Homeಮುಖಪುಟಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

- Advertisement -
- Advertisement -

ಮೂಢನಂಬಿಕೆಗೆ ಬಲಿಯಾಗಬೇಡಿ. ಪಿತೃಪ್ರಾಧ್ಯನತೆಯ ಎಲ್ಲಾ ಮೌಲ್ಯಗಳನ್ನು ನಮ್ಮ ತಲೆಯಲ್ಲಿ ತುಂಬುತ್ತಿರುವುದೇ ಮೂಢನಂಬಿಕೆಗಳ ಮೂಲಕ. ಇದರಿಂದ ತಾವು ಮಾಡಬೇಕೆನ್ನುವ ಕೆಟ್ಟ ಕೆಲಸಗಳನ್ನು ಮಹಿಳೆಯರ ಮೂಲಕ ಮಾಡಿಸಲಾಗುತ್ತದೆ. ಇದರಿಂದ ನಮ್ಮನ್ನು ನೂರು-ಐನೂರು ವರ್ಷಕ್ಕೆ ಹಿಂದಕ್ಕೆ ತಳ್ಳಲ್ಲಿಕ್ಕೆ ಇದನ್ನು ಬಳಸುತ್ತಿದ್ದಾರೆ. ಹಾಗಾಗಿ ಮೂಡನಂಬಿಕೆಗಳಿAದ ದೂರ ಇರಬೇಕೆಂದು ಹಿರಿಯ ವಕೀಲೆ ಮತ್ತು ಲೇಖಕಿಯಾದ ಬಾನು ಮುಷ್ತಕ್ ಕರೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

ಕುಟುಂಬದ ಒಳಗೆ ಯಾರು ದೌರ್ಜನ್ಯ ನಡೆಸುತ್ತಾರೆ? ಎಂಬ ಪ್ರಶ್ನೆಗಳು ಬಹಳ ಬರುತ್ತವೆ. ಅಪ್ಪನೇ ತನ್ನ ಮಗಳನ್ನು ಅತ್ಯಾಚಾರ ಮಾಡಿರುವ ಹಲವು ಪ್ರಕರಣಗಳು ನನ್ನ ಮುಂದಿವೆ. ಇಂದು ಹಲವು ಸಾವಿರ ಪಟ್ಟು ಕೌಟುಂಬಿಕ ಹಿಂಸೆ ಜಾಸ್ತಿಯಾಗಿದೆ. ಮಗು ಹುಟ್ಟುವುದಕ್ಕೆ ಮುಂಚಿತವಾಗಿಯೇ ಹತ್ಯೆ ಮಾಡುವುದು ಇಂದು ಒಂದು ಸಾವಿರ ಕೋಟಿ ಮೌಲ್ಯದ ದಂಧೆಯಾಗಿದೆ. ಒಬ್ಬ ಹೆಣ್ಣು ಮಗಳನ್ನು ಹುಟ್ಟುವುದಕ್ಕೆ ಅವಕಾಶ ಕೊಡದ ಸಂದರ್ಭದಲ್ಲಿ ಇನ್ನು ಹುಟ್ಟಿದ ಮೇಲೆ ಯಾವ ಯಾವ ರೀತಿ ಹಿಂಸೆ ಕೊಡುತ್ತಾರೆ ನೀವೆ ಯೋಚಿಸಿ? ಎಂದು ಅಭಿಪ್ರಾಯಪಟ್ಟರು.

ಈ ವಿಭಿನ್ನವಾದ ಹಿಂಸೆಗಳಲ್ಲಿ ಮಹಿಳೆಯರನ್ನು ದ್ವಿತಿಯ ದರ್ಜೆಯ ಪ್ರಜೆಯನ್ನಾಗಿ ಮಾಡಿ ಹತ್ತಿಕ್ಕುವ ವ್ಯವಸ್ಥೆ ಇಂದಿಗೂ ಕೂಡ ಜಾರಿಯಲಿದೆ. ನಮ್ಮ ಸಮಾಜ ಆಧುನಿಕವಾದಷ್ಟು ಕೂಡ ಮತೀಯವಾಗಿ ನರಳುತ್ತಿದೆ ಎಂದರು.

ಸ್ತ್ರೀ ಶಿಕ್ಷಣ ನಿರಾಕರಣೆ, ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ವಿವಾಹ ಸಂಬಂಧಿತ ನೋಂದಣಿಗೆ ವಿರೋಧ, ಪರಸ್ಪರ ಒಪ್ಪಿಗೆಯ ಮೇಲೆ ವಿಚ್ಛೇದನಕ್ಕೆ ವಿರೋಧ, ಆಸ್ತಿ ಹಕ್ಕು, ಅತ್ಯಾಚಾರ.. ಮರ್ಯಾದೆಹೀನ ಹತ್ಯೆ.. ಇವೆಲ್ಲವೂ ಕೌಟುಂಬಿಕ ಹಿಂಸೆ ಕೆಳಗೆ ಬರುತ್ತವೆ ಆದರೆ ಆಧುನಿಕ ಸಮಾಜ ಇದೆಲ್ಲವನ್ನು ಗಮನಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಮಂಡ್ಯ ಜಿಲ್ಲೆಯ ಸ್ಮೃತಿ ಎಂಬ ಹೆಣ್ಣು ಮಗಳು ನನ್ನ ಬರಹಗಳ ಕುರಿತು ಸಂಶೋಧನೆ ನಡೆಸಿದ್ದಳು. ಬಹಳ ಪ್ರತಿಭಾವಂತಳಾದ ಆಕೆ ದಲಿತ ಯುವಕನ ಜೊತೆ ಮದುವೆಯಾಗಿದ್ದಕ್ಕೆ ಕೊಲೆ ಮಾಡಲಾಗಿದೆ. ಅಂದರೆ ಮರ್ಯಾದೇಹೀನ ಹತ್ಯೆ ಇಂದಿಗೂ ಚಾಲ್ತಿಯಲ್ಲಿರುವುದು ದುರಂತ ಎಂದರು.

2005 ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಬಂತು. ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಒಡಂಬಡಿಕೆಗಳ ಅಂಗವಾಗಿ ಕಾನೂನಾಗಿದೆ. ಇಂದಿರಾ ಜೈಸಿಂಗ್ ಎಂಬ ಹಿರಿಯ ವಕೀಲೆ, ಸಾಮಾಜಿಕ ಹೋರಾಟಗಾರ್ತಿ ಈ ಕಾಯ್ದೆಯನ್ನು ಬೆಂಬಲಿಸಿದ್ದಕ್ಕೆ ಆಕೆಯನ್ನು ಟ್ರೋಲ್ ಮಾಡಲಾಯಿತು.. ಇದು ನಮ್ಮ ಸಮಾಜ ಮಹಿಳೆಯರ ಕುರಿತು ವರ್ತಿಸುವ ಪರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಿಂಗಾನುಪಾತದಲ್ಲಿ ಈಗ ಬಹಳ ತಾರತಮ್ಯವುಂಟಾಗುತ್ತಿದ್ದು, ದಿನೇ ದಿನೇ ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿಯುತ್ತಿದೆ. 498ಎ ಕಾಯ್ದೆಯ ಆಧಾರದಲ್ಲಿ ಸುಳ್ಳು ಕೇಸುಗಳು ದಾಖಲಾಗುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂಗತೆ ಡಿವೈಎಸ್ಪಿ ಒಪ್ಪಿಗೆ ನೀಡಿದ ನಂತರವೇ ಕೇಸು ದಾಖಲಿಸಬೇಕೆಂಬ ನಿಯಮ ಬಂದಿತು. ಬಹಳಷ್ಟು ಹೋರಾಟಗಳ ನಂತರ ಅದನ್ನು ಹಿಂತೆಗೆದುಕೊಳ್ಳಲಾಗಿದೆ. ಅಂದರೆ ಈ ಕಾನೂನುಗಳು ದುರುಪಯೋಗವಾಗುತ್ತಿವೆ ಎಂಬ ಆರೋಪಗಳಿವೆ. ಈ ಕಾನೂನುಗಳ ಅಡಿಯಲ್ಲಿ ಸುಳ್ಳು ಕೇಸು ಹಾಕಿದರೆ ಕಾನೂನು ಉಲ್ಟಾ ಹೊಡೆದು ನೈಜ ಹಿಂಸೆ ಅನುಭವಿಸದವರಿಗೂ ನ್ಯಾಯ ಸಿಗುವುದು ದುಸ್ತರವಾಗುತ್ತದೆ. ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಮನವಿ ಮಾಡಿದರು.

ಔದ್ಯೋಗಿಕ ನೆಲೆಯಲ್ಲಿ ಮಹಿಳಾ ಬದುಕಿನ ಪಲ್ಲಟಗಳು ವಿಷಯದ ಕುರಿತು ಸಾಮಾಜಿಕ ಕಾರ್ಯಕರ್ತೆ ಎಸ್.ಸತ್ಯಾರವರು ಮಾತನಾಡಿ “ಸ್ವಾತಂತ್ರ್ಯವೇ ಅಭಿವೃದ್ದಿ ಎಂದು ಅರ್ಥಶಾಸ್ತ್ರಜ್ಞ ಅಮರ್ತ್ಯಸೆನ್ ಹೇಳಿದ್ದಾರೆ. ವಿಶ್ವಸಂಸ್ಥೆಯು ನಾನು ಸಮಾನತೆಯ ತಲೆಮಾರಿನವಳು ಎಂಬ ಘೋಷಣೆ ನೀಡಿದೆ. ಎಲ್ಲರೂ ಸಮಾನರು ವಿಶ್ವ ಆರ್ಥಿಕ ವೇದಿಕೆ ನೀಡಿದೆ. ಆದರೆ ಇದೇ ಪರಿಸ್ಥಿತಿ ಮುಂದುವರೆದರೆ ಔದ್ಯೋಗಿಕ ಕ್ಷೇತ್ರದಲ್ಲಿ ಸಮಾನತೆ ಬರಬೇಕಾದರೆ 108 ವರ್ಷಗಳು ಬೇಕು ಸಂಶೋಧನಾ ವರದಿಗಳು ಹೇಳುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.
187 ರಾಷ್ಟ್ರಗಳು ಲಿಂಗತಾರತಮ್ಯವನ್ನು ನಿಯಂತ್ರಿಸಲು ಕಾಯ್ದೆ ಕಾನೂನುಗಳನ್ನು ರೂಪಿಸಿವೆ. ಲಿಂಗ ತಾರತಮ್ಯದ ವಿಚಾರದಲ್ಲಿ ಭಾರತ ಕೇವಲ 25% ಮಾತ್ರ ಶ್ರಮಿಸಿದೆ. ಸಮಾನ ವೇತನ ಎಂಬದು ಇನ್ನು ಮಹಿಳೆಯರ ಪಾಲಿಗೆ ಕನಸಿನ ಮಾತಾಗಿದೆ. ಕೆಲಸದ ಸ್ಥಳದಲ್ಲಿ ಹಿಂಸೆ ಮುಂದುವರೆದಿದೆ.

ವೇತನಸಹಿತ ಕೆಲಸ ಮತ್ತು ವೇತನ ರಹಿತ ಕೆಲಸ ಎಂಬ ಎರಡು ವಿಭಾಗಗಳಿವೆ.. ಪಾಲನೆ ಮತ್ತು ಪೋಷಣೆ ಮಾಡುವ ಕೆಲಸ ಅನುತ್ಪಾದಕ ಕ್ಷೇತ್ರ ಎನ್ನಲಾಗುತ್ತಿದೆ. ಅಂಗನವಾಡಿಯಿಂದ ಹಿಡಿದು ಐಟಿ ಕಂಪನಿಗಳನ್ನು ಮಕ್ಕಳನ್ನು ನೋಡಿಕೊಳ್ಳುವ, ರೋಗಿಗಳನ್ನು, ವಿಕಲಚೇತನರನ್ನು ನೋಡಿಕೊಳ್ಳುವ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ. ಇದನ್ನು ಮಾನವೀಯ ಕೆಲಸವಾಗಿದ್ದರೆ ಉತ್ಪಾದನಾ ಕ್ಷೇತ್ರವಲ್ಲವೇ? ಇದಕ್ಕೆ ಏಕೆ ಮೌಲ್ಯವನ್ನು ನಿಗಧಿಪಡಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಇಂದು ಉದ್ಯೋಗಗಳು ಮಹಿಳೆಯರಿಗೆ ಆಯ್ಕೆಯಾಗಿಲ್ಲ ಬದಲಿಗೆ ಹೇರಿಕೆಯಾಗಿವೆ. ತಂತ್ರಜ್ಞಾನ ಸ್ಪಲ್ಪ ಮಟ್ಟಿಕೆ ಮಹಿಳೆಯರನ್ನು ಸುಧಾರಿಸಿದರೂ ಸಹ ಅವರನ್ನು ಮತ್ತೆ ಅವರನ್ನು ಕೆಲವೇ ಕ್ಷೇತ್ರಗಳಿಗೆ ಸೀಮಿತಗೊಳಿಸಿತು. ಖಾಸಗೀಕರಣ ಮತ್ತು ಜಾಗತೀಕರಣದ ಜೊತೆಗೆ ಕೋಮುವಾದ ಮತ್ತು ದೌರ್ಜನ್ಯಗಳು ಮಹಿಳೆಯನ್ನು ಮುಂದೆ ಹೋಗದಂತೆ ತಡೆಹಿಡಿಯಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾಮಾಜಿಕ ಮತ್ತು ಸಾಮಾಜಿಕ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಸಬಿತಾ ಬನ್ನಾಡಿಯವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...