Homeಮುಖಪುಟಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

- Advertisement -
- Advertisement -

ಮೂಢನಂಬಿಕೆಗೆ ಬಲಿಯಾಗಬೇಡಿ. ಪಿತೃಪ್ರಾಧ್ಯನತೆಯ ಎಲ್ಲಾ ಮೌಲ್ಯಗಳನ್ನು ನಮ್ಮ ತಲೆಯಲ್ಲಿ ತುಂಬುತ್ತಿರುವುದೇ ಮೂಢನಂಬಿಕೆಗಳ ಮೂಲಕ. ಇದರಿಂದ ತಾವು ಮಾಡಬೇಕೆನ್ನುವ ಕೆಟ್ಟ ಕೆಲಸಗಳನ್ನು ಮಹಿಳೆಯರ ಮೂಲಕ ಮಾಡಿಸಲಾಗುತ್ತದೆ. ಇದರಿಂದ ನಮ್ಮನ್ನು ನೂರು-ಐನೂರು ವರ್ಷಕ್ಕೆ ಹಿಂದಕ್ಕೆ ತಳ್ಳಲ್ಲಿಕ್ಕೆ ಇದನ್ನು ಬಳಸುತ್ತಿದ್ದಾರೆ. ಹಾಗಾಗಿ ಮೂಡನಂಬಿಕೆಗಳಿAದ ದೂರ ಇರಬೇಕೆಂದು ಹಿರಿಯ ವಕೀಲೆ ಮತ್ತು ಲೇಖಕಿಯಾದ ಬಾನು ಮುಷ್ತಕ್ ಕರೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

ಕುಟುಂಬದ ಒಳಗೆ ಯಾರು ದೌರ್ಜನ್ಯ ನಡೆಸುತ್ತಾರೆ? ಎಂಬ ಪ್ರಶ್ನೆಗಳು ಬಹಳ ಬರುತ್ತವೆ. ಅಪ್ಪನೇ ತನ್ನ ಮಗಳನ್ನು ಅತ್ಯಾಚಾರ ಮಾಡಿರುವ ಹಲವು ಪ್ರಕರಣಗಳು ನನ್ನ ಮುಂದಿವೆ. ಇಂದು ಹಲವು ಸಾವಿರ ಪಟ್ಟು ಕೌಟುಂಬಿಕ ಹಿಂಸೆ ಜಾಸ್ತಿಯಾಗಿದೆ. ಮಗು ಹುಟ್ಟುವುದಕ್ಕೆ ಮುಂಚಿತವಾಗಿಯೇ ಹತ್ಯೆ ಮಾಡುವುದು ಇಂದು ಒಂದು ಸಾವಿರ ಕೋಟಿ ಮೌಲ್ಯದ ದಂಧೆಯಾಗಿದೆ. ಒಬ್ಬ ಹೆಣ್ಣು ಮಗಳನ್ನು ಹುಟ್ಟುವುದಕ್ಕೆ ಅವಕಾಶ ಕೊಡದ ಸಂದರ್ಭದಲ್ಲಿ ಇನ್ನು ಹುಟ್ಟಿದ ಮೇಲೆ ಯಾವ ಯಾವ ರೀತಿ ಹಿಂಸೆ ಕೊಡುತ್ತಾರೆ ನೀವೆ ಯೋಚಿಸಿ? ಎಂದು ಅಭಿಪ್ರಾಯಪಟ್ಟರು.

ಈ ವಿಭಿನ್ನವಾದ ಹಿಂಸೆಗಳಲ್ಲಿ ಮಹಿಳೆಯರನ್ನು ದ್ವಿತಿಯ ದರ್ಜೆಯ ಪ್ರಜೆಯನ್ನಾಗಿ ಮಾಡಿ ಹತ್ತಿಕ್ಕುವ ವ್ಯವಸ್ಥೆ ಇಂದಿಗೂ ಕೂಡ ಜಾರಿಯಲಿದೆ. ನಮ್ಮ ಸಮಾಜ ಆಧುನಿಕವಾದಷ್ಟು ಕೂಡ ಮತೀಯವಾಗಿ ನರಳುತ್ತಿದೆ ಎಂದರು.

