Homeಮುಖಪುಟಫರ್ಜಿ: ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್

ಫರ್ಜಿ: ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್

- Advertisement -
- Advertisement -

ನಾವು ಪ್ರಪಂಚದ ಅತಿ ಪ್ರಾಮಾಣಿಕ ವ್ಯಕ್ತಿಯ ಫೋಟೊನಾ ಅತ್ಯಂತ ಭ್ರಷ್ಟ ವಸ್ತುವಿನ ಮೇಲೆ ಹಾಕಿದ್ದೀವಿ. ದುಡ್ಡನ್ನು ಉಳಿಸಿ ಯಾರಾದ್ರೂ ಶ್ರೀಮಂತರಾಗಿದ್ದಾರ? ಮರ್ಯಾದೆ ಅನ್ನುವುದು ಮಿಡಲ್ ಕ್ಲಾಸ್ ಜನರ ಕೈಗೆಟುಕದ ವಸ್ತು. ಅವರು ಇಡೀ ಜೀವನ ಸಾಲದಲ್ಲಿಯೇ ಮುಳುಗಿ ಸಾಲದಲ್ಲಿಯೇ ಸತ್ತು ಹೋಗುತ್ತದೆ. ಎಜುಕೇಶನ್ ಲೋನ್, ಕೆಲಸ ಸಿಕ್ಕರೆ ಬೈಕ್ ಲೋನ್, ಪ್ರಮೋಷನ್ ಸಿಕ್ಕರೆ ಕಾರ್ ಲೋನ್, ಮದುವೆ ಆದರೆ ಅದಕ್ಕೂ ಲೋನ್, ಆನಂತರ ಮಕ್ಕಳ ಎಜುಕೇಶನ್ ಲೋನ್, ಹೋಮ್ ಲೋನ್ ಹೀಗೆ… ಮದುವೆ ಮುರಿದು ಹೋದ್ರು ಲೋನ್ ಮಾತ್ರ ಮುಂದುವರೆಯುತ್ತಿರುತ್ತದೆ… ಒಟ್ನಲ್ಲಿ ನಾವು ಮಿಡಲ್ ಕ್ಲಾಸ್ ಅಲ್ಲ, ಬದಲಿಗೆ ಮಿಡಲ್ ಫಿಂಗರ್ ಕ್ಲಾಸ್…

ಹೀಗೆ ಬಹುತೇಕ ಜನರಿಗೆ ಅಪೀಲ್ ಆಗುವ ಡೈಲಾಗ್‌ಗಳ ಮೂಲಕ ಗಮನ ಸೆಳೆದ ವೆಬ್ ಸೀರಿಸ್ ಫರ್ಜಿ. ಫ್ಯಾಮಿಲಿ ಮ್ಯಾನ್ ಖ್ಯಾತಿಯ ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್ ಇದಾಗಿದ್ದು, ಈ ಮೂಲಕ ವಿಜಯ್ ಸೇತುಪತಿ ಮತ್ತು ಶಾಹಿದ್ ಕಪೂರ್ ಭರ್ಜರಿಯಾಗಿ ಓಟಿಟಿ ಪ್ರವೇಶಿಸಿದ್ದಾರೆ. Raj & DK ಜೋಡಿ ಫ್ಯಾಮಿಲಿ ಮ್ಯಾನ್-1 ರಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ತಡೆಯುವ ಕಥಹಂದರ ಹೊಂದಿತ್ತು. ಫ್ಯಾಮಿಲಿ ಮ್ಯಾನ್ -2ರಲ್ಲಿ ಎಲ್‌ಟಿಟಿಇ ಸಂಘಟನೆಯ ಕುರಿತು ಚಿತ್ರಿಸಲಾಗಿತ್ತು. ಈಗ ಫರ್ಜಿಯಲ್ಲಿ ಖೋಟಾ ನೋಟುಗಳ ಕರಾಳ ಲೋಕ ತೆರೆದಿಡಲು ರಾಜ್ ಮತ್ತು ಡಿಕೆ ಜೋಡಿ ಯತ್ನಿಸಿದೆ.

ಅತ್ಯುತ್ತಮ ಚಿತ್ರ ಕಲಾವಿದ್ ಸನ್ನಿ (ಶಾಹಿದ್ ಕಪೂರ್) ಅವರ ಸ್ನೇಹಿತ ಕಂ ಸಹೋದರ ಫಿರೋಜ್ (ಭುವನ್ ಅರೋರಾ) ಜೊತೆ ಸೇರಿ ತನ್ನ ತಾತ ಮಾಧವ್‌ (ಅಮೋಲ್ ಪಾಲೇಕರ್) ರವರ ‘ಕ್ರಾಂತಿ ಪತ್ರಿಕೆ’ ಮತ್ತು ಪ್ರಿಂಟಿಂಗ್ ಪ್ರೆಸ್ ಅನ್ನು ಉಳಿಸಿಕೊಳ್ಳಲು ದಾರಿ ಕಾಣದಿದ್ದಾಗ ತನ್ನ ಪ್ರತಿಭೆ ಬಳಸಿ ಖೋಟಾ ನೋಟು ಮುದ್ರಿಸಲು ಮುಂದಾಗುತ್ತಾನೆ. ಮೊದಲು ಪ್ರೆಸ್ ಉಳಿಸಲು ಸಾಲ ತೀರಿಸುವುದಕ್ಕಾಗಿ, ಆನಂತರ ಮನೆ – ಕಾರು ಕೊಳ್ಳುವುದಕ್ಕಾಗಿ, ಆನಂತರ ಇದೇ ಕೊನೆ ಸಲ ಎಂದುಕೊಂಡು, ಆಮೇಲೆ ಸಂದರ್ಭದ ಒತ್ತಡಗಳಿಗೆ ಒಳಗಾಗಿ ಸನ್ನಿ ಮತ್ತು ಆತನ ಸ್ನೇಹಿತ ಅಂತಾರಾಷ್ಟ್ರೀಯ ಖೋಟಾ ನೋಟು ಜಾಲದ ಭಾಗವಾಗುವುದು, ಈ ಜಾಲ ಬೇಧಿಸಲು ಮೈಖಲ್ (ವಿಜಯ್ ಸೇತುಪತಿ) ಮತ್ತು ಅವರ ಸಹೋದ್ಯೋಗಿ ಮೇಘಾ (ರಾಶಿ ಖನ್ನಾ) ಮುಂದಾಗುವುದು ಇಡೀ 8 ಎಪಿಸೋಡ್‌ಗಳ ವೆಬ್‌ ಸಿರೀಸ್‌ನ ಎಳೆ. ಆದರೆ ಮನುಷ್ಯ ಕೇವಲ ಆಹಾರ-ಮೈಥುನಗಳಿಗಷ್ಟೇ ಬದುಕುವುದಿಲ್ಲವಲ್ಲ. ಹಾಗಾಗಿ ಪ್ರತಿಯೊಂದು ಪಾತ್ರಗಳಿಗೂ ಅವರದೇ ಆದ ಪ್ಯಾಷನ್‌ಗಳಿವೆ. ಮೈಖಲ್‌ಗೆ ಖೋಟಾ ನೋಟಿನ ಕಿಂಗ್ ಪಿನ್ ಮನ್ಸೂರ್ ದಲಾಲ್‌ (ಕೆ.ಕೆ ಮೆನನ್) ಮೇಲಿನ ವಯಕ್ತಿಕ ಹಗೆತನ, ಮೇಘಾಳಿಗೆ ತಾನೊಬ್ಬ ಪ್ರೊಫೆಷನಲ್ ಕೆಲಸಗಾರ್ತಿ ಎನ್ನಿಸಿಕೊಳ್ಳುವ ಹಂಬಲ, ಮಾಧವ್‌ಗೆ ಜನರನ್ನು ಕ್ರಾಂತಿಗೆ ಕರೆತರುವ ಹುಚ್ಚು. ಒಂದು ಕಡೆ ತಾತನ ಆಸೆ ಮತ್ತು ತಮ್ಮ ಜೀವನದ ಮಹತ್ವಾಕಾಂಕ್ಷೆ ಸನ್ನಿ, ಫಿರೋಜ್‌ರವರದು. ಎಲ್ಲರ ಪಾತ್ರ ಪೋಷಣೆಯಲ್ಲಿ Raj & DK ಜೋಡಿ ಎಚ್ಚರಿಕೆ ವಹಿಸಿದೆ. ಹಾಗಾಗಿಯೇ ಸಿರೀಸ್ ಎಲ್ಲಾ ಎಪಿಸೋಡ್‌ಗಳನ್ನು ನೋಡಿಸಿಕೊಳ್ಳುತ್ತದೆ.

ನಮ್ಮ ಪ್ರಧಾನಿಯವರು 2016ರಲ್ಲಿ ಖೋಟಾ ನೋಟುಗಳ ಜಾಲವನ್ನು ಮುರಿಯುತ್ತೇನೆಂದು ಮತ್ತು ಭಯೋತ್ಪಾದನೆಯನ್ನು ಮಟ್ಟ ಹಾಕುತ್ತೇನೆಂದು 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ರಾತ್ರೋರಾತ್ರಿ ಅಮಾನ್ಯೀಕರಣ ಮಾಡಿದರು. ಆದರೆ ಖೋಟಾ ನೋಟುಗಳು ನಿಂತಿವೆಯೇ? ಭಯೋತ್ಪಾದನೆ ಕಡಿಮೆಯಾಗಿದೆಯೇ ಎಂಬ ಪ್ರಶ್ನೆ ಈ ಸೀರಿಸ್ ನೋಡುವವರಿಗೆ ಎದುರಾಗುತ್ತದೆ. ಖೋಟಾ ನೋಟುಗಳ ಅಪಾಯದ ಬಗ್ಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ, ಒಂದು ವೇಳೆ ಖೋಟಾ ನೋಟು ವಹಿವಾಟು ನಡೆಸುವ ದೊಡ್ಡ ದಂಧೆಕೋರರು ಸಿಕ್ಕಿಬಿದ್ದರೆ ಆ ಕ್ರೆಡಿಟ್ ಅನ್ನು ತಮ್ಮ ಚುನಾವಣಾ ಲಾಭಗಳಿಗೆ ಬಳಸಿಕೊಳ್ಳುವ ಹಪಾಹಪಿಯಲ್ಲಿ ಈ ಚಿತ್ರದಲ್ಲಿ ಮೂಡಿಬಂದಿದೆ.

ಚಿತ್ರದಲ್ಲಿ ಗುಜರಾತಿನ ಶಾಸಕ ಖೋಟಾ ನೋಟಿನ ದಂಧೆ ನಡೆಸುವುದು, ಬೇರೆ ದೇಶಗಳಿಂದ ಅಲ್ಲಿನ ಬಂದರುಗಳಿಗೆ ಖೋಟಾ ನೋಟುಗಳು ಬರುವುದು, ವಿರೋಧ ಪಕ್ಷದವರ ಮೇಲೆ ಸಿಬಿಐ ದಾಳಿ ನಡೆಸುವುದು ಮುಂತಾದ ಅಂಶಗಳನ್ನು ‘ಪ್ರಜ್ಞಾಪೂರ್ವಕವಾಗಿ’ ತಂದಿದ್ದಾರೆ ಅನ್ನಿಸುತ್ತದೆ.

ಕೊನೆ ಬಾಲ್‌ನಲ್ಲಿ 6 ರನ್ ಬೇಕಿದ್ದಾಗ ಆ ಶಾಟ್‌ನಲ್ಲಿ ಸರಿ, ತಪ್ಪು ಅಂತ ಇರೋಲ್ಲ, ಬರೀ ಬಾರಿಸಬೇಕು ಅಷ್ಟೇ.. ಒಂದು ಸಿಕ್ಸ್ ಹೋಗುತ್ತೆ ಇಲ್ಲ ಸೋಲ್ತಿವಿ ಅಷ್ಟೆ ಎನ್ನುತ್ತಾ ಎಂಥದ್ದೆ ಕೆಲಸಗಳಿಗೂ ಕೈ ಹಾಕಲು ಸಿದ್ದರಿರುವ ಸನ್ನಿ ಮತ್ತು ಫಿರೋಜ್‌ ತಮಗರಿವಿರದಂತೆಯೇ ಅಂತಾರಾಷ್ಟ್ರೀಯ ಖೋಟಾ ನೋಟಿನ ಮಾಫಿಯಾದ ಭಾಗವಾಗುತ್ತಾರೆ. ಮನ್ಸೂರ್ ದಲಾಲ್ ಮತ್ತು ಅವರು ಸೇರಿ ಭಾರತಕ್ಕೆ ಸಾವಿರಾರು ಕೋಟಿ ರೂ. ಖೋಟಾ ತರುವ ಪ್ರಯತ್ನ ಮಾಡುತ್ತಾರೆ. ಈ ಯತ್ನದಲ್ಲಿ ಅವರು ಯಶಸ್ವಿಯಾಗುತ್ತಾರೆಯೇ ಅಥವಾ ಅವರನ್ನು ಹೀರೋ ಮೈಖಲ್ ಹಿಡಿದು ಎಡೆಮುರಿ ಕಟ್ಟುತ್ತಾರೆಯೇ ಎಂಬುದನ್ನು ನೀವು ಈ ವೆಬ್ ಸೀರಿಸ್ ನೋಡಿಯೇ ಅರ್ಥಮಾಡಕೊಳ್ಳಬೇಕು.

“ಬಂಡಾಯ ಮತ್ತು ಕ್ರಾಂತಿ ಪದಗಳ ನಡುವಿನ ವ್ಯತ್ಯಾಸ ಏನು ಗೊತ್ತಾ? ಸೋತವರನ್ನು ಬಂಡಾಯಗಾರರು ಅಂತ ಕರೆಯುತ್ತಾರೆ. ಗೆದ್ದವರನ್ನು ಕ್ರಾಂತಿಕಾರಿ ಅನ್ನುತ್ತಾರೆ. ಆದರೆ ಯಾವಾಗಲೂ ಗೆದ್ದವರಷ್ಟೆ ಇತಿಹಾಸ ಬರೆಯುತ್ತಾರೆ. ಹಾಗಾಗಿ ನಾವು ಒಳಗಿನ ಕ್ರಾಂತಿನ ಶಾಶ್ವತವಾಗಿ ಜೀವಂತವಾಗಿ ಉಳಿಸಿಕೊಳ್ಳಬೇಕು” ಎಂಬ ಡೈಲಾಗ್ ಮಾಧವ್ ಹೇಳುತ್ತಿದ್ದರೆ, “ಪ್ರತಿಯೊಬ್ಬರಲ್ಲಿಯೂ ದುಷ್ಟತನವಿರುತ್ತದೆ, ಅದು ಹೊರಬರಲು ಸಮಯ ಕಾಯುತ್ತಿರುತ್ತದೆ” ಎನ್ನುವ ಮೂಲಕ ಸನ್ನಿ ತನ್ನ ಕೆಲಸಗಳಿಗೆ ಸಮರ್ಥನೆ ಕೊಟ್ಟುಕೊಳ್ಳುವಂತಹ ಡೈಲಾಗ್‌ಗಳು ಮನಸ್ಸಿನಲ್ಲಿ ಉಳಿಯುತ್ತವೆ.

ಮೈಖಲ್ ಹೆಂಡತಿ ಮತ್ತು ಕುಟುಂಬಕ್ಕೆ ಸಮಯ ನೀಡದೇ ಬೇಜವಾಬ್ದಾರಿಯಿಂದ ವರ್ತಿಸುವುದು, ಅದಕ್ಕೆ ಕೆಲಸದ ಒತ್ತಡ ಮತ್ತು ದೇಶಭಕ್ತಿಯ ನೆಪ ಹೇಳುವುದು, ಸದಾ ಏನನ್ನಾದರೂ ಕುಡಿದಿರು ಎಂಬ ಬೋದಿಲೇರ್‌ರವರ ಆಶಯವನ್ನು ಅವರು ಈ ಚಿತ್ರದಲ್ಲಿ ಈಡೇರಿಸುತ್ತಾರೆ. ಒಟ್ಟಾರೆಯಾಗಿ Raj & DK ಜೋಡಿ ಒಮ್ಮೆ ನೋಡಬಹುದಾದ ವೆಬ್ ಸೀರಿಸ್ ಮೂಲಕ ಮತ್ತೆ ಓಟಿಟಿಗೆ ಎಂಟ್ರಿ ಕೊಟ್ಟಿದ್ದಾರೆ. ಎರಡನೇ ಸೀಸನ್‌ಗಾಗಿ ಕಾಯುವಂತೆ ಮಾಡಿದ್ದಾರೆ. ಈ ವೆಬ್ ಸೀರಿಸ್ ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹಿಂದಿಯಲ್ಲಿ ತೆರೆಕಂಡಿರುವ ಈ ಸೀರೀಸ್‌ ಕನ್ನಡಕ್ಕೂ ಡಬ್‌ ಆಗಿದೆ.

ಇದನ್ನೂ ಓದಿ: ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...