Homeಮುಖಪುಟಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

- Advertisement -
- Advertisement -

ಮೂಢನಂಬಿಕೆಗೆ ಬಲಿಯಾಗಬೇಡಿ. ಪಿತೃಪ್ರಾಧ್ಯನತೆಯ ಎಲ್ಲಾ ಮೌಲ್ಯಗಳನ್ನು ನಮ್ಮ ತಲೆಯಲ್ಲಿ ತುಂಬುತ್ತಿರುವುದೇ ಮೂಢನಂಬಿಕೆಗಳ ಮೂಲಕ. ಇದರಿಂದ ತಾವು ಮಾಡಬೇಕೆನ್ನುವ ಕೆಟ್ಟ ಕೆಲಸಗಳನ್ನು ಮಹಿಳೆಯರ ಮೂಲಕ ಮಾಡಿಸಲಾಗುತ್ತದೆ. ಇದರಿಂದ ನಮ್ಮನ್ನು ನೂರು-ಐನೂರು ವರ್ಷಕ್ಕೆ ಹಿಂದಕ್ಕೆ ತಳ್ಳಲ್ಲಿಕ್ಕೆ ಇದನ್ನು ಬಳಸುತ್ತಿದ್ದಾರೆ. ಹಾಗಾಗಿ ಮೂಡನಂಬಿಕೆಗಳಿAದ ದೂರ ಇರಬೇಕೆಂದು ಹಿರಿಯ ವಕೀಲೆ ಮತ್ತು ಲೇಖಕಿಯಾದ ಬಾನು ಮುಷ್ತಕ್ ಕರೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

ಕುಟುಂಬದ ಒಳಗೆ ಯಾರು ದೌರ್ಜನ್ಯ ನಡೆಸುತ್ತಾರೆ? ಎಂಬ ಪ್ರಶ್ನೆಗಳು ಬಹಳ ಬರುತ್ತವೆ. ಅಪ್ಪನೇ ತನ್ನ ಮಗಳನ್ನು ಅತ್ಯಾಚಾರ ಮಾಡಿರುವ ಹಲವು ಪ್ರಕರಣಗಳು ನನ್ನ ಮುಂದಿವೆ. ಇಂದು ಹಲವು ಸಾವಿರ ಪಟ್ಟು ಕೌಟುಂಬಿಕ ಹಿಂಸೆ ಜಾಸ್ತಿಯಾಗಿದೆ. ಮಗು ಹುಟ್ಟುವುದಕ್ಕೆ ಮುಂಚಿತವಾಗಿಯೇ ಹತ್ಯೆ ಮಾಡುವುದು ಇಂದು ಒಂದು ಸಾವಿರ ಕೋಟಿ ಮೌಲ್ಯದ ದಂಧೆಯಾಗಿದೆ. ಒಬ್ಬ ಹೆಣ್ಣು ಮಗಳನ್ನು ಹುಟ್ಟುವುದಕ್ಕೆ ಅವಕಾಶ ಕೊಡದ ಸಂದರ್ಭದಲ್ಲಿ ಇನ್ನು ಹುಟ್ಟಿದ ಮೇಲೆ ಯಾವ ಯಾವ ರೀತಿ ಹಿಂಸೆ ಕೊಡುತ್ತಾರೆ ನೀವೆ ಯೋಚಿಸಿ? ಎಂದು ಅಭಿಪ್ರಾಯಪಟ್ಟರು.

ಈ ವಿಭಿನ್ನವಾದ ಹಿಂಸೆಗಳಲ್ಲಿ ಮಹಿಳೆಯರನ್ನು ದ್ವಿತಿಯ ದರ್ಜೆಯ ಪ್ರಜೆಯನ್ನಾಗಿ ಮಾಡಿ ಹತ್ತಿಕ್ಕುವ ವ್ಯವಸ್ಥೆ ಇಂದಿಗೂ ಕೂಡ ಜಾರಿಯಲಿದೆ. ನಮ್ಮ ಸಮಾಜ ಆಧುನಿಕವಾದಷ್ಟು ಕೂಡ ಮತೀಯವಾಗಿ ನರಳುತ್ತಿದೆ ಎಂದರು.