ಸ್ತ್ರೀ ಶಿಕ್ಷಣ ನಿರಾಕರಣೆ, ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ವಿವಾಹ ಸಂಬಂಧಿತ ನೋಂದಣಿಗೆ ವಿರೋಧ, ಪರಸ್ಪರ ಒಪ್ಪಿಗೆಯ ಮೇಲೆ ವಿಚ್ಛೇದನಕ್ಕೆ ವಿರೋಧ, ಆಸ್ತಿ ಹಕ್ಕು, ಅತ್ಯಾಚಾರ.. ಮರ್ಯಾದೆಹೀನ ಹತ್ಯೆ.. ಇವೆಲ್ಲವೂ ಕೌಟುಂಬಿಕ ಹಿಂಸೆ ಕೆಳಗೆ ಬರುತ್ತವೆ ಆದರೆ ಆಧುನಿಕ ಸಮಾಜ ಇದೆಲ್ಲವನ್ನು ಗಮನಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಮಂಡ್ಯ ಜಿಲ್ಲೆಯ ಸ್ಮೃತಿ ಎಂಬ ಹೆಣ್ಣು ಮಗಳು ನನ್ನ ಬರಹಗಳ ಕುರಿತು ಸಂಶೋಧನೆ ನಡೆಸಿದ್ದಳು. ಬಹಳ ಪ್ರತಿಭಾವಂತಳಾದ ಆಕೆ ದಲಿತ ಯುವಕನ ಜೊತೆ ಮದುವೆಯಾಗಿದ್ದಕ್ಕೆ ಕೊಲೆ ಮಾಡಲಾಗಿದೆ. ಅಂದರೆ ಮರ್ಯಾದೇಹೀನ ಹತ್ಯೆ ಇಂದಿಗೂ ಚಾಲ್ತಿಯಲ್ಲಿರುವುದು ದುರಂತ ಎಂದರು.

2005 ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಬಂತು. ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಒಡಂಬಡಿಕೆಗಳ ಅಂಗವಾಗಿ ಕಾನೂನಾಗಿದೆ. ಇಂದಿರಾ ಜೈಸಿಂಗ್ ಎಂಬ ಹಿರಿಯ ವಕೀಲೆ, ಸಾಮಾಜಿಕ ಹೋರಾಟಗಾರ್ತಿ ಈ ಕಾಯ್ದೆಯನ್ನು ಬೆಂಬಲಿಸಿದ್ದಕ್ಕೆ ಆಕೆಯನ್ನು ಟ್ರೋಲ್ ಮಾಡಲಾಯಿತು.. ಇದು ನಮ್ಮ ಸಮಾಜ ಮಹಿಳೆಯರ ಕುರಿತು ವರ್ತಿಸುವ ಪರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಿಂಗಾನುಪಾತದಲ್ಲಿ ಈಗ ಬಹಳ ತಾರತಮ್ಯವುಂಟಾಗುತ್ತಿದ್ದು, ದಿನೇ ದಿನೇ ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿಯುತ್ತಿದೆ. 498ಎ ಕಾಯ್ದೆಯ ಆಧಾರದಲ್ಲಿ ಸುಳ್ಳು ಕೇಸುಗಳು ದಾಖಲಾಗುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂಗತೆ ಡಿವೈಎಸ್ಪಿ ಒಪ್ಪಿಗೆ ನೀಡಿದ ನಂತರವೇ ಕೇಸು ದಾಖಲಿಸಬೇಕೆಂಬ ನಿಯಮ ಬಂದಿತು. ಬಹಳಷ್ಟು ಹೋರಾಟಗಳ ನಂತರ ಅದನ್ನು ಹಿಂತೆಗೆದುಕೊಳ್ಳಲಾಗಿದೆ. ಅಂದರೆ ಈ ಕಾನೂನುಗಳು ದುರುಪಯೋಗವಾಗುತ್ತಿವೆ ಎಂಬ ಆರೋಪಗಳಿವೆ. ಈ ಕಾನೂನುಗಳ ಅಡಿಯಲ್ಲಿ ಸುಳ್ಳು ಕೇಸು ಹಾಕಿದರೆ ಕಾನೂನು ಉಲ್ಟಾ ಹೊಡೆದು ನೈಜ ಹಿಂಸೆ ಅನುಭವಿಸದವರಿಗೂ ನ್ಯಾಯ ಸಿಗುವುದು ದುಸ್ತರವಾಗುತ್ತದೆ. ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಮನವಿ ಮಾಡಿದರು.

