ನಂತರ, ವಿಧಾನಸೌಧ ಮುಂಭಾಗ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮ ಆಯೋಜಿಸಿದರೆ ಭದ್ರತೆ ಒದಗಿಸುವುದು ಸವಾಲಾಗಬಹುದು ಎಂದು ವಿಧಾನಸೌಧದ ಭದ್ರತಾ ಮುಖ್ಯಸ್ಥರು ಪತ್ರ ಬರೆದಿದ್ದರು ಎಂದು ವರದಿಯಾಗಿದೆ.

ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಬರೆದಿರುವ ಪತ್ರದಲ್ಲಿ, ಸನ್ಮಾನ ಕಾರ್ಯಕ್ರಮವು ಗಂಭೀರ ಭದ್ರತಾ ಸವಾಲುಗಳನ್ನು ಒಡ್ಡುತ್ತದೆ ಮತ್ತು ಸಾರ್ವಜನಿಕರನ್ನು ಅಪಾಯಕ್ಕೆ ಸಿಲುಕಿಸುತ್ತದೆ ಎಂದು ಎಚ್ಚರಿಸಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ವಿರೋಧದ ಹೊರತಾಗಿಯೂ, ಕಾರ್ಯಕ್ರಮವನ್ನು ನಡೆಸಲಾಯಿತು ಎಂದು ವರದಿಗಳು ಹೇಳಿವೆ.

ಜೂನ್ 4ರಂದು ಬರೆದ ಪತ್ರದಲ್ಲಿ, ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ.ಎನ್ ಕರಿಬಸವನ ಗೌಡ ಅವರು ಸಿಬ್ಬಂದಿ ಕೊರತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿನ ಸವಾಲುಗಳ ಬಗ್ಗೆ ಎಚ್ಚರಿಸಿದ್ದರು ಎನ್ನಲಾಗಿದೆ.

“ಆರ್‌ಸಿಬಿಗೆ ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ನಾವು ಗ್ರ್ಯಾಂಡ್ ಸ್ಟೆಪ್‌ಗಳ ಮೇಲೆ ಕಾರ್ಯಕ್ರಮವನ್ನು ಆಯೋಜಿಸಿದರೆ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ವಿಧಾನಸೌಧದಲ್ಲಿ ಸೇರಬಹುದು. ಭದ್ರತಾ ಸಿಬ್ಬಂದಿ ಕೊರತೆಯಿರುವುದರಿಂದ, ಸರಿಯಾದ ಬಂದೋಬಸ್ತ್ ವ್ಯವಸ್ಥೆ ಮಾಡುವುದು ಸವಾಲಿನ ಕೆಲಸವಾಗಿರುತ್ತದೆ” ಎಂದು ಕರಿಬಸವನ ಗೌಡ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಿ. ಸತ್ಯವತಿ ಮತ್ತು ಇತರ ಉನ್ನತ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು ಎಂದು ವರದಿಗಳು ವಿವರಿಸಿವೆ.

ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಜೂನ್ 3ರಂದು ಬೆಳಿಗ್ಗೆ 4 ಗಂಟೆಯವರೆಗೆ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಆ ಬಳಿಕ ಕಡಿಮೆ ಅವಧಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ (ಕೇಂದ್ರ) ಶೇಖರ್ ಎಚ್.ಟಿ ಮತ್ತು ಇತರ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಕಾರ್ಯದರ್ಶಿ ಮತ್ತು ಖಜಾಂಚಿ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಕಾಲ್ತುಳಿತ ದುರಂತ ನಡೆದ ದಿನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಸರ್ಕಾರದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದೆವು. ಅಲ್ಲಿ 1 ಲಕ್ಷದಷ್ಟು ಜನರು ಸೇರಿದ್ದರು. ಆದರೂ, ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕಾಲ್ತುಳಿತ ಅವಘಡ ನಡೆದಿರುವುದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ, ಅಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿರಲಿಲ್ಲ ಎಂದಿದ್ದರು.

ವಿಧಾನಸೌಧದ ಮುಂಭಾಗದ ಕಾರ್ಯಕ್ರಮದ ವೇಳೆ ಆರ್‌ಸಿಬಿ ಅಭಿಮಾನಿಗಳು ಭದ್ರತಾ ಬೇಲಿಯನ್ನು ದಾಟಿ ಒಳ ಹೋಗಿದ್ದರು. ಮುಂಭಾಗದ ಗಣ್ಯರ ಪ್ರತಿಮೆ, ಮೆಟ್ರೋ ಸ್ಟೇಷನ್ ಛಾವಣಿ, ದಾರಿದೀಪ, ಮರ, ರಸ್ತೆಯಲ್ಲಿ ತೆರಳುತ್ತಿದ್ದ ವಾಹನಗಳು, ವಿಶೇಷವಾಗಿ ಹೈಕೋರ್ಟ್ ಕಟ್ಟಡದ ಮೇಲೇರಿದ್ದರು. ಪರಿಣಾಮ, ವಿಧಾನಸೌಧದ ಮುಂಭಾಗದ ಭದ್ರತಾ ಬೇಲಿ, ಆಲಂಕಾರಿಕ ಹೂವಿನಗಿಡಗಳಿಗೆ ಹಾನಿಯಾಗಿದೆ. ಹೈಕೋರ್ಟ್‌ನ ಭದ್ರತೆ ಉಲ್ಲಂಘನೆಯಾಗಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...