Homeಮುಖಪುಟಫರ್ಜಿ: ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್

ಫರ್ಜಿ: ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್

- Advertisement -
- Advertisement -

ನಾವು ಪ್ರಪಂಚದ ಅತಿ ಪ್ರಾಮಾಣಿಕ ವ್ಯಕ್ತಿಯ ಫೋಟೊನಾ ಅತ್ಯಂತ ಭ್ರಷ್ಟ ವಸ್ತುವಿನ ಮೇಲೆ ಹಾಕಿದ್ದೀವಿ. ದುಡ್ಡನ್ನು ಉಳಿಸಿ ಯಾರಾದ್ರೂ ಶ್ರೀಮಂತರಾಗಿದ್ದಾರ? ಮರ್ಯಾದೆ ಅನ್ನುವುದು ಮಿಡಲ್ ಕ್ಲಾಸ್ ಜನರ ಕೈಗೆಟುಕದ ವಸ್ತು. ಅವರು ಇಡೀ ಜೀವನ ಸಾಲದಲ್ಲಿಯೇ ಮುಳುಗಿ ಸಾಲದಲ್ಲಿಯೇ ಸತ್ತು ಹೋಗುತ್ತದೆ. ಎಜುಕೇಶನ್ ಲೋನ್, ಕೆಲಸ ಸಿಕ್ಕರೆ ಬೈಕ್ ಲೋನ್, ಪ್ರಮೋಷನ್ ಸಿಕ್ಕರೆ ಕಾರ್ ಲೋನ್, ಮದುವೆ ಆದರೆ ಅದಕ್ಕೂ ಲೋನ್, ಆನಂತರ ಮಕ್ಕಳ ಎಜುಕೇಶನ್ ಲೋನ್, ಹೋಮ್ ಲೋನ್ ಹೀಗೆ… ಮದುವೆ ಮುರಿದು ಹೋದ್ರು ಲೋನ್ ಮಾತ್ರ ಮುಂದುವರೆಯುತ್ತಿರುತ್ತದೆ… ಒಟ್ನಲ್ಲಿ ನಾವು ಮಿಡಲ್ ಕ್ಲಾಸ್ ಅಲ್ಲ, ಬದಲಿಗೆ ಮಿಡಲ್ ಫಿಂಗರ್ ಕ್ಲಾಸ್…

ಹೀಗೆ ಬಹುತೇಕ ಜನರಿಗೆ ಅಪೀಲ್ ಆಗುವ ಡೈಲಾಗ್‌ಗಳ ಮೂಲಕ ಗಮನ ಸೆಳೆದ ವೆಬ್ ಸೀರಿಸ್ ಫರ್ಜಿ. ಫ್ಯಾಮಿಲಿ ಮ್ಯಾನ್ ಖ್ಯಾತಿಯ ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್ ಇದಾಗಿದ್ದು, ಈ ಮೂಲಕ ವಿಜಯ್ ಸೇತುಪತಿ ಮತ್ತು ಶಾಹಿದ್ ಕಪೂರ್ ಭರ್ಜರಿಯಾಗಿ ಓಟಿಟಿ ಪ್ರವೇಶಿಸಿದ್ದಾರೆ. Raj & DK ಜೋಡಿ ಫ್ಯಾಮಿಲಿ ಮ್ಯಾನ್-1 ರಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ತಡೆಯುವ ಕಥಹಂದರ ಹೊಂದಿತ್ತು. ಫ್ಯಾಮಿಲಿ ಮ್ಯಾನ್ -2ರಲ್ಲಿ ಎಲ್‌ಟಿಟಿಇ ಸಂಘಟನೆಯ ಕುರಿತು ಚಿತ್ರಿಸಲಾಗಿತ್ತು. ಈಗ ಫರ್ಜಿಯಲ್ಲಿ ಖೋಟಾ ನೋಟುಗಳ ಕರಾಳ ಲೋಕ ತೆರೆದಿಡಲು ರಾಜ್ ಮತ್ತು ಡಿಕೆ ಜೋಡಿ ಯತ್ನಿಸಿದೆ.

ಅತ್ಯುತ್ತಮ ಚಿತ್ರ ಕಲಾವಿದ್ ಸನ್ನಿ (ಶಾಹಿದ್ ಕಪೂರ್) ಅವರ ಸ್ನೇಹಿತ ಕಂ ಸಹೋದರ ಫಿರೋಜ್ (ಭುವನ್ ಅರೋರಾ) ಜೊತೆ ಸೇರಿ ತನ್ನ ತಾತ ಮಾಧವ್‌ (ಅಮೋಲ್ ಪಾಲೇಕರ್) ರವರ ‘ಕ್ರಾಂತಿ ಪತ್ರಿಕೆ’ ಮತ್ತು ಪ್ರಿಂಟಿಂಗ್ ಪ್ರೆಸ್ ಅನ್ನು ಉಳಿಸಿಕೊಳ್ಳಲು ದಾರಿ ಕಾಣದಿದ್ದಾಗ ತನ್ನ ಪ್ರತಿಭೆ ಬಳಸಿ ಖೋಟಾ ನೋಟು ಮುದ್ರಿಸಲು ಮುಂದಾಗುತ್ತಾನೆ. ಮೊದಲು ಪ್ರೆಸ್ ಉಳಿಸಲು ಸಾಲ ತೀರಿಸುವುದಕ್ಕಾಗಿ, ಆನಂತರ ಮನೆ – ಕಾರು ಕೊಳ್ಳುವುದಕ್ಕಾಗಿ, ಆನಂತರ ಇದೇ ಕೊನೆ ಸಲ ಎಂದುಕೊಂಡು, ಆಮೇಲೆ ಸಂದರ್ಭದ ಒತ್ತಡಗಳಿಗೆ ಒಳಗಾಗಿ ಸನ್ನಿ ಮತ್ತು ಆತನ ಸ್ನೇಹಿತ ಅಂತಾರಾಷ್ಟ್ರೀಯ ಖೋಟಾ ನೋಟು ಜಾಲದ ಭಾಗವಾಗುವುದು, ಈ ಜಾಲ ಬೇಧಿಸಲು ಮೈಖಲ್ (ವಿಜಯ್ ಸೇತುಪತಿ) ಮತ್ತು ಅವರ ಸಹೋದ್ಯೋಗಿ ಮೇಘಾ (ರಾಶಿ ಖನ್ನಾ) ಮುಂದಾಗುವುದು ಇಡೀ 8 ಎಪಿಸೋಡ್‌ಗಳ ವೆಬ್‌ ಸಿರೀಸ್‌ನ ಎಳೆ. ಆದರೆ ಮನುಷ್ಯ ಕೇವಲ ಆಹಾರ-ಮೈಥುನಗಳಿಗಷ್ಟೇ ಬದುಕುವುದಿಲ್ಲವಲ್ಲ. ಹಾಗಾಗಿ ಪ್ರತಿಯೊಂದು ಪಾತ್ರಗಳಿಗೂ ಅವರದೇ ಆದ ಪ್ಯಾಷನ್‌ಗಳಿವೆ. ಮೈಖಲ್‌ಗೆ ಖೋಟಾ ನೋಟಿನ ಕಿಂಗ್ ಪಿನ್ ಮನ್ಸೂರ್ ದಲಾಲ್‌ (ಕೆ.ಕೆ ಮೆನನ್) ಮೇಲಿನ ವಯಕ್ತಿಕ ಹಗೆತನ, ಮೇಘಾಳಿಗೆ ತಾನೊಬ್ಬ ಪ್ರೊಫೆಷನಲ್ ಕೆಲಸಗಾರ್ತಿ ಎನ್ನಿಸಿಕೊಳ್ಳುವ ಹಂಬಲ, ಮಾಧವ್‌ಗೆ ಜನರನ್ನು ಕ್ರಾಂತಿಗೆ ಕರೆತರುವ ಹುಚ್ಚು. ಒಂದು ಕಡೆ ತಾತನ ಆಸೆ ಮತ್ತು ತಮ್ಮ ಜೀವನದ ಮಹತ್ವಾಕಾಂಕ್ಷೆ ಸನ್ನಿ, ಫಿರೋಜ್‌ರವರದು. ಎಲ್ಲರ ಪಾತ್ರ ಪೋಷಣೆಯಲ್ಲಿ Raj & DK ಜೋಡಿ ಎಚ್ಚರಿಕೆ ವಹಿಸಿದೆ. ಹಾಗಾಗಿಯೇ ಸಿರೀಸ್ ಎಲ್ಲಾ ಎಪಿಸೋಡ್‌ಗಳನ್ನು ನೋಡಿಸಿಕೊಳ್ಳುತ್ತದೆ.

ನಮ್ಮ ಪ್ರಧಾನಿಯವರು 2016ರಲ್ಲಿ ಖೋಟಾ ನೋಟುಗಳ ಜಾಲವನ್ನು ಮುರಿಯುತ್ತೇನೆಂದು ಮತ್ತು ಭಯೋತ್ಪಾದನೆಯನ್ನು ಮಟ್ಟ ಹಾಕುತ್ತೇನೆಂದು 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ರಾತ್ರೋರಾತ್ರಿ ಅಮಾನ್ಯೀಕರಣ ಮಾಡಿದರು. ಆದರೆ ಖೋಟಾ ನೋಟುಗಳು ನಿಂತಿವೆಯೇ? ಭಯೋತ್ಪಾದನೆ ಕಡಿಮೆಯಾಗಿದೆಯೇ ಎಂಬ ಪ್ರಶ್ನೆ ಈ ಸೀರಿಸ್ ನೋಡುವವರಿಗೆ ಎದುರಾಗುತ್ತದೆ. ಖೋಟಾ ನೋಟುಗಳ ಅಪಾಯದ ಬಗ್ಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ, ಒಂದು ವೇಳೆ ಖೋಟಾ ನೋಟು ವಹಿವಾಟು ನಡೆಸುವ ದೊಡ್ಡ ದಂಧೆಕೋರರು ಸಿಕ್ಕಿಬಿದ್ದರೆ ಆ ಕ್ರೆಡಿಟ್ ಅನ್ನು ತಮ್ಮ ಚುನಾವಣಾ ಲಾಭಗಳಿಗೆ ಬಳಸಿಕೊಳ್ಳುವ ಹಪಾಹಪಿಯಲ್ಲಿ ಈ ಚಿತ್ರದಲ್ಲಿ ಮೂಡಿಬಂದಿದೆ.

ಚಿತ್ರದಲ್ಲಿ ಗುಜರಾತಿನ ಶಾಸಕ ಖೋಟಾ ನೋಟಿನ ದಂಧೆ ನಡೆಸುವುದು, ಬೇರೆ ದೇಶಗಳಿಂದ ಅಲ್ಲಿನ ಬಂದರುಗಳಿಗೆ ಖೋಟಾ ನೋಟುಗಳು ಬರುವುದು, ವಿರೋಧ ಪಕ್ಷದವರ ಮೇಲೆ ಸಿಬಿಐ ದಾಳಿ ನಡೆಸುವುದು ಮುಂತಾದ ಅಂಶಗಳನ್ನು ‘ಪ್ರಜ್ಞಾಪೂರ್ವಕವಾಗಿ’ ತಂದಿದ್ದಾರೆ ಅನ್ನಿಸುತ್ತದೆ.

ಕೊನೆ ಬಾಲ್‌ನಲ್ಲಿ 6 ರನ್ ಬೇಕಿದ್ದಾಗ ಆ ಶಾಟ್‌ನಲ್ಲಿ ಸರಿ, ತಪ್ಪು ಅಂತ ಇರೋಲ್ಲ, ಬರೀ ಬಾರಿಸಬೇಕು ಅಷ್ಟೇ.. ಒಂದು ಸಿಕ್ಸ್ ಹೋಗುತ್ತೆ ಇಲ್ಲ ಸೋಲ್ತಿವಿ ಅಷ್ಟೆ ಎನ್ನುತ್ತಾ ಎಂಥದ್ದೆ ಕೆಲಸಗಳಿಗೂ ಕೈ ಹಾಕಲು ಸಿದ್ದರಿರುವ ಸನ್ನಿ ಮತ್ತು ಫಿರೋಜ್‌ ತಮಗರಿವಿರದಂತೆಯೇ ಅಂತಾರಾಷ್ಟ್ರೀಯ ಖೋಟಾ ನೋಟಿನ ಮಾಫಿಯಾದ ಭಾಗವಾಗುತ್ತಾರೆ. ಮನ್ಸೂರ್ ದಲಾಲ್ ಮತ್ತು ಅವರು ಸೇರಿ ಭಾರತಕ್ಕೆ ಸಾವಿರಾರು ಕೋಟಿ ರೂ. ಖೋಟಾ ತರುವ ಪ್ರಯತ್ನ ಮಾಡುತ್ತಾರೆ. ಈ ಯತ್ನದಲ್ಲಿ ಅವರು ಯಶಸ್ವಿಯಾಗುತ್ತಾರೆಯೇ ಅಥವಾ ಅವರನ್ನು ಹೀರೋ ಮೈಖಲ್ ಹಿಡಿದು ಎಡೆಮುರಿ ಕಟ್ಟುತ್ತಾರೆಯೇ ಎಂಬುದನ್ನು ನೀವು ಈ ವೆಬ್ ಸೀರಿಸ್ ನೋಡಿಯೇ ಅರ್ಥಮಾಡಕೊಳ್ಳಬೇಕು.

“ಬಂಡಾಯ ಮತ್ತು ಕ್ರಾಂತಿ ಪದಗಳ ನಡುವಿನ ವ್ಯತ್ಯಾಸ ಏನು ಗೊತ್ತಾ? ಸೋತವರನ್ನು ಬಂಡಾಯಗಾರರು ಅಂತ ಕರೆಯುತ್ತಾರೆ. ಗೆದ್ದವರನ್ನು ಕ್ರಾಂತಿಕಾರಿ ಅನ್ನುತ್ತಾರೆ. ಆದರೆ ಯಾವಾಗಲೂ ಗೆದ್ದವರಷ್ಟೆ ಇತಿಹಾಸ ಬರೆಯುತ್ತಾರೆ. ಹಾಗಾಗಿ ನಾವು ಒಳಗಿನ ಕ್ರಾಂತಿನ ಶಾಶ್ವತವಾಗಿ ಜೀವಂತವಾಗಿ ಉಳಿಸಿಕೊಳ್ಳಬೇಕು” ಎಂಬ ಡೈಲಾಗ್ ಮಾಧವ್ ಹೇಳುತ್ತಿದ್ದರೆ, “ಪ್ರತಿಯೊಬ್ಬರಲ್ಲಿಯೂ ದುಷ್ಟತನವಿರುತ್ತದೆ, ಅದು ಹೊರಬರಲು ಸಮಯ ಕಾಯುತ್ತಿರುತ್ತದೆ” ಎನ್ನುವ ಮೂಲಕ ಸನ್ನಿ ತನ್ನ ಕೆಲಸಗಳಿಗೆ ಸಮರ್ಥನೆ ಕೊಟ್ಟುಕೊಳ್ಳುವಂತಹ ಡೈಲಾಗ್‌ಗಳು ಮನಸ್ಸಿನಲ್ಲಿ ಉಳಿಯುತ್ತವೆ.

ಮೈಖಲ್ ಹೆಂಡತಿ ಮತ್ತು ಕುಟುಂಬಕ್ಕೆ ಸಮಯ ನೀಡದೇ ಬೇಜವಾಬ್ದಾರಿಯಿಂದ ವರ್ತಿಸುವುದು, ಅದಕ್ಕೆ ಕೆಲಸದ ಒತ್ತಡ ಮತ್ತು ದೇಶಭಕ್ತಿಯ ನೆಪ ಹೇಳುವುದು, ಸದಾ ಏನನ್ನಾದರೂ ಕುಡಿದಿರು ಎಂಬ ಬೋದಿಲೇರ್‌ರವರ ಆಶಯವನ್ನು ಅವರು ಈ ಚಿತ್ರದಲ್ಲಿ ಈಡೇರಿಸುತ್ತಾರೆ. ಒಟ್ಟಾರೆಯಾಗಿ Raj & DK ಜೋಡಿ ಒಮ್ಮೆ ನೋಡಬಹುದಾದ ವೆಬ್ ಸೀರಿಸ್ ಮೂಲಕ ಮತ್ತೆ ಓಟಿಟಿಗೆ ಎಂಟ್ರಿ ಕೊಟ್ಟಿದ್ದಾರೆ. ಎರಡನೇ ಸೀಸನ್‌ಗಾಗಿ ಕಾಯುವಂತೆ ಮಾಡಿದ್ದಾರೆ. ಈ ವೆಬ್ ಸೀರಿಸ್ ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹಿಂದಿಯಲ್ಲಿ ತೆರೆಕಂಡಿರುವ ಈ ಸೀರೀಸ್‌ ಕನ್ನಡಕ್ಕೂ ಡಬ್‌ ಆಗಿದೆ.

ಇದನ್ನೂ ಓದಿ: ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...