ಔದ್ಯೋಗಿಕ ನೆಲೆಯಲ್ಲಿ ಮಹಿಳಾ ಬದುಕಿನ ಪಲ್ಲಟಗಳು ವಿಷಯದ ಕುರಿತು ಸಾಮಾಜಿಕ ಕಾರ್ಯಕರ್ತೆ ಎಸ್.ಸತ್ಯಾರವರು ಮಾತನಾಡಿ “ಸ್ವಾತಂತ್ರ್ಯವೇ ಅಭಿವೃದ್ದಿ ಎಂದು ಅರ್ಥಶಾಸ್ತ್ರಜ್ಞ ಅಮರ್ತ್ಯಸೆನ್ ಹೇಳಿದ್ದಾರೆ. ವಿಶ್ವಸಂಸ್ಥೆಯು ನಾನು ಸಮಾನತೆಯ ತಲೆಮಾರಿನವಳು ಎಂಬ ಘೋಷಣೆ ನೀಡಿದೆ. ಎಲ್ಲರೂ ಸಮಾನರು ವಿಶ್ವ ಆರ್ಥಿಕ ವೇದಿಕೆ ನೀಡಿದೆ. ಆದರೆ ಇದೇ ಪರಿಸ್ಥಿತಿ ಮುಂದುವರೆದರೆ ಔದ್ಯೋಗಿಕ ಕ್ಷೇತ್ರದಲ್ಲಿ ಸಮಾನತೆ ಬರಬೇಕಾದರೆ 108 ವರ್ಷಗಳು ಬೇಕು ಸಂಶೋಧನಾ ವರದಿಗಳು ಹೇಳುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.
187 ರಾಷ್ಟ್ರಗಳು ಲಿಂಗತಾರತಮ್ಯವನ್ನು ನಿಯಂತ್ರಿಸಲು ಕಾಯ್ದೆ ಕಾನೂನುಗಳನ್ನು ರೂಪಿಸಿವೆ. ಲಿಂಗ ತಾರತಮ್ಯದ ವಿಚಾರದಲ್ಲಿ ಭಾರತ ಕೇವಲ 25% ಮಾತ್ರ ಶ್ರಮಿಸಿದೆ. ಸಮಾನ ವೇತನ ಎಂಬದು ಇನ್ನು ಮಹಿಳೆಯರ ಪಾಲಿಗೆ ಕನಸಿನ ಮಾತಾಗಿದೆ. ಕೆಲಸದ ಸ್ಥಳದಲ್ಲಿ ಹಿಂಸೆ ಮುಂದುವರೆದಿದೆ.

ವೇತನಸಹಿತ ಕೆಲಸ ಮತ್ತು ವೇತನ ರಹಿತ ಕೆಲಸ ಎಂಬ ಎರಡು ವಿಭಾಗಗಳಿವೆ.. ಪಾಲನೆ ಮತ್ತು ಪೋಷಣೆ ಮಾಡುವ ಕೆಲಸ ಅನುತ್ಪಾದಕ ಕ್ಷೇತ್ರ ಎನ್ನಲಾಗುತ್ತಿದೆ. ಅಂಗನವಾಡಿಯಿಂದ ಹಿಡಿದು ಐಟಿ ಕಂಪನಿಗಳನ್ನು ಮಕ್ಕಳನ್ನು ನೋಡಿಕೊಳ್ಳುವ, ರೋಗಿಗಳನ್ನು, ವಿಕಲಚೇತನರನ್ನು ನೋಡಿಕೊಳ್ಳುವ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ. ಇದನ್ನು ಮಾನವೀಯ ಕೆಲಸವಾಗಿದ್ದರೆ ಉತ್ಪಾದನಾ ಕ್ಷೇತ್ರವಲ್ಲವೇ? ಇದಕ್ಕೆ ಏಕೆ ಮೌಲ್ಯವನ್ನು ನಿಗಧಿಪಡಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಇಂದು ಉದ್ಯೋಗಗಳು ಮಹಿಳೆಯರಿಗೆ ಆಯ್ಕೆಯಾಗಿಲ್ಲ ಬದಲಿಗೆ ಹೇರಿಕೆಯಾಗಿವೆ. ತಂತ್ರಜ್ಞಾನ ಸ್ಪಲ್ಪ ಮಟ್ಟಿಕೆ ಮಹಿಳೆಯರನ್ನು ಸುಧಾರಿಸಿದರೂ ಸಹ ಅವರನ್ನು ಮತ್ತೆ ಅವರನ್ನು ಕೆಲವೇ ಕ್ಷೇತ್ರಗಳಿಗೆ ಸೀಮಿತಗೊಳಿಸಿತು. ಖಾಸಗೀಕರಣ ಮತ್ತು ಜಾಗತೀಕರಣದ ಜೊತೆಗೆ ಕೋಮುವಾದ ಮತ್ತು ದೌರ್ಜನ್ಯಗಳು ಮಹಿಳೆಯನ್ನು ಮುಂದೆ ಹೋಗದಂತೆ ತಡೆಹಿಡಿಯಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾಮಾಜಿಕ ಮತ್ತು ಸಾಮಾಜಿಕ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಸಬಿತಾ ಬನ್ನಾಡಿಯವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...