Homeಕರ್ನಾಟಕಸ್ಪಷ್ಟ ನಿಲುವು ತಾಳದ ಸಭೆ: ರಸಗೊಬ್ಬರ ದರ ಏರಿಕೆ ಖಚಿತ - ಹೊಸ ಗೊಬ್ಬರಕ್ಕೆ ಹೆಚ್ಚಿನ...

ಸ್ಪಷ್ಟ ನಿಲುವು ತಾಳದ ಸಭೆ: ರಸಗೊಬ್ಬರ ದರ ಏರಿಕೆ ಖಚಿತ – ಹೊಸ ಗೊಬ್ಬರಕ್ಕೆ ಹೆಚ್ಚಿನ ಬೆಲೆ!

- Advertisement -
- Advertisement -

ರಸಗೊಬ್ಬರ ಬೆಲೆ ಏರಿಕೆಯ ವಿಷಯದಲ್ಲಿ ಭುಗಿಲೆದ್ದಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸೋಮವಾರ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರ ನೇತೃತ್ವದಲ್ಲಿ ನಡೆದ ಸಭೆ ಸ್ಪಷ್ಟ ನಿಲುವು ತಾಳದೆ ಅಂತ್ಯಗೊಂಡಿದೆ.

ಇತ್ತೀಚೆಗೆ ಇಫ್ಕೊ, ರಸಗೊಬ್ಬರದ ಮೇಲೆ ಶೇ. 58ರಷ್ಟು ಬೆಲೆ ಹೆಚ್ಚಳ ಪ್ರಕಟಿಸಿದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರೈತ ಸಂಘಟನೆಗಳು ಮತ್ತು ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಸಚಿವರು ಸಭೆ ಕರೆದಿದ್ದರು.

ಸಭೆ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಸಚಿವರು, ಇಫ್ಕೋದೊಂದಿಗೆ ನಡೆಸಿದ ಚರ್ಚೆಯ ಬಳಿಕ ಡಿಎಪಿ ಮತ್ತು ಎನ್‌ಪಿಕೆ ಗೊಬ್ಬರದ ಹಳೆಯ ಸ್ಟಾಕ್ಅನ್ನು ಹಳೆಯ ದರದಲ್ಲೇ ಮಾರಲು ಒಪ್ಪಿದ್ದಾರೆ ಎಂದು ತಿಳಿಸಿದರು.

ದೇಶದ ರೈತರ ಹಿತದೃಷ್ಟಿಯಿಂದ ಸರ್ಕಾರವು ಉತ್ಪಾದನೆ, ಗೊಬ್ಬರದ ಲಭ್ಯತೆ ಮತ್ತು ವಹಿವಾಟವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಟ್ವೀಟ್‌ನಲ್ಲಿ ಅವರು ತಿಳಿಸಿದ್ದಾರೆ.

ಟ್ವೀಟ್‌ನೊಂದಿಗೆ ಇಫ್ಕೋ ಸಂಸ್ಥೆ ಬರೆದ ಪತ್ರವೊಂದನ್ನು ಲಗತ್ತಿಸಿದ್ದು, ಅದರಲ್ಲಿ, ಮಾರ್ಚ್‌ 31ರವರೆಗೆ ಡಿಎಪಿ, ಎನ್‌ಪಿಕೆ ಗೊಬ್ಬರ ದರವನ್ನು ಹೆಚ್ಚು ಮಾಡಿಲ್ಲ. ಡಿಎಪಿ ದರ 1200 ರೂ ಮತ್ತು ಎನ್‌ಪಿಕೆ ದರ 1185 ರೂ ಹಾಗೂ ಎನ್‌ಪಿ ದರ 925 ರೂ ಇದ್ದು ಇದೇ ದರದಲ್ಲಿ ಹಳೆಯ ಸ್ಟಾಕ್‌ ಮುಗಿಯುವವರೆಗೆ ನೀಡಲಾಗುವುದು. ಆದರೆ ಗೊಬ್ಬರ ತಯಾರಿಕೆಗೆ ಬಳಕೆಯಾಗುವ ಕಚ್ಚಾ ವಸ್ತುಗಳ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇದೇ ತಿಂಗಳಲ್ಲಿ ದರ ಹೆಚ್ಚಿಸುವುದಾಗಿ ಹೇಳಿದೆ.

ಏಪ್ರಿಲ್‌ 1ರ ವರೆಗೆ ದೇಶದಲ್ಲಿ ಲಭ್ಯವಿರುವ ಒಟ್ಟು ಗೊಬ್ಬರ ದಾಸ್ತಾನಿನ ವಿವರಗಳನ್ನು ಪತ್ರದಲ್ಲಿ ನೀಡಿದೆ. ದೇಶದಾದ್ಯಂತ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳ ಬಳಿ 67,241 ಮೆಟ್ರಿಕ್‌ ಟನ್‌, ವೇರ್‌ಹೌಸ್‌ಗಳಲ್ಲಿ 55,315 ಮಟ್ರಿಕ್‌ ಟನ್‌ ಸೇರಿ ಒಟ್ಟು 1,22,556 ಮೆಟ್ರಿಕ್‌ ಟನ್‌ನಷ್ಟು ಗೊಬ್ಬರವಿದ್ದು, ಇದು ಈಗ ಹಳೆಯ ದರದಲ್ಲಿ ಲಭ್ಯವಾಗಲಿದೆ.

ಆದರೆ ಈಗಾಗಲೇ ಹೊಸದರ ಮುದ್ರಿಸಿದ ಬ್ಯಾಗ್‌ಗಳನ್ನು ದಾಸ್ತಾನು ಮಳಿಗೆಗಳಿಗೆ ಪೂರೈಸಲಾಗಿದ್ದು, ಅದು ಯಾವ ದರದಲ್ಲಿ ಮಾರಟವಾಗಲಿದೆ ಎಂಬ ಬಗ್ಗೆ ಗೊಂದಲಗಳು ಉಂಟಾಗಿವೆ. ಈ ಕುರಿತು ಸರ್ಕಾರದ ನಡೆಯ ಬಗ್ಗೆ ಅನುಮಾನಗಳಿಗೆ ಕಾರಣವಾಗಿದೆ ಎಂದು ರೈತ ಸಂಘಟನೆಗಳು ಪ್ರತಿಕ್ರಿಯಿಸಿವೆ.


ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...