Homeಮುಖಪುಟಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

- Advertisement -
- Advertisement -

ಮೂಢನಂಬಿಕೆಗೆ ಬಲಿಯಾಗಬೇಡಿ. ಪಿತೃಪ್ರಾಧ್ಯನತೆಯ ಎಲ್ಲಾ ಮೌಲ್ಯಗಳನ್ನು ನಮ್ಮ ತಲೆಯಲ್ಲಿ ತುಂಬುತ್ತಿರುವುದೇ ಮೂಢನಂಬಿಕೆಗಳ ಮೂಲಕ. ಇದರಿಂದ ತಾವು ಮಾಡಬೇಕೆನ್ನುವ ಕೆಟ್ಟ ಕೆಲಸಗಳನ್ನು ಮಹಿಳೆಯರ ಮೂಲಕ ಮಾಡಿಸಲಾಗುತ್ತದೆ. ಇದರಿಂದ ನಮ್ಮನ್ನು ನೂರು-ಐನೂರು ವರ್ಷಕ್ಕೆ ಹಿಂದಕ್ಕೆ ತಳ್ಳಲ್ಲಿಕ್ಕೆ ಇದನ್ನು ಬಳಸುತ್ತಿದ್ದಾರೆ. ಹಾಗಾಗಿ ಮೂಡನಂಬಿಕೆಗಳಿAದ ದೂರ ಇರಬೇಕೆಂದು ಹಿರಿಯ ವಕೀಲೆ ಮತ್ತು ಲೇಖಕಿಯಾದ ಬಾನು ಮುಷ್ತಕ್ ಕರೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

ಕುಟುಂಬದ ಒಳಗೆ ಯಾರು ದೌರ್ಜನ್ಯ ನಡೆಸುತ್ತಾರೆ? ಎಂಬ ಪ್ರಶ್ನೆಗಳು ಬಹಳ ಬರುತ್ತವೆ. ಅಪ್ಪನೇ ತನ್ನ ಮಗಳನ್ನು ಅತ್ಯಾಚಾರ ಮಾಡಿರುವ ಹಲವು ಪ್ರಕರಣಗಳು ನನ್ನ ಮುಂದಿವೆ. ಇಂದು ಹಲವು ಸಾವಿರ ಪಟ್ಟು ಕೌಟುಂಬಿಕ ಹಿಂಸೆ ಜಾಸ್ತಿಯಾಗಿದೆ. ಮಗು ಹುಟ್ಟುವುದಕ್ಕೆ ಮುಂಚಿತವಾಗಿಯೇ ಹತ್ಯೆ ಮಾಡುವುದು ಇಂದು ಒಂದು ಸಾವಿರ ಕೋಟಿ ಮೌಲ್ಯದ ದಂಧೆಯಾಗಿದೆ. ಒಬ್ಬ ಹೆಣ್ಣು ಮಗಳನ್ನು ಹುಟ್ಟುವುದಕ್ಕೆ ಅವಕಾಶ ಕೊಡದ ಸಂದರ್ಭದಲ್ಲಿ ಇನ್ನು ಹುಟ್ಟಿದ ಮೇಲೆ ಯಾವ ಯಾವ ರೀತಿ ಹಿಂಸೆ ಕೊಡುತ್ತಾರೆ ನೀವೆ ಯೋಚಿಸಿ? ಎಂದು ಅಭಿಪ್ರಾಯಪಟ್ಟರು.

ಈ ವಿಭಿನ್ನವಾದ ಹಿಂಸೆಗಳಲ್ಲಿ ಮಹಿಳೆಯರನ್ನು ದ್ವಿತಿಯ ದರ್ಜೆಯ ಪ್ರಜೆಯನ್ನಾಗಿ ಮಾಡಿ ಹತ್ತಿಕ್ಕುವ ವ್ಯವಸ್ಥೆ ಇಂದಿಗೂ ಕೂಡ ಜಾರಿಯಲಿದೆ. ನಮ್ಮ ಸಮಾಜ ಆಧುನಿಕವಾದಷ್ಟು ಕೂಡ ಮತೀಯವಾಗಿ ನರಳುತ್ತಿದೆ ಎಂದರು.

ಸ್ತ್ರೀ ಶಿಕ್ಷಣ ನಿರಾಕರಣೆ, ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ವಿವಾಹ ಸಂಬಂಧಿತ ನೋಂದಣಿಗೆ ವಿರೋಧ, ಪರಸ್ಪರ ಒಪ್ಪಿಗೆಯ ಮೇಲೆ ವಿಚ್ಛೇದನಕ್ಕೆ ವಿರೋಧ, ಆಸ್ತಿ ಹಕ್ಕು, ಅತ್ಯಾಚಾರ.. ಮರ್ಯಾದೆಹೀನ ಹತ್ಯೆ.. ಇವೆಲ್ಲವೂ ಕೌಟುಂಬಿಕ ಹಿಂಸೆ ಕೆಳಗೆ ಬರುತ್ತವೆ ಆದರೆ ಆಧುನಿಕ ಸಮಾಜ ಇದೆಲ್ಲವನ್ನು ಗಮನಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಮಂಡ್ಯ ಜಿಲ್ಲೆಯ ಸ್ಮೃತಿ ಎಂಬ ಹೆಣ್ಣು ಮಗಳು ನನ್ನ ಬರಹಗಳ ಕುರಿತು ಸಂಶೋಧನೆ ನಡೆಸಿದ್ದಳು. ಬಹಳ ಪ್ರತಿಭಾವಂತಳಾದ ಆಕೆ ದಲಿತ ಯುವಕನ ಜೊತೆ ಮದುವೆಯಾಗಿದ್ದಕ್ಕೆ ಕೊಲೆ ಮಾಡಲಾಗಿದೆ. ಅಂದರೆ ಮರ್ಯಾದೇಹೀನ ಹತ್ಯೆ ಇಂದಿಗೂ ಚಾಲ್ತಿಯಲ್ಲಿರುವುದು ದುರಂತ ಎಂದರು.

2005 ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಬಂತು. ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಒಡಂಬಡಿಕೆಗಳ ಅಂಗವಾಗಿ ಕಾನೂನಾಗಿದೆ. ಇಂದಿರಾ ಜೈಸಿಂಗ್ ಎಂಬ ಹಿರಿಯ ವಕೀಲೆ, ಸಾಮಾಜಿಕ ಹೋರಾಟಗಾರ್ತಿ ಈ ಕಾಯ್ದೆಯನ್ನು ಬೆಂಬಲಿಸಿದ್ದಕ್ಕೆ ಆಕೆಯನ್ನು ಟ್ರೋಲ್ ಮಾಡಲಾಯಿತು.. ಇದು ನಮ್ಮ ಸಮಾಜ ಮಹಿಳೆಯರ ಕುರಿತು ವರ್ತಿಸುವ ಪರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಿಂಗಾನುಪಾತದಲ್ಲಿ ಈಗ ಬಹಳ ತಾರತಮ್ಯವುಂಟಾಗುತ್ತಿದ್ದು, ದಿನೇ ದಿನೇ ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿಯುತ್ತಿದೆ. 498ಎ ಕಾಯ್ದೆಯ ಆಧಾರದಲ್ಲಿ ಸುಳ್ಳು ಕೇಸುಗಳು ದಾಖಲಾಗುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂಗತೆ ಡಿವೈಎಸ್ಪಿ ಒಪ್ಪಿಗೆ ನೀಡಿದ ನಂತರವೇ ಕೇಸು ದಾಖಲಿಸಬೇಕೆಂಬ ನಿಯಮ ಬಂದಿತು. ಬಹಳಷ್ಟು ಹೋರಾಟಗಳ ನಂತರ ಅದನ್ನು ಹಿಂತೆಗೆದುಕೊಳ್ಳಲಾಗಿದೆ. ಅಂದರೆ ಈ ಕಾನೂನುಗಳು ದುರುಪಯೋಗವಾಗುತ್ತಿವೆ ಎಂಬ ಆರೋಪಗಳಿವೆ. ಈ ಕಾನೂನುಗಳ ಅಡಿಯಲ್ಲಿ ಸುಳ್ಳು ಕೇಸು ಹಾಕಿದರೆ ಕಾನೂನು ಉಲ್ಟಾ ಹೊಡೆದು ನೈಜ ಹಿಂಸೆ ಅನುಭವಿಸದವರಿಗೂ ನ್ಯಾಯ ಸಿಗುವುದು ದುಸ್ತರವಾಗುತ್ತದೆ. ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಮನವಿ ಮಾಡಿದರು.

ಔದ್ಯೋಗಿಕ ನೆಲೆಯಲ್ಲಿ ಮಹಿಳಾ ಬದುಕಿನ ಪಲ್ಲಟಗಳು ವಿಷಯದ ಕುರಿತು ಸಾಮಾಜಿಕ ಕಾರ್ಯಕರ್ತೆ ಎಸ್.ಸತ್ಯಾರವರು ಮಾತನಾಡಿ “ಸ್ವಾತಂತ್ರ್ಯವೇ ಅಭಿವೃದ್ದಿ ಎಂದು ಅರ್ಥಶಾಸ್ತ್ರಜ್ಞ ಅಮರ್ತ್ಯಸೆನ್ ಹೇಳಿದ್ದಾರೆ. ವಿಶ್ವಸಂಸ್ಥೆಯು ನಾನು ಸಮಾನತೆಯ ತಲೆಮಾರಿನವಳು ಎಂಬ ಘೋಷಣೆ ನೀಡಿದೆ. ಎಲ್ಲರೂ ಸಮಾನರು ವಿಶ್ವ ಆರ್ಥಿಕ ವೇದಿಕೆ ನೀಡಿದೆ. ಆದರೆ ಇದೇ ಪರಿಸ್ಥಿತಿ ಮುಂದುವರೆದರೆ ಔದ್ಯೋಗಿಕ ಕ್ಷೇತ್ರದಲ್ಲಿ ಸಮಾನತೆ ಬರಬೇಕಾದರೆ 108 ವರ್ಷಗಳು ಬೇಕು ಸಂಶೋಧನಾ ವರದಿಗಳು ಹೇಳುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.
187 ರಾಷ್ಟ್ರಗಳು ಲಿಂಗತಾರತಮ್ಯವನ್ನು ನಿಯಂತ್ರಿಸಲು ಕಾಯ್ದೆ ಕಾನೂನುಗಳನ್ನು ರೂಪಿಸಿವೆ. ಲಿಂಗ ತಾರತಮ್ಯದ ವಿಚಾರದಲ್ಲಿ ಭಾರತ ಕೇವಲ 25% ಮಾತ್ರ ಶ್ರಮಿಸಿದೆ. ಸಮಾನ ವೇತನ ಎಂಬದು ಇನ್ನು ಮಹಿಳೆಯರ ಪಾಲಿಗೆ ಕನಸಿನ ಮಾತಾಗಿದೆ. ಕೆಲಸದ ಸ್ಥಳದಲ್ಲಿ ಹಿಂಸೆ ಮುಂದುವರೆದಿದೆ.

ವೇತನಸಹಿತ ಕೆಲಸ ಮತ್ತು ವೇತನ ರಹಿತ ಕೆಲಸ ಎಂಬ ಎರಡು ವಿಭಾಗಗಳಿವೆ.. ಪಾಲನೆ ಮತ್ತು ಪೋಷಣೆ ಮಾಡುವ ಕೆಲಸ ಅನುತ್ಪಾದಕ ಕ್ಷೇತ್ರ ಎನ್ನಲಾಗುತ್ತಿದೆ. ಅಂಗನವಾಡಿಯಿಂದ ಹಿಡಿದು ಐಟಿ ಕಂಪನಿಗಳನ್ನು ಮಕ್ಕಳನ್ನು ನೋಡಿಕೊಳ್ಳುವ, ರೋಗಿಗಳನ್ನು, ವಿಕಲಚೇತನರನ್ನು ನೋಡಿಕೊಳ್ಳುವ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ. ಇದನ್ನು ಮಾನವೀಯ ಕೆಲಸವಾಗಿದ್ದರೆ ಉತ್ಪಾದನಾ ಕ್ಷೇತ್ರವಲ್ಲವೇ? ಇದಕ್ಕೆ ಏಕೆ ಮೌಲ್ಯವನ್ನು ನಿಗಧಿಪಡಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಇಂದು ಉದ್ಯೋಗಗಳು ಮಹಿಳೆಯರಿಗೆ ಆಯ್ಕೆಯಾಗಿಲ್ಲ ಬದಲಿಗೆ ಹೇರಿಕೆಯಾಗಿವೆ. ತಂತ್ರಜ್ಞಾನ ಸ್ಪಲ್ಪ ಮಟ್ಟಿಕೆ ಮಹಿಳೆಯರನ್ನು ಸುಧಾರಿಸಿದರೂ ಸಹ ಅವರನ್ನು ಮತ್ತೆ ಅವರನ್ನು ಕೆಲವೇ ಕ್ಷೇತ್ರಗಳಿಗೆ ಸೀಮಿತಗೊಳಿಸಿತು. ಖಾಸಗೀಕರಣ ಮತ್ತು ಜಾಗತೀಕರಣದ ಜೊತೆಗೆ ಕೋಮುವಾದ ಮತ್ತು ದೌರ್ಜನ್ಯಗಳು ಮಹಿಳೆಯನ್ನು ಮುಂದೆ ಹೋಗದಂತೆ ತಡೆಹಿಡಿಯಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾಮಾಜಿಕ ಮತ್ತು ಸಾಮಾಜಿಕ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಸಬಿತಾ ಬನ್ನಾಡಿಯವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...