ಸ್ತ್ರೀ ಶಿಕ್ಷಣ ನಿರಾಕರಣೆ, ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ವಿವಾಹ ಸಂಬಂಧಿತ ನೋಂದಣಿಗೆ ವಿರೋಧ, ಪರಸ್ಪರ ಒಪ್ಪಿಗೆಯ ಮೇಲೆ ವಿಚ್ಛೇದನಕ್ಕೆ ವಿರೋಧ, ಆಸ್ತಿ ಹಕ್ಕು, ಅತ್ಯಾಚಾರ.. ಮರ್ಯಾದೆಹೀನ ಹತ್ಯೆ.. ಇವೆಲ್ಲವೂ ಕೌಟುಂಬಿಕ ಹಿಂಸೆ ಕೆಳಗೆ ಬರುತ್ತವೆ ಆದರೆ ಆಧುನಿಕ ಸಮಾಜ ಇದೆಲ್ಲವನ್ನು ಗಮನಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಮಂಡ್ಯ ಜಿಲ್ಲೆಯ ಸ್ಮೃತಿ ಎಂಬ ಹೆಣ್ಣು ಮಗಳು ನನ್ನ ಬರಹಗಳ ಕುರಿತು ಸಂಶೋಧನೆ ನಡೆಸಿದ್ದಳು. ಬಹಳ ಪ್ರತಿಭಾವಂತಳಾದ ಆಕೆ ದಲಿತ ಯುವಕನ ಜೊತೆ ಮದುವೆಯಾಗಿದ್ದಕ್ಕೆ ಕೊಲೆ ಮಾಡಲಾಗಿದೆ. ಅಂದರೆ ಮರ್ಯಾದೇಹೀನ ಹತ್ಯೆ ಇಂದಿಗೂ ಚಾಲ್ತಿಯಲ್ಲಿರುವುದು ದುರಂತ ಎಂದರು.

2005 ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಬಂತು. ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಒಡಂಬಡಿಕೆಗಳ ಅಂಗವಾಗಿ ಕಾನೂನಾಗಿದೆ. ಇಂದಿರಾ ಜೈಸಿಂಗ್ ಎಂಬ ಹಿರಿಯ ವಕೀಲೆ, ಸಾಮಾಜಿಕ ಹೋರಾಟಗಾರ್ತಿ ಈ ಕಾಯ್ದೆಯನ್ನು ಬೆಂಬಲಿಸಿದ್ದಕ್ಕೆ ಆಕೆಯನ್ನು ಟ್ರೋಲ್ ಮಾಡಲಾಯಿತು.. ಇದು ನಮ್ಮ ಸಮಾಜ ಮಹಿಳೆಯರ ಕುರಿತು ವರ್ತಿಸುವ ಪರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಿಂಗಾನುಪಾತದಲ್ಲಿ ಈಗ ಬಹಳ ತಾರತಮ್ಯವುಂಟಾಗುತ್ತಿದ್ದು, ದಿನೇ ದಿನೇ ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿಯುತ್ತಿದೆ. 498ಎ ಕಾಯ್ದೆಯ ಆಧಾರದಲ್ಲಿ ಸುಳ್ಳು ಕೇಸುಗಳು ದಾಖಲಾಗುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂಗತೆ ಡಿವೈಎಸ್ಪಿ ಒಪ್ಪಿಗೆ ನೀಡಿದ ನಂತರವೇ ಕೇಸು ದಾಖಲಿಸಬೇಕೆಂಬ ನಿಯಮ ಬಂದಿತು. ಬಹಳಷ್ಟು ಹೋರಾಟಗಳ ನಂತರ ಅದನ್ನು ಹಿಂತೆಗೆದುಕೊಳ್ಳಲಾಗಿದೆ. ಅಂದರೆ ಈ ಕಾನೂನುಗಳು ದುರುಪಯೋಗವಾಗುತ್ತಿವೆ ಎಂಬ ಆರೋಪಗಳಿವೆ. ಈ ಕಾನೂನುಗಳ ಅಡಿಯಲ್ಲಿ ಸುಳ್ಳು ಕೇಸು ಹಾಕಿದರೆ ಕಾನೂನು ಉಲ್ಟಾ ಹೊಡೆದು ನೈಜ ಹಿಂಸೆ ಅನುಭವಿಸದವರಿಗೂ ನ್ಯಾಯ ಸಿಗುವುದು ದುಸ್ತರವಾಗುತ್ತದೆ. ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಮನವಿ ಮಾಡಿದರು.

ಔದ್ಯೋಗಿಕ ನೆಲೆಯಲ್ಲಿ ಮಹಿಳಾ ಬದುಕಿನ ಪಲ್ಲಟಗಳು ವಿಷಯದ ಕುರಿತು ಸಾಮಾಜಿಕ ಕಾರ್ಯಕರ್ತೆ ಎಸ್.ಸತ್ಯಾರವರು ಮಾತನಾಡಿ “ಸ್ವಾತಂತ್ರ್ಯವೇ ಅಭಿವೃದ್ದಿ ಎಂದು ಅರ್ಥಶಾಸ್ತ್ರಜ್ಞ ಅಮರ್ತ್ಯಸೆನ್ ಹೇಳಿದ್ದಾರೆ. ವಿಶ್ವಸಂಸ್ಥೆಯು ನಾನು ಸಮಾನತೆಯ ತಲೆಮಾರಿನವಳು ಎಂಬ ಘೋಷಣೆ ನೀಡಿದೆ. ಎಲ್ಲರೂ ಸಮಾನರು ವಿಶ್ವ ಆರ್ಥಿಕ ವೇದಿಕೆ ನೀಡಿದೆ. ಆದರೆ ಇದೇ ಪರಿಸ್ಥಿತಿ ಮುಂದುವರೆದರೆ ಔದ್ಯೋಗಿಕ ಕ್ಷೇತ್ರದಲ್ಲಿ ಸಮಾನತೆ ಬರಬೇಕಾದರೆ 108 ವರ್ಷಗಳು ಬೇಕು ಸಂಶೋಧನಾ ವರದಿಗಳು ಹೇಳುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.
187 ರಾಷ್ಟ್ರಗಳು ಲಿಂಗತಾರತಮ್ಯವನ್ನು ನಿಯಂತ್ರಿಸಲು ಕಾಯ್ದೆ ಕಾನೂನುಗಳನ್ನು ರೂಪಿಸಿವೆ. ಲಿಂಗ ತಾರತಮ್ಯದ ವಿಚಾರದಲ್ಲಿ ಭಾರತ ಕೇವಲ 25% ಮಾತ್ರ ಶ್ರಮಿಸಿದೆ. ಸಮಾನ ವೇತನ ಎಂಬದು ಇನ್ನು ಮಹಿಳೆಯರ ಪಾಲಿಗೆ ಕನಸಿನ ಮಾತಾಗಿದೆ. ಕೆಲಸದ ಸ್ಥಳದಲ್ಲಿ ಹಿಂಸೆ ಮುಂದುವರೆದಿದೆ.

ವೇತನಸಹಿತ ಕೆಲಸ ಮತ್ತು ವೇತನ ರಹಿತ ಕೆಲಸ ಎಂಬ ಎರಡು ವಿಭಾಗಗಳಿವೆ.. ಪಾಲನೆ ಮತ್ತು ಪೋಷಣೆ ಮಾಡುವ ಕೆಲಸ ಅನುತ್ಪಾದಕ ಕ್ಷೇತ್ರ ಎನ್ನಲಾಗುತ್ತಿದೆ. ಅಂಗನವಾಡಿಯಿಂದ ಹಿಡಿದು ಐಟಿ ಕಂಪನಿಗಳನ್ನು ಮಕ್ಕಳನ್ನು ನೋಡಿಕೊಳ್ಳುವ, ರೋಗಿಗಳನ್ನು, ವಿಕಲಚೇತನರನ್ನು ನೋಡಿಕೊಳ್ಳುವ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ. ಇದನ್ನು ಮಾನವೀಯ ಕೆಲಸವಾಗಿದ್ದರೆ ಉತ್ಪಾದನಾ ಕ್ಷೇತ್ರವಲ್ಲವೇ? ಇದಕ್ಕೆ ಏಕೆ ಮೌಲ್ಯವನ್ನು ನಿಗಧಿಪಡಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಇಂದು ಉದ್ಯೋಗಗಳು ಮಹಿಳೆಯರಿಗೆ ಆಯ್ಕೆಯಾಗಿಲ್ಲ ಬದಲಿಗೆ ಹೇರಿಕೆಯಾಗಿವೆ. ತಂತ್ರಜ್ಞಾನ ಸ್ಪಲ್ಪ ಮಟ್ಟಿಕೆ ಮಹಿಳೆಯರನ್ನು ಸುಧಾರಿಸಿದರೂ ಸಹ ಅವರನ್ನು ಮತ್ತೆ ಅವರನ್ನು ಕೆಲವೇ ಕ್ಷೇತ್ರಗಳಿಗೆ ಸೀಮಿತಗೊಳಿಸಿತು. ಖಾಸಗೀಕರಣ ಮತ್ತು ಜಾಗತೀಕರಣದ ಜೊತೆಗೆ ಕೋಮುವಾದ ಮತ್ತು ದೌರ್ಜನ್ಯಗಳು ಮಹಿಳೆಯನ್ನು ಮುಂದೆ ಹೋಗದಂತೆ ತಡೆಹಿಡಿಯಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾಮಾಜಿಕ ಮತ್ತು ಸಾಮಾಜಿಕ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಸಬಿತಾ ಬನ್ನಾಡಿಯವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನ ತೆಗೆದುಕೊಳ್ಳಲು ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...