Homeಅಂತರಾಷ್ಟ್ರೀಯಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

ಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

- Advertisement -
- Advertisement -

ವಿಶ್ವದ ಜನಪ್ರಿಯ ಸ್ತ್ರೀವಾದಿ ಲೇಖಕಿ ಬೆಲ್ ಹುಕ್ಸ್‌ ಅವರು ಬುಧವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಬರಹಗಳಲ್ಲಿ ಲಿಂಗ, ಜನಾಂಗ ಮತ್ತು ವರ್ಗ ಚಿಂತನೆಗಳಲ್ಲಿ ಹೊಸ ಮಾರ್ಗಗಳನ್ನು ಹುಟ್ಟುಹಾಕಿದ್ದರು.

ಗ್ಲೋರಿಯಾ ಜೀನ್ ವಾಟ್ಕಿನ್ಸ್‌ನಲ್ಲಿ 1952 ರಲ್ಲಿ ಜನಿಸಿದ ಬೆಲ್‌‌ ಹುಕ್ಸ್ ಬುಧವಾರ ಮುಂಜಾನೆ ಅಮೆರಿಕಾದ ಕೆಂಟುಕಿಯ ತನ್ನ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಸೋದರ ಸೊಸೆ ಎಬೊನಿ ಮೋಟ್ಲಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ತನ್ನ ಮುತ್ತಜ್ಜಿ ಬೆಲ್ ಬ್ಲೇರ್ ಹುಕ್ಸ್ ಅವರ ಗೌರವಾರ್ಥವಾಗಿ ‘ಬೆಲ್ ಹುಕ್ಸ್‌‌’ ಎಂಬ ಕಾವ್ಯನಾಮಗಳನ್ನು ಬಳಸಿ ಬರೆಯುತ್ತಿದ್ದ ಅವರು 1978 ರಲ್ಲಿ “ಅಂಡ್ ದೇರ್ ವಿ ವೆಪ್ಟ್” ಕವನಗಳ ಮೊದಲ ಪುಸ್ತಕವನ್ನು ಪ್ರಕಟಿಸಿದ್ದರು.

ಇದನ್ನೂ ಓದಿ:ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ಅವರು 1981 ರಲ್ಲಿ “ಆಯ್‌ನ್ಟ್‌‌ ಐ ಎ ವುಮನ್? ಬ್ಲ್ಯಾಕ್ ವುಮೆನ್ ಆಂಡ್‌ ಫೆಮಿನಿಸಂ” ಪುಸ್ತಕಕ್ಕಾಗಿ ಭಾರಿ ಮೆಚ್ಚುಗೆಯನ್ನು ಪಡೆದರು. ಈ ಪುಸ್ತಕದಲ್ಲಿ ಅವರು ಕಪ್ಪು ಮಹಿಳೆಯರ ಮೇಲೆ ಲಿಂಗಭೇದಭಾವ ಮತ್ತು ವರ್ಣಭೇದ ನೀತಿಯ ಪ್ರಭಾವವನ್ನು ಪರಿಶೀಲಿಸಿದ್ದರು. ಜೊತೆಗೆ ಸ್ತ್ರೀವಾದದೊಳಗಿನ ವರ್ಣಭೇದ ನೀತಿಯ ಬಗ್ಗೆ ಚರ್ಚಿಸಿದ್ದರು.

ಅವರು ಕವನ, ಮಕ್ಕಳ ಕಾದಂಬರಿ, ಆತ್ಮಚರಿತ್ರೆ ಮತ್ತು ಸಾಹಿತ್ಯ ವಿಮರ್ಶೆ ಸೇರಿದಂತೆ ಸುಮಾರು 40 ಕೃತಿಗಳನ್ನು ಪ್ರಕಟಿಸಿದ್ದಾರೆ. ಸ್ತ್ರೀವಾದ, ವರ್ಣಭೇದ ನೀತಿ ಮತ್ತು ಇತರ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗ್ಗೆ ಅವರು ತಮ್ಮ ಕೃತಿಗಳಲ್ಲಿ ಚರ್ಚಿಸಿದ್ದಾರೆ.

ವಿಶ್ವದ ಹಲವು ಪ್ರಸಿದ್ದ ಸಾಹಿತಿಗಳು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದರೆ.

ಅವರ ‘ಫೆಮಿನಿಸಂ ಇಸ್ ಫಾರ್ ಎವೆರಿಬಡಿ: ಪ್ಯಾಶನೇಟ್ ಪಾಲಿಟಿಕ್ಸ್’ (2000) ಎಂಬ ಮಹತ್ವದ ಕೃತಿಯನ್ನು ಕನ್ನಡ ಸ್ತ್ರೀವಾದಿ ಲೇಖಕಿ ಎಚ್‌.ಎಸ್‌‌. ಶ್ರೀಮತಿ ಅವರು ‘ಎಲ್ಲರಿಗಾಗಿ ಸ್ತ್ರೀವಾದ’ ಎಂಬ ಹೆಸರಿನಲ್ಲಿ ಅನುವಾದಿಸಿದ್ದಾರೆ.

ಇದನ್ನೂ ಓದಿ: ದೌರ್ಜನ್ಯವನ್ನು ಕೊನೆಗಾಣಿಸಲು ಸ್ತ್ರೀವಾದೀ ಚಳುವಳಿ “ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ” ಪುಸ್ತಕದ ಅಧ್ಯಾಯವೊಂದರ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...