Homeಅಂತರಾಷ್ಟ್ರೀಯಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

ಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

- Advertisement -
- Advertisement -

ವಿಶ್ವದ ಜನಪ್ರಿಯ ಸ್ತ್ರೀವಾದಿ ಲೇಖಕಿ ಬೆಲ್ ಹುಕ್ಸ್‌ ಅವರು ಬುಧವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಬರಹಗಳಲ್ಲಿ ಲಿಂಗ, ಜನಾಂಗ ಮತ್ತು ವರ್ಗ ಚಿಂತನೆಗಳಲ್ಲಿ ಹೊಸ ಮಾರ್ಗಗಳನ್ನು ಹುಟ್ಟುಹಾಕಿದ್ದರು.

ಗ್ಲೋರಿಯಾ ಜೀನ್ ವಾಟ್ಕಿನ್ಸ್‌ನಲ್ಲಿ 1952 ರಲ್ಲಿ ಜನಿಸಿದ ಬೆಲ್‌‌ ಹುಕ್ಸ್ ಬುಧವಾರ ಮುಂಜಾನೆ ಅಮೆರಿಕಾದ ಕೆಂಟುಕಿಯ ತನ್ನ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಸೋದರ ಸೊಸೆ ಎಬೊನಿ ಮೋಟ್ಲಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ತನ್ನ ಮುತ್ತಜ್ಜಿ ಬೆಲ್ ಬ್ಲೇರ್ ಹುಕ್ಸ್ ಅವರ ಗೌರವಾರ್ಥವಾಗಿ ‘ಬೆಲ್ ಹುಕ್ಸ್‌‌’ ಎಂಬ ಕಾವ್ಯನಾಮಗಳನ್ನು ಬಳಸಿ ಬರೆಯುತ್ತಿದ್ದ ಅವರು 1978 ರಲ್ಲಿ “ಅಂಡ್ ದೇರ್ ವಿ ವೆಪ್ಟ್” ಕವನಗಳ ಮೊದಲ ಪುಸ್ತಕವನ್ನು ಪ್ರಕಟಿಸಿದ್ದರು.

ಇದನ್ನೂ ಓದಿ:ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ಅವರು 1981 ರಲ್ಲಿ “ಆಯ್‌ನ್ಟ್‌‌ ಐ ಎ ವುಮನ್? ಬ್ಲ್ಯಾಕ್ ವುಮೆನ್ ಆಂಡ್‌ ಫೆಮಿನಿಸಂ” ಪುಸ್ತಕಕ್ಕಾಗಿ ಭಾರಿ ಮೆಚ್ಚುಗೆಯನ್ನು ಪಡೆದರು. ಈ ಪುಸ್ತಕದಲ್ಲಿ ಅವರು ಕಪ್ಪು ಮಹಿಳೆಯರ ಮೇಲೆ ಲಿಂಗಭೇದಭಾವ ಮತ್ತು ವರ್ಣಭೇದ ನೀತಿಯ ಪ್ರಭಾವವನ್ನು ಪರಿಶೀಲಿಸಿದ್ದರು. ಜೊತೆಗೆ ಸ್ತ್ರೀವಾದದೊಳಗಿನ ವರ್ಣಭೇದ ನೀತಿಯ ಬಗ್ಗೆ ಚರ್ಚಿಸಿದ್ದರು.

ಅವರು ಕವನ, ಮಕ್ಕಳ ಕಾದಂಬರಿ, ಆತ್ಮಚರಿತ್ರೆ ಮತ್ತು ಸಾಹಿತ್ಯ ವಿಮರ್ಶೆ ಸೇರಿದಂತೆ ಸುಮಾರು 40 ಕೃತಿಗಳನ್ನು ಪ್ರಕಟಿಸಿದ್ದಾರೆ. ಸ್ತ್ರೀವಾದ, ವರ್ಣಭೇದ ನೀತಿ ಮತ್ತು ಇತರ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗ್ಗೆ ಅವರು ತಮ್ಮ ಕೃತಿಗಳಲ್ಲಿ ಚರ್ಚಿಸಿದ್ದಾರೆ.

ವಿಶ್ವದ ಹಲವು ಪ್ರಸಿದ್ದ ಸಾಹಿತಿಗಳು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದರೆ.

ಅವರ ‘ಫೆಮಿನಿಸಂ ಇಸ್ ಫಾರ್ ಎವೆರಿಬಡಿ: ಪ್ಯಾಶನೇಟ್ ಪಾಲಿಟಿಕ್ಸ್’ (2000) ಎಂಬ ಮಹತ್ವದ ಕೃತಿಯನ್ನು ಕನ್ನಡ ಸ್ತ್ರೀವಾದಿ ಲೇಖಕಿ ಎಚ್‌.ಎಸ್‌‌. ಶ್ರೀಮತಿ ಅವರು ‘ಎಲ್ಲರಿಗಾಗಿ ಸ್ತ್ರೀವಾದ’ ಎಂಬ ಹೆಸರಿನಲ್ಲಿ ಅನುವಾದಿಸಿದ್ದಾರೆ.

ಇದನ್ನೂ ಓದಿ: ದೌರ್ಜನ್ಯವನ್ನು ಕೊನೆಗಾಣಿಸಲು ಸ್ತ್ರೀವಾದೀ ಚಳುವಳಿ “ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ” ಪುಸ್ತಕದ ಅಧ್ಯಾಯವೊಂದರ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...