Homeಮುಖಪುಟರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

ರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

- Advertisement -
- Advertisement -

ನೆಲ ಹದ ಮಾಡುವ ಮಳೆಯ ನಿರಿಕ್ಷೆಯಲ್ಲಿರುವ ರೈತರಿಗೆ ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೊಡ್ಡ ಹೊಡೆತ ನೀಡಿದೆ. ರಸ ಗೊಬ್ಬರ ದರಗಳನ್ನು ಏರಿಸುವ ಮೂಲಕ ಅದು ರೈತರನ್ನು ‘ಕೊಲ್ಲಲು’ ಹೊರಟಿದೆಯಾ ಎಂಬ ಪ್ರಶ್ನೆ ಕೇಳಿ ಬರುತ್ತಿವೆ.

ಶೇ. 45-58 ರವೆರೆಗೆ ಇಫ್ಕೋ ಗೊಬ್ಬರದ ದರಗಳನ್ನು ಏರಿಸಿದೆ. ಅಂದರೆ 50 ಕೆಜಿ ಡಿಎಪಿ ಬೆಲೆ 1200 ಇದ್ದುದ್ದು ಏಕಾಏಕಿ 1900 ರೂ ಆಗಿದೆ. ಇದು ದೇಶದ ಕೃಷಿ ವ್ಯವಸ್ಥೆಯನ್ನು ಜರ್ಜರಿತಗೊಳಿಸಲಿದೆ. ಈ ಕುರಿತು ರಾಜ್ಯದ ವಿವಿಧ ಭಾಗಗಳ ರೈತರು, ಕೃಷಿತಜ್ಞರನ್ನು  ನಾನುಗೌರಿ.ಕಾಂ ಮಾತನಾಡಿಸಿತು.

‘ಈ ಸಲ ಗೊಬ್ಬರ ತೆಗೆದುಕೊಳ್ಳಾಕೂ ಮೊದ್ಲು, ಎಣ್ಣಿ (ಕ್ರಿಮಿನಾಶಕ) ತಗೋಳ್ಳೊದೇ ವಾಸಿ’ ಎಂದರು ಸಿಂಧನೂರು ತಾಲೂಕಿನ ಮಾಟೂರಿನ ಯುವ ರೈತ ಬಸನಗೌಡ ಸಂಜಿ.
‘ಅಲ್ರಿ, ಡಿಎಪಿ ಗೊಬ್ಬರದ 50 ಕೆಜಿ ಚಿಲಕ್ಕ 1,900 ರೂ ಅಂತೆ. ಅಂದ್ರ ಈ ಸಲ ಎರಡು ಎಕರೆ ಭತ್ತದ ಬೆಳಗೆ 5-6 ಸಾವಿರ ಹೆಚ್ಚುವರಿ ರೊಕ್ಕ ಹಾಕ್ಬೇಕು. ಅದ್ಯಾವುದೋ ತಾಂತ್ರಿಕ ನೆಪದಲ್ಲಿ ನಮ್ಮ ಕಡೆ ಬೆಳೆದ ಭತ್ತಕ್ಕೆ ಸರಿಯಾದ ಎಂಎಸ್‌ಪಿನೂ ಕೊಡ್ತಾ ಇಲ್ಲ. ಪಂಜಾಬಿನ ರೈತರಂತೆ ನಾವು ಕೂಡ ಸಂಘಟಿತರಾಗುವ ಸಂದರ್ಭವಿದು’ ಎಂದು ಬಸನಗೌಡ ಹೇಳಿದರು.

‘ಈಗೀಗ ನಮಗೆ ಗೊತ್ತಾಗುತ್ತಿದೆ, ಯೋಗೇಂದ್ರ ಯಾದವ್, ದೇವಿಂದರ್ ಸಿಂಗ್ ಹೇಳುವ ಸತ್ಯಗಳು. ಇವೆಲ್ಲ ನಮ್ಮ ರೈತರಿಗೆ ತಲುಪಲು ನಿಮ್ಮಂತಹ ಮೀಡಿಯಾ ಕನ್ನಡದಲ್ಲಿ ಇನ್ನಷ್ಟು ವಿವರ ಕೊಡಬೇಕು’ ಎಂದರಲ್ಲದೇ, ‘ಭೂರಹಿತರು ಲೀಸ್‌ನಲ್ಲಿ ಒಂದೋ-ಎರಡು ಎಕರೆ ಜಮೀನಿನಿನಲ್ಲಿ ಬೆಳೆದು ಬದುಕು ಕಟ್ಟಕೊಳ್ತಾ ಇದ್ದರು. ಈ ಸಲ ಅವರು ಈ ಅಪಾಯದ ಕೃಷಿ ಮಾಡಂಗಿಲ್ಲ. ಮತ್ತೆ ಗುಳೆ ಹೋಗ್ತಾರೆ ಅಷ್ಟೇ’ ಎಂದು ಆ ಭಾಗದ ವಾಸ್ತವ ಚಿತ್ರಣವನ್ನು ನಮ್ಮ ಮುಂದೆ ಇಟ್ಟರು.

‘ಕಳೆದ ವರ್ಷ ಎಲ್ಲ ಕ್ಷೇತ್ರಗಳೂ ಮುಗ್ಗಟ್ಟಿನಲ್ಲಿದ್ದಾಗ, ಈ ದೇಶದ ಜಿಡಿಪಿಗೆ ಹೆಚ್ಚಿನ ನೆರವು ನಿಡಿದ್ದು ಕೃಷಿ. ಅದು ಎಲ್ಲಾ ಸಂಕಷ್ಟಗಳ ನಡುವೆಯೂ ಈ ದೇಶಕ್ಕೆ ಅನ್ನ ನಿಡಿದೆ. ಈಗ ಗೊಬ್ಬರದ ದರ ಹೆಚ್ಚಿಸಿ ಕೃಷಿ ಕ್ಷೇತ್ರವನ್ನೆ ನಾಶ ಮಾಡಲು ಹೊರಟಿದೆ ಮೋದಿ ಸರ್ಕಾರ’ ಎಂದು ಹಿಂದೆ ಹಲವು ದಶಕಗಳ ಕಾಲ ಕೃಷಿ ಮಾಡಿದ ಲೇಖಕ ಕೆ.ಪಿ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಇದೇ ತರಹದ ಅಭಿಪ್ರಾಯ ವ್ಯಕ್ತಪಡಿಸಿದ ಕೃಷಿ ತಜ್ಞ ಪ್ರಕಾಶ ಕಮ್ಮರಡಿ, ‘ನಾಟಿ, ಬಿತ್ತನೆ ಮಾಡುವ ಈ ಸಂದರ್ಭದಲ್ಲಿ ಇವರು ಗೊಬ್ಬರದ ದರ ಜಾಸ್ತಿ ಮಾಡಿ ರೈತರನ್ನು ಕೊಲ್ಲಲು ಹೊರಟಿದ್ದಾರೆ. ಈ ಸಂದರ್ಭದಲ್ಲಿ ರೈತರು ಹೇಗೋ ಬೀಜದ ತಯಾರಿ ಮಾಡಿಕೊಂಡಿದ್ದಾರೆ. ಆದರೆ 1,900 ರೂಪಾಯಿ ಕೊಟ್ಟು 50ಕೆಜಿಯ ಡಿಎಪಿ ಪಡೆಯಲು ಆಗುತ್ತದಾ? ನಮ್ಮ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಕಳೆದ ಸಾಲಿನ ಶೇ.30ರಷ್ಟು ಕೃಷಿ ಉತ್ಪನ್ನ ಮಾರಾಟವಾಗಿಯೇ ಇಲ್ಲ. ಅದರಲ್ಲಿ ಶೇ. 18ರಷ್ಟು ಹಾಳಾಗಿ ಹೋಗಿದೆ. ರೈತರ ಬಳಿ ಹಣವಿಲ್ಲ. ಚುನಾವಣೆಗಳ ನಂತರ ಈ ಸರ್ಕಾರ ಕ್ರೂರವಾಗಿ ರೈತರ ಮೇಲೆ ಆಕ್ರಮಣ ಮಾಡಿದೆ’ ಎಂದರು.

ಮಂಡ್ಯದ ಎಲೆಚಾಕನಹಳ್ಳಿಯ ಸಣ್ಣ ರೈತ ವೈ.ಜೆ. ಸ್ವಾಮಿ ಮಾತನಾಡಿ, ‘ಮುಕ್ಕಾಲು ಎಕರೆಯಲ್ಲಿ ಚೊಟ್ ಪೈರು (ಬೀನ್ಸ್ ತರಹದ ತರಕಾರಿ) ಹಾಕಿದ್ದೇವೆ. ಈಗ ಕೆಜಿಗೆ 15 ರೂ ದರ ಇದೆ. ