HomeUncategorizedಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

ಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

- Advertisement -
- Advertisement -

ಹೊಸದಿಲ್ಲಿ: 2023-24ರಲ್ಲಿ ಭಾರತದ್ಯಂತ ಒಟ್ಟು ಶಾಲಾ ಶಿಕ್ಷಕರಲ್ಲಿ ಮಹಿಳಾ ಶಿಕ್ಷಕರು 53.3% ರಷ್ಟಿದ್ದಾರೆ. ಇದು ಇಲ್ಲಿಯವರೆಗಿನ ಶಿಕ್ಷಕಿಯರು ಅತ್ಯಧಿಕವಾಗಿ ದಾಖಲಾದ ಅನುಪಾತವಾಗಿದೆ. ಕಳೆದ ಕೆಲವು ವರ್ಷಗಳಿಂದ ಹೆಚ್ಚಿನ ಲಿಂಗ ವೈವಿಧ್ಯತೆಯಲ್ಲಿ ಬೋಧನಾ ಕ್ಷೇತ್ರವು ಶೀಘ್ರವಾದ ಬದಲಾವಣೆ ಕಾಣುತ್ತಿದೆ ಎಂದು ಇತ್ತೀಚಿನ ಸರ್ಕಾರಿ ಅಂಕಿ-ಅಂಶಗಳು ಹೇಳಿವೆ.

2018-19ರಲ್ಲಿ  50% ರಷ್ಟು ಪುರುಷ ಶಾಲಾ ಶಿಕ್ಷಕರು ಇದ್ದರು. 2018-19ರಲ್ಲಿ 94.3 ಲಕ್ಷ ಒಟ್ಟು ಶಾಲಾ ಶಿಕ್ಷಕರಲ್ಲಿ 47.16 ಲಕ್ಷ (50.01%) ಪುರುಷರು ಮತ್ತು 47.14 ಲಕ್ಷ (49.98%) ಮಹಿಳಾ ಶಿಕ್ಷಕರಿದ್ದರು.  2023-24ರಲ್ಲಿ ಮಹಿಳಾ ಶಿಕ್ಷಕರ ಸಂಖ್ಯೆ 52 ಲಕ್ಷಕ್ಕೆ ಏರಿದೆ, ಪುರುಷ ಶಿಕ್ಷಕರ ಸಂಖ್ಯೆ ಸರಿಸುಮಾರು 45 ಲಕ್ಷಕ್ಕೆ ಇಳಿದಿದೆ.

ಬೇರೆ ರೀತಿಯಲ್ಲಿ ಹೇಳುವುದಾದರೆ, 2018-19 ಮತ್ತು 2023-24ರ ನಡುವೆ, ಶಾಲಾ ಶಿಕ್ಷಕರ ಮಹಿಳಾ ಪ್ರಾತಿನಿಧ್ಯವು ಶೇ.3.3 ಪಾಯಿಂಟ್‌ಗಳಿಂದ 53.3% ಕ್ಕೆ ಜಿಗಿದಿದೆ ಮತ್ತು ಪುರುಷ ಪ್ರಾತಿನಿಧ್ಯವು 46.6% ಕ್ಕೆ ಇಳಿದಿದೆ. ಶಿಕ್ಷಣ ಸಚಿವಾಲಯದಿಂದ ಸಂಕಲಿಸಲ್ಪಟ್ಟ UDISE+ನ ಅಂಕಿ-ಅಂಶವು ಇದನ್ನು ಹೇಳುತ್ತದೆ.  UDISE+ ಎನ್ನುವುದು ಶಾಲಾ ಶಿಕ್ಷಣದ ಕುರಿತು ಭಾರತದಲ್ಲೆಡೆಯ ವ್ಯಾಪಕವಾದ ಅಂಕಿಅಂಶವಾಗಿದೆ ಮತ್ತು ರಾಜ್ಯಗಳು ನೇರವಾಗಿ ಸಲ್ಲಿಸಲಾದ ದತ್ತಾಂಶವನ್ನು ಇದು ಒಳಗೊಂಡಿದೆ. ಸಚಿವಾಲಯವು ಇತ್ತೀಚೆಗೆ 2022-23 ಮತ್ತು 2023-24 ವರ್ಷಗಳ UDISE+ ವರದಿಗಳನ್ನು ಒಟ್ಟಿಗೆ ಬಿಡುಗಡೆ ಮಾಡಿದೆ.

ಮಹಿಳಾ ಶಿಕ್ಷಕಿಯರು 2019-20ರಲ್ಲಿ ಈ ಮೊದಲಿನ 50% ದಾಖಲೆಯನ್ನು ಮುರಿದು 50.7%ಕ್ಕೆ ಏರಿದನ್ನು  ಈ ವರದಿ ತೋರಿಸುತ್ತದೆ. ಅಂದಿನಿಂದ, 2022-23 ಮತ್ತು 2023-24ರಲ್ಲಿ ಅವರ ಪ್ರಾತಿನಿಧ್ಯವು ಕ್ರಮವಾಗಿ 51.3% ರಿಂದ 52.3% ಮತ್ತು ನಂತರ 53.3% ಕ್ಕೆ ಏರಿಕೆಯಾಗಿ ಅವರ ಪಾಲು ಸ್ಥಿರವಾಗಿ ಹೆಚ್ಚುತ್ತಲೇ ಇದೆ.

ಉನ್ನತ ಶಿಕ್ಷಣದಲ್ಲಿ ಇದು ವ್ಯತಿರಿಕ್ತವಾಗಿದೆ. ಅಲ್ಲಿ ಬೋಧನೆಯು ಪುರುಷ ಪ್ರಧಾನ ವೃತ್ತಿಯಾಗಿ ಉಳಿದಿದೆ ಅಖಿಲ ಭಾರತ ಸಮೀಕ್ಷೆಯ ಉನ್ನತ ಶಿಕ್ಷಣದ (AISHE) ದತ್ತಾಂಶದ ಪ್ರಕಾರ 2021-22ರಲ್ಲಿ 57% ಪುರುಷ ಬೋಧಕರಿಗೆ ಹೋಲಿಸಿದರೆ ಮಹಿಳಾ ಬೋಧಕಿಯರು 43%ರಷ್ಟು ಇದ್ದರು. 2018-19ರಲ್ಲಿ ಮಹಿಳೆಯರು  42% ಮತ್ತು ಪುರುಷರು 58% ರಷ್ಟು ಇದ್ದರು.

ಆದಾಗ್ಯೂ, UDISE+ ದತ್ತಾಂಶವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಖಾಸಗಿ ಶಾಲೆಗಳಲ್ಲಿ ಮಹಿಳಾ ಶಿಕ್ಷಕರ ಹೆಚ್ಚಳವು ಹೆಚ್ಚು ತೀಕ್ಷ್ಣವಾಗಿದೆ. ವಾಸ್ತವವಾಗಿ ಸರ್ಕಾರಿ ಶಾಲೆಗಳಲ್ಲಿ ಬೋಧನಾ ವರ್ಗವು ಪುರುಷರ ಪ್ರಾಬಲ್ಯವನ್ನು ಮುಂದುವರೆಸಿದೆ.

ಇದು 2018-19 ರಿಂದ 2023-24 ರವರೆಗೆ ಪ್ರತಿ ವರ್ಷವೂ ಹಾಗೆಯೇ ಉಳಿದಿದೆ. 2018-19ರಲ್ಲಿ 49.47 ಲಕ್ಷ ಸರ್ಕಾರಿ ಶಾಲಾ ಶಿಕ್ಷಕರಲ್ಲಿ 28.18 ಲಕ್ಷ (57%) ಪುರುಷರು ಮತ್ತು 21.29 ಲಕ್ಷ (43%) ಮಹಿಳೆಯರಿದ್ದಾರೆ. 2023-24ರಲ್ಲಿ ಮಹಿಳೆಯರ ಸಂಖ್ಯೆಯು ಸುಮಾರು 6%ರಷ್ಟು ಏರಿಕೆ ಕಂಡಿದೆ. 22.65 ಲಕ್ಷ ಮಹಿಳೆಯರು ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿದ್ದರೆ, 27.72 ಲಕ್ಷ ಪುರುಷರಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಖಾಸಗಿ ಶಾಲೆಗಳಲ್ಲಿ ಬೋಧನೆ ಮಾಡುವ ಮಹಿಳೆಯರ ಸಂಖ್ಯೆಯಲ್ಲಿ ಸುಮಾರು 20% ರಷ್ಟು ಹೆಚ್ಚಿನ ಏರಿಕೆ ಕಂಡಿದೆ. 2018-19ರಿಂದ 2023-24ರವರೆಗಿನ ಎಲ್ಲಾ ವರ್ಷಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಶಿಕ್ಷಕರನ್ನು ಹೊಂದಿವೆ. 2018-19ರಲ್ಲಿ ಒಟ್ಟು 33.04 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 20.63 ಲಕ್ಷ ಮಹಿಳೆಯರಿದ್ದರು. 2023-24ರಲ್ಲಿ 37.30 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 24.76 (66%) ಮಹಿಳೆಯರಿದ್ದರು.

ಕೆಲವು ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮೇಲಿನ ದತ್ತಾಂಶಗಳಿಗೆ ವ್ಯತಿರಿಕ್ತವಾಗಿವೆ. ಉದಾಹರಣೆಗೆ ಕೇರಳದಲ್ಲಿ 78% ಸರ್ಕಾರಿ ಶಾಲಾ ಶಿಕ್ಷಕರು ಮಹಿಳೆಯರಾಗಿದ್ದರೆ, ತಮಿಳುನಾಡಿನಲ್ಲಿ 67% ಮತ್ತು ಪಂಜಾಬ್‌ನಲ್ಲಿ 64%,  ದೆಹಲಿಯಲ್ಲಿ 61%ರಷ್ಟು ಶಿಕ್ಷಕಿಯರಿದ್ದಾರೆ.

ಹರಿಯಾಣದ 767 ಶಾಲೆಗಳಲ್ಲಿ ಬಾಲಕಿಯರ ಶೌಚಾಲಯವಿಲ್ಲ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...