HomeUncategorizedಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

ಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

- Advertisement -
- Advertisement -

ಹೊಸದಿಲ್ಲಿ: 2023-24ರಲ್ಲಿ ಭಾರತದ್ಯಂತ ಒಟ್ಟು ಶಾಲಾ ಶಿಕ್ಷಕರಲ್ಲಿ ಮಹಿಳಾ ಶಿಕ್ಷಕರು 53.3% ರಷ್ಟಿದ್ದಾರೆ. ಇದು ಇಲ್ಲಿಯವರೆಗಿನ ಶಿಕ್ಷಕಿಯರು ಅತ್ಯಧಿಕವಾಗಿ ದಾಖಲಾದ ಅನುಪಾತವಾಗಿದೆ. ಕಳೆದ ಕೆಲವು ವರ್ಷಗಳಿಂದ ಹೆಚ್ಚಿನ ಲಿಂಗ ವೈವಿಧ್ಯತೆಯಲ್ಲಿ ಬೋಧನಾ ಕ್ಷೇತ್ರವು ಶೀಘ್ರವಾದ ಬದಲಾವಣೆ ಕಾಣುತ್ತಿದೆ ಎಂದು ಇತ್ತೀಚಿನ ಸರ್ಕಾರಿ ಅಂಕಿ-ಅಂಶಗಳು ಹೇಳಿವೆ.

2018-19ರಲ್ಲಿ  50% ರಷ್ಟು ಪುರುಷ ಶಾಲಾ ಶಿಕ್ಷಕರು ಇದ್ದರು. 2018-19ರಲ್ಲಿ 94.3 ಲಕ್ಷ ಒಟ್ಟು ಶಾಲಾ ಶಿಕ್ಷಕರಲ್ಲಿ 47.16 ಲಕ್ಷ (50.01%) ಪುರುಷರು ಮತ್ತು 47.14 ಲಕ್ಷ (49.98%) ಮಹಿಳಾ ಶಿಕ್ಷಕರಿದ್ದರು.  2023-24ರಲ್ಲಿ ಮಹಿಳಾ ಶಿಕ್ಷಕರ ಸಂಖ್ಯೆ 52 ಲಕ್ಷಕ್ಕೆ ಏರಿದೆ, ಪುರುಷ ಶಿಕ್ಷಕರ ಸಂಖ್ಯೆ ಸರಿಸುಮಾರು 45 ಲಕ್ಷಕ್ಕೆ ಇಳಿದಿದೆ.

ಬೇರೆ ರೀತಿಯಲ್ಲಿ ಹೇಳುವುದಾದರೆ, 2018-19 ಮತ್ತು 2023-24ರ ನಡುವೆ, ಶಾಲಾ ಶಿಕ್ಷಕರ ಮಹಿಳಾ ಪ್ರಾತಿನಿಧ್ಯವು ಶೇ.3.3 ಪಾಯಿಂಟ್‌ಗಳಿಂದ 53.3% ಕ್ಕೆ ಜಿಗಿದಿದೆ ಮತ್ತು ಪುರುಷ ಪ್ರಾತಿನಿಧ್ಯವು 46.6% ಕ್ಕೆ ಇಳಿದಿದೆ. ಶಿಕ್ಷಣ ಸಚಿವಾಲಯದಿಂದ ಸಂಕಲಿಸಲ್ಪಟ್ಟ UDISE+ನ ಅಂಕಿ-ಅಂಶವು ಇದನ್ನು ಹೇಳುತ್ತದೆ.  UDISE+ ಎನ್ನುವುದು ಶಾಲಾ ಶಿಕ್ಷಣದ ಕುರಿತು ಭಾರತದಲ್ಲೆಡೆಯ ವ್ಯಾಪಕವಾದ ಅಂಕಿಅಂಶವಾಗಿದೆ ಮತ್ತು ರಾಜ್ಯಗಳು ನೇರವಾಗಿ ಸಲ್ಲಿಸಲಾದ ದತ್ತಾಂಶವನ್ನು ಇದು ಒಳಗೊಂಡಿದೆ. ಸಚಿವಾಲಯವು ಇತ್ತೀಚೆಗೆ 2022-23 ಮತ್ತು 2023-24 ವರ್ಷಗಳ UDISE+ ವರದಿಗಳನ್ನು ಒಟ್ಟಿಗೆ ಬಿಡುಗಡೆ ಮಾಡಿದೆ.

ಮಹಿಳಾ ಶಿಕ್ಷಕಿಯರು 2019-20ರಲ್ಲಿ ಈ ಮೊದಲಿನ 50% ದಾಖಲೆಯನ್ನು ಮುರಿದು 50.7%ಕ್ಕೆ ಏರಿದನ್ನು  ಈ ವರದಿ ತೋರಿಸುತ್ತದೆ. ಅಂದಿನಿಂದ, 2022-23 ಮತ್ತು 2023-24ರಲ್ಲಿ ಅವರ ಪ್ರಾತಿನಿಧ್ಯವು ಕ್ರಮವಾಗಿ 51.3% ರಿಂದ 52.3% ಮತ್ತು ನಂತರ 53.3% ಕ್ಕೆ ಏರಿಕೆಯಾಗಿ ಅವರ ಪಾಲು ಸ್ಥಿರವಾಗಿ ಹೆಚ್ಚುತ್ತಲೇ ಇದೆ.

ಉನ್ನತ ಶಿಕ್ಷಣದಲ್ಲಿ ಇದು ವ್ಯತಿರಿಕ್ತವಾಗಿದೆ. ಅಲ್ಲಿ ಬೋಧನೆಯು ಪುರುಷ ಪ್ರಧಾನ ವೃತ್ತಿಯಾಗಿ ಉಳಿದಿದೆ ಅಖಿಲ ಭಾರತ ಸಮೀಕ್ಷೆಯ ಉನ್ನತ ಶಿಕ್ಷಣದ (AISHE) ದತ್ತಾಂಶದ ಪ್ರಕಾರ 2021-22ರಲ್ಲಿ 57% ಪುರುಷ ಬೋಧಕರಿಗೆ ಹೋಲಿಸಿದರೆ ಮಹಿಳಾ ಬೋಧಕಿಯರು 43%ರಷ್ಟು ಇದ್ದರು. 2018-19ರಲ್ಲಿ ಮಹಿಳೆಯರು  42% ಮತ್ತು ಪುರುಷರು 58% ರಷ್ಟು ಇದ್ದರು.

ಆದಾಗ್ಯೂ, UDISE+ ದತ್ತಾಂಶವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಖಾಸಗಿ ಶಾಲೆಗಳಲ್ಲಿ ಮಹಿಳಾ ಶಿಕ್ಷಕರ ಹೆಚ್ಚಳವು ಹೆಚ್ಚು ತೀಕ್ಷ್ಣವಾಗಿದೆ. ವಾಸ್ತವವಾಗಿ ಸರ್ಕಾರಿ ಶಾಲೆಗಳಲ್ಲಿ ಬೋಧನಾ ವರ್ಗವು ಪುರುಷರ ಪ್ರಾಬಲ್ಯವನ್ನು ಮುಂದುವರೆಸಿದೆ.

ಇದು 2018-19 ರಿಂದ 2023-24 ರವರೆಗೆ ಪ್ರತಿ ವರ್ಷವೂ ಹಾಗೆಯೇ ಉಳಿದಿದೆ. 2018-19ರಲ್ಲಿ 49.47 ಲಕ್ಷ ಸರ್ಕಾರಿ ಶಾಲಾ ಶಿಕ್ಷಕರಲ್ಲಿ 28.18 ಲಕ್ಷ (57%) ಪುರುಷರು ಮತ್ತು 21.29 ಲಕ್ಷ (43%) ಮಹಿಳೆಯರಿದ್ದಾರೆ. 2023-24ರಲ್ಲಿ ಮಹಿಳೆಯರ ಸಂಖ್ಯೆಯು ಸುಮಾರು 6%ರಷ್ಟು ಏರಿಕೆ ಕಂಡಿದೆ. 22.65 ಲಕ್ಷ ಮಹಿಳೆಯರು ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿದ್ದರೆ, 27.72 ಲಕ್ಷ ಪುರುಷರಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಖಾಸಗಿ ಶಾಲೆಗಳಲ್ಲಿ ಬೋಧನೆ ಮಾಡುವ ಮಹಿಳೆಯರ ಸಂಖ್ಯೆಯಲ್ಲಿ ಸುಮಾರು 20% ರಷ್ಟು ಹೆಚ್ಚಿನ ಏರಿಕೆ ಕಂಡಿದೆ. 2018-19ರಿಂದ 2023-24ರವರೆಗಿನ ಎಲ್ಲಾ ವರ್ಷಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಶಿಕ್ಷಕರನ್ನು ಹೊಂದಿವೆ. 2018-19ರಲ್ಲಿ ಒಟ್ಟು 33.04 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 20.63 ಲಕ್ಷ ಮಹಿಳೆಯರಿದ್ದರು. 2023-24ರಲ್ಲಿ 37.30 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 24.76 (66%) ಮಹಿಳೆಯರಿದ್ದರು.

ಕೆಲವು ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮೇಲಿನ ದತ್ತಾಂಶಗಳಿಗೆ ವ್ಯತಿರಿಕ್ತವಾಗಿವೆ. ಉದಾಹರಣೆಗೆ ಕೇರಳದಲ್ಲಿ 78% ಸರ್ಕಾರಿ ಶಾಲಾ ಶಿಕ್ಷಕರು ಮಹಿಳೆಯರಾಗಿದ್ದರೆ, ತಮಿಳುನಾಡಿನಲ್ಲಿ 67% ಮತ್ತು ಪಂಜಾಬ್‌ನಲ್ಲಿ 64%,  ದೆಹಲಿಯಲ್ಲಿ 61%ರಷ್ಟು ಶಿಕ್ಷಕಿಯರಿದ್ದಾರೆ.

ಹರಿಯಾಣದ 767 ಶಾಲೆಗಳಲ್ಲಿ ಬಾಲಕಿಯರ ಶೌಚಾಲಯವಿಲ್ಲ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...