Homeಕರ್ನಾಟಕಸ್ಪಷ್ಟ ನಿಲುವು ತಾಳದ ಸಭೆ: ರಸಗೊಬ್ಬರ ದರ ಏರಿಕೆ ಖಚಿತ - ಹೊಸ ಗೊಬ್ಬರಕ್ಕೆ ಹೆಚ್ಚಿನ...

ಸ್ಪಷ್ಟ ನಿಲುವು ತಾಳದ ಸಭೆ: ರಸಗೊಬ್ಬರ ದರ ಏರಿಕೆ ಖಚಿತ – ಹೊಸ ಗೊಬ್ಬರಕ್ಕೆ ಹೆಚ್ಚಿನ ಬೆಲೆ!

- Advertisement -
- Advertisement -

ರಸಗೊಬ್ಬರ ಬೆಲೆ ಏರಿಕೆಯ ವಿಷಯದಲ್ಲಿ ಭುಗಿಲೆದ್ದಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸೋಮವಾರ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರ ನೇತೃತ್ವದಲ್ಲಿ ನಡೆದ ಸಭೆ ಸ್ಪಷ್ಟ ನಿಲುವು ತಾಳದೆ ಅಂತ್ಯಗೊಂಡಿದೆ.

ಇತ್ತೀಚೆಗೆ ಇಫ್ಕೊ, ರಸಗೊಬ್ಬರದ ಮೇಲೆ ಶೇ. 58ರಷ್ಟು ಬೆಲೆ ಹೆಚ್ಚಳ ಪ್ರಕಟಿಸಿದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರೈತ ಸಂಘಟನೆಗಳು ಮತ್ತು ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಸಚಿವರು ಸಭೆ ಕರೆದಿದ್ದರು.

ಸಭೆ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಸಚಿವರು, ಇಫ್ಕೋದೊಂದಿಗೆ ನಡೆಸಿದ ಚರ್ಚೆಯ ಬಳಿಕ ಡಿಎಪಿ ಮತ್ತು ಎನ್‌ಪಿಕೆ ಗೊಬ್ಬರದ ಹಳೆಯ ಸ್ಟಾಕ್ಅನ್ನು ಹಳೆಯ ದರದಲ್ಲೇ ಮಾರಲು ಒಪ್ಪಿದ್ದಾರೆ ಎಂದು ತಿಳಿಸಿದರು.

ದೇಶದ ರೈತರ ಹಿತದೃಷ್ಟಿಯಿಂದ ಸರ್ಕಾರವು ಉತ್ಪಾದನೆ, ಗೊಬ್ಬರದ ಲಭ್ಯತೆ ಮತ್ತು ವಹಿವಾಟವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಟ್ವೀಟ್‌ನಲ್ಲಿ ಅವರು ತಿಳಿಸಿದ್ದಾರೆ.

ಟ್ವೀಟ್‌ನೊಂದಿಗೆ ಇಫ್ಕೋ ಸಂಸ್ಥೆ ಬರೆದ ಪತ್ರವೊಂದನ್ನು ಲಗತ್ತಿಸಿದ್ದು, ಅದರಲ್ಲಿ, ಮಾರ್ಚ್‌ 31ರವರೆಗೆ ಡಿಎಪಿ, ಎನ್‌ಪಿಕೆ ಗೊಬ್ಬರ ದರವನ್ನು ಹೆಚ್ಚು ಮಾಡಿಲ್ಲ. ಡಿಎಪಿ ದರ 1200 ರೂ ಮತ್ತು ಎನ್‌ಪಿಕೆ ದರ 1185 ರೂ ಹಾಗೂ ಎನ್‌ಪಿ ದರ 925 ರೂ ಇದ್ದು ಇದೇ ದರದಲ್ಲಿ ಹಳೆಯ ಸ್ಟಾಕ್‌ ಮುಗಿಯುವವರೆಗೆ ನೀಡಲಾಗುವುದು. ಆದರೆ ಗೊಬ್ಬರ ತಯಾರಿಕೆಗೆ ಬಳಕೆಯಾಗುವ ಕಚ್ಚಾ ವಸ್ತುಗಳ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇದೇ ತಿಂಗಳಲ್ಲಿ ದರ ಹೆಚ್ಚಿಸುವುದಾಗಿ ಹೇಳಿದೆ.

ಏಪ್ರಿಲ್‌ 1ರ ವರೆಗೆ ದೇಶದಲ್ಲಿ ಲಭ್ಯವಿರುವ ಒಟ್ಟು ಗೊಬ್ಬರ ದಾಸ್ತಾನಿನ ವಿವರಗಳನ್ನು ಪತ್ರದಲ್ಲಿ ನೀಡಿದೆ. ದೇಶದಾದ್ಯಂತ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳ ಬಳಿ 67,241 ಮೆಟ್ರಿಕ್‌ ಟನ್‌, ವೇರ್‌ಹೌಸ್‌ಗಳಲ್ಲಿ 55,315 ಮಟ್ರಿಕ್‌ ಟನ್‌ ಸೇರಿ ಒಟ್ಟು 1,22,556 ಮೆಟ್ರಿಕ್‌ ಟನ್‌ನಷ್ಟು ಗೊಬ್ಬರವಿದ್ದು, ಇದು ಈಗ ಹಳೆಯ ದರದಲ್ಲಿ ಲಭ್ಯವಾಗಲಿದೆ.

ಆದರೆ ಈಗಾಗಲೇ ಹೊಸದರ ಮುದ್ರಿಸಿದ ಬ್ಯಾಗ್‌ಗಳನ್ನು ದಾಸ್ತಾನು ಮಳಿಗೆಗಳಿಗೆ ಪೂರೈಸಲಾಗಿದ್ದು, ಅದು ಯಾವ ದರದಲ್ಲಿ ಮಾರಟವಾಗಲಿದೆ ಎಂಬ ಬಗ್ಗೆ ಗೊಂದಲಗಳು ಉಂಟಾಗಿವೆ. ಈ ಕುರಿತು ಸರ್ಕಾರದ ನಡೆಯ ಬಗ್ಗೆ ಅನುಮಾನಗಳಿಗೆ ಕಾರಣವಾಗಿದೆ ಎಂದು ರೈತ ಸಂಘಟನೆಗಳು ಪ್ರತಿಕ್ರಿಯಿಸಿವೆ.


ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...