Homeಕರ್ನಾಟಕವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಮೂರು ದಿನಗಳ ನಂತರ, ವಿಧಾನಸೌಧ ಮುಂಭಾಗ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮ ಆಯೋಜಿಸಿದರೆ ಭದ್ರತೆ ಒದಗಿಸುವುದು ಸವಾಲಾಗಬಹುದು ಎಂದು ವಿಧಾನಸೌಧದ ಭದ್ರತಾ ಮುಖ್ಯಸ್ಥರು ಪತ್ರ ಬರೆದಿದ್ದರು ಎಂದು ವರದಿಯಾಗಿದೆ.

ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಬರೆದಿರುವ ಪತ್ರದಲ್ಲಿ, ಸನ್ಮಾನ ಕಾರ್ಯಕ್ರಮವು ಗಂಭೀರ ಭದ್ರತಾ ಸವಾಲುಗಳನ್ನು ಒಡ್ಡುತ್ತದೆ ಮತ್ತು ಸಾರ್ವಜನಿಕರನ್ನು ಅಪಾಯಕ್ಕೆ ಸಿಲುಕಿಸುತ್ತದೆ ಎಂದು ಎಚ್ಚರಿಸಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ವಿರೋಧದ ಹೊರತಾಗಿಯೂ, ಕಾರ್ಯಕ್ರಮವನ್ನು ನಡೆಸಲಾಯಿತು ಎಂದು ವರದಿಗಳು ಹೇಳಿವೆ.

ಜೂನ್ 4ರಂದು ಬರೆದ ಪತ್ರದಲ್ಲಿ, ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ.ಎನ್ ಕರಿಬಸವನ ಗೌಡ ಅವರು ಸಿಬ್ಬಂದಿ ಕೊರತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿನ ಸವಾಲುಗಳ ಬಗ್ಗೆ ಎಚ್ಚರಿಸಿದ್ದರು ಎನ್ನಲಾಗಿದೆ.

“ಆರ್‌ಸಿಬಿಗೆ ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ನಾವು ಗ್ರ್ಯಾಂಡ್ ಸ್ಟೆಪ್‌ಗಳ ಮೇಲೆ ಕಾರ್ಯಕ್ರಮವನ್ನು ಆಯೋಜಿಸಿದರೆ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ವಿಧಾನಸೌಧದಲ್ಲಿ ಸೇರಬಹುದು. ಭದ್ರತಾ ಸಿಬ್ಬಂದಿ ಕೊರತೆಯಿರುವುದರಿಂದ, ಸರಿಯಾದ ಬಂದೋಬಸ್ತ್ ವ್ಯವಸ್ಥೆ ಮಾಡುವುದು ಸವಾಲಿನ ಕೆಲಸವಾಗಿರುತ್ತದೆ” ಎಂದು ಕರಿಬಸವನ ಗೌಡ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಿ. ಸತ್ಯವತಿ ಮತ್ತು ಇತರ ಉನ್ನತ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು ಎಂದು ವರದಿಗಳು ವಿವರಿಸಿವೆ.

ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಜೂನ್ 3ರಂದು ಬೆಳಿಗ್ಗೆ 4 ಗಂಟೆಯವರೆಗೆ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಆ ಬಳಿಕ ಕಡಿಮೆ ಅವಧಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ (ಕೇಂದ್ರ) ಶೇಖರ್ ಎಚ್.ಟಿ ಮತ್ತು ಇತರ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಕಾರ್ಯದರ್ಶಿ ಮತ್ತು ಖಜಾಂಚಿ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಕಾಲ್ತುಳಿತ ದುರಂತ ನಡೆದ ದಿನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಸರ್ಕಾರದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದೆವು. ಅಲ್ಲಿ 1 ಲಕ್ಷದಷ್ಟು ಜನರು ಸೇರಿದ್ದರು. ಆದರೂ, ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕಾಲ್ತುಳಿತ ಅವಘಡ ನಡೆದಿರುವುದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ, ಅಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿರಲಿಲ್ಲ ಎಂದಿದ್ದರು.

ವಿಧಾನಸೌಧದ ಮುಂಭಾಗದ ಕಾರ್ಯಕ್ರಮದ ವೇಳೆ ಆರ್‌ಸಿಬಿ ಅಭಿಮಾನಿಗಳು ಭದ್ರತಾ ಬೇಲಿಯನ್ನು ದಾಟಿ ಒಳ ಹೋಗಿದ್ದರು. ಮುಂಭಾಗದ ಗಣ್ಯರ ಪ್ರತಿಮೆ, ಮೆಟ್ರೋ ಸ್ಟೇಷನ್ ಛಾವಣಿ, ದಾರಿದೀಪ, ಮರ, ರಸ್ತೆಯಲ್ಲಿ ತೆರಳುತ್ತಿದ್ದ ವಾಹನಗಳು, ವಿಶೇಷವಾಗಿ ಹೈಕೋರ್ಟ್ ಕಟ್ಟಡದ ಮೇಲೇರಿದ್ದರು. ಪರಿಣಾಮ, ವಿಧಾನಸೌಧದ ಮುಂಭಾಗದ ಭದ್ರತಾ ಬೇಲಿ, ಆಲಂಕಾರಿಕ ಹೂವಿನಗಿಡಗಳಿಗೆ ಹಾನಿಯಾಗಿದೆ. ಹೈಕೋರ್ಟ್‌ನ ಭದ್ರತೆ ಉಲ್ಲಂಘನೆಯಾಗಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....