HomeUncategorizedಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

ಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

- Advertisement -
- Advertisement -

ಹೊಸದಿಲ್ಲಿ: 2023-24ರಲ್ಲಿ ಭಾರತದ್ಯಂತ ಒಟ್ಟು ಶಾಲಾ ಶಿಕ್ಷಕರಲ್ಲಿ ಮಹಿಳಾ ಶಿಕ್ಷಕರು 53.3% ರಷ್ಟಿದ್ದಾರೆ. ಇದು ಇಲ್ಲಿಯವರೆಗಿನ ಶಿಕ್ಷಕಿಯರು ಅತ್ಯಧಿಕವಾಗಿ ದಾಖಲಾದ ಅನುಪಾತವಾಗಿದೆ. ಕಳೆದ ಕೆಲವು ವರ್ಷಗಳಿಂದ ಹೆಚ್ಚಿನ ಲಿಂಗ ವೈವಿಧ್ಯತೆಯಲ್ಲಿ ಬೋಧನಾ ಕ್ಷೇತ್ರವು ಶೀಘ್ರವಾದ ಬದಲಾವಣೆ ಕಾಣುತ್ತಿದೆ ಎಂದು ಇತ್ತೀಚಿನ ಸರ್ಕಾರಿ ಅಂಕಿ-ಅಂಶಗಳು ಹೇಳಿವೆ.

2018-19ರಲ್ಲಿ  50% ರಷ್ಟು ಪುರುಷ ಶಾಲಾ ಶಿಕ್ಷಕರು ಇದ್ದರು. 2018-19ರಲ್ಲಿ 94.3 ಲಕ್ಷ ಒಟ್ಟು ಶಾಲಾ ಶಿಕ್ಷಕರಲ್ಲಿ 47.16 ಲಕ್ಷ (50.01%) ಪುರುಷರು ಮತ್ತು 47.14 ಲಕ್ಷ (49.98%) ಮಹಿಳಾ ಶಿಕ್ಷಕರಿದ್ದರು.  2023-24ರಲ್ಲಿ ಮಹಿಳಾ ಶಿಕ್ಷಕರ ಸಂಖ್ಯೆ 52 ಲಕ್ಷಕ್ಕೆ ಏರಿದೆ, ಪುರುಷ ಶಿಕ್ಷಕರ ಸಂಖ್ಯೆ ಸರಿಸುಮಾರು 45 ಲಕ್ಷಕ್ಕೆ ಇಳಿದಿದೆ.

ಬೇರೆ ರೀತಿಯಲ್ಲಿ ಹೇಳುವುದಾದರೆ, 2018-19 ಮತ್ತು 2023-24ರ ನಡುವೆ, ಶಾಲಾ ಶಿಕ್ಷಕರ ಮಹಿಳಾ ಪ್ರಾತಿನಿಧ್ಯವು ಶೇ.3.3 ಪಾಯಿಂಟ್‌ಗಳಿಂದ 53.3% ಕ್ಕೆ ಜಿಗಿದಿದೆ ಮತ್ತು ಪುರುಷ ಪ್ರಾತಿನಿಧ್ಯವು 46.6% ಕ್ಕೆ ಇಳಿದಿದೆ. ಶಿಕ್ಷಣ ಸಚಿವಾಲಯದಿಂದ ಸಂಕಲಿಸಲ್ಪಟ್ಟ UDISE+ನ ಅಂಕಿ-ಅಂಶವು ಇದನ್ನು ಹೇಳುತ್ತದೆ.  UDISE+ ಎನ್ನುವುದು ಶಾಲಾ ಶಿಕ್ಷಣದ ಕುರಿತು ಭಾರತದಲ್ಲೆಡೆಯ ವ್ಯಾಪಕವಾದ ಅಂಕಿಅಂಶವಾಗಿದೆ ಮತ್ತು ರಾಜ್ಯಗಳು ನೇರವಾಗಿ ಸಲ್ಲಿಸಲಾದ ದತ್ತಾಂಶವನ್ನು ಇದು ಒಳಗೊಂಡಿದೆ. ಸಚಿವಾಲಯವು ಇತ್ತೀಚೆಗೆ 2022-23 ಮತ್ತು 2023-24 ವರ್ಷಗಳ UDISE+ ವರದಿಗಳನ್ನು ಒಟ್ಟಿಗೆ ಬಿಡುಗಡೆ ಮಾಡಿದೆ.

ಮಹಿಳಾ ಶಿಕ್ಷಕಿಯರು 2019-20ರಲ್ಲಿ ಈ ಮೊದಲಿನ 50% ದಾಖಲೆಯನ್ನು ಮುರಿದು 50.7%ಕ್ಕೆ ಏರಿದನ್ನು  ಈ ವರದಿ ತೋರಿಸುತ್ತದೆ. ಅಂದಿನಿಂದ, 2022-23 ಮತ್ತು 2023-24ರಲ್ಲಿ ಅವರ ಪ್ರಾತಿನಿಧ್ಯವು ಕ್ರಮವಾಗಿ 51.3% ರಿಂದ 52.3% ಮತ್ತು ನಂತರ 53.3% ಕ್ಕೆ ಏರಿಕೆಯಾಗಿ ಅವರ ಪಾಲು ಸ್ಥಿರವಾಗಿ ಹೆಚ್ಚುತ್ತಲೇ ಇದೆ.

ಉನ್ನತ ಶಿಕ್ಷಣದಲ್ಲಿ ಇದು ವ್ಯತಿರಿಕ್ತವಾಗಿದೆ. ಅಲ್ಲಿ ಬೋಧನೆಯು ಪುರುಷ ಪ್ರಧಾನ ವೃತ್ತಿಯಾಗಿ ಉಳಿದಿದೆ ಅಖಿಲ ಭಾರತ ಸಮೀಕ್ಷೆಯ ಉನ್ನತ ಶಿಕ್ಷಣದ (AISHE) ದತ್ತಾಂಶದ ಪ್ರಕಾರ 2021-22ರಲ್ಲಿ 57% ಪುರುಷ ಬೋಧಕರಿಗೆ ಹೋಲಿಸಿದರೆ ಮಹಿಳಾ ಬೋಧಕಿಯರು 43%ರಷ್ಟು ಇದ್ದರು. 2018-19ರಲ್ಲಿ ಮಹಿಳೆಯರು  42% ಮತ್ತು ಪುರುಷರು 58% ರಷ್ಟು ಇದ್ದರು.

ಆದಾಗ್ಯೂ, UDISE+ ದತ್ತಾಂಶವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಖಾಸಗಿ ಶಾಲೆಗಳಲ್ಲಿ ಮಹಿಳಾ ಶಿಕ್ಷಕರ ಹೆಚ್ಚಳವು ಹೆಚ್ಚು ತೀಕ್ಷ್ಣವಾಗಿದೆ. ವಾಸ್ತವವಾಗಿ ಸರ್ಕಾರಿ ಶಾಲೆಗಳಲ್ಲಿ ಬೋಧನಾ ವರ್ಗವು ಪುರುಷರ ಪ್ರಾಬಲ್ಯವನ್ನು ಮುಂದುವರೆಸಿದೆ.

ಇದು 2018-19 ರಿಂದ 2023-24 ರವರೆಗೆ ಪ್ರತಿ ವರ್ಷವೂ ಹಾಗೆಯೇ ಉಳಿದಿದೆ. 2018-19ರಲ್ಲಿ 49.47 ಲಕ್ಷ ಸರ್ಕಾರಿ ಶಾಲಾ ಶಿಕ್ಷಕರಲ್ಲಿ 28.18 ಲಕ್ಷ (57%) ಪುರುಷರು ಮತ್ತು 21.29 ಲಕ್ಷ (43%) ಮಹಿಳೆಯರಿದ್ದಾರೆ. 2023-24ರಲ್ಲಿ ಮಹಿಳೆಯರ ಸಂಖ್ಯೆಯು ಸುಮಾರು 6%ರಷ್ಟು ಏರಿಕೆ ಕಂಡಿದೆ. 22.65 ಲಕ್ಷ ಮಹಿಳೆಯರು ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿದ್ದರೆ, 27.72 ಲಕ್ಷ ಪುರುಷರಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಖಾಸಗಿ ಶಾಲೆಗಳಲ್ಲಿ ಬೋಧನೆ ಮಾಡುವ ಮಹಿಳೆಯರ ಸಂಖ್ಯೆಯಲ್ಲಿ ಸುಮಾರು 20% ರಷ್ಟು ಹೆಚ್ಚಿನ ಏರಿಕೆ ಕಂಡಿದೆ. 2018-19ರಿಂದ 2023-24ರವರೆಗಿನ ಎಲ್ಲಾ ವರ್ಷಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಶಿಕ್ಷಕರನ್ನು ಹೊಂದಿವೆ. 2018-19ರಲ್ಲಿ ಒಟ್ಟು 33.04 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 20.63 ಲಕ್ಷ ಮಹಿಳೆಯರಿದ್ದರು. 2023-24ರಲ್ಲಿ 37.30 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 24.76 (66%) ಮಹಿಳೆಯರಿದ್ದರು.

ಕೆಲವು ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮೇಲಿನ ದತ್ತಾಂಶಗಳಿಗೆ ವ್ಯತಿರಿಕ್ತವಾಗಿವೆ. ಉದಾಹರಣೆಗೆ ಕೇರಳದಲ್ಲಿ 78% ಸರ್ಕಾರಿ ಶಾಲಾ ಶಿಕ್ಷಕರು ಮಹಿಳೆಯರಾಗಿದ್ದರೆ, ತಮಿಳುನಾಡಿನಲ್ಲಿ 67% ಮತ್ತು ಪಂಜಾಬ್‌ನಲ್ಲಿ 64%,  ದೆಹಲಿಯಲ್ಲಿ 61%ರಷ್ಟು ಶಿಕ್ಷಕಿಯರಿದ್ದಾರೆ.

ಹರಿಯಾಣದ 767 ಶಾಲೆಗಳಲ್ಲಿ ಬಾಲಕಿಯರ ಶೌಚಾಲಯವಿಲ್ಲ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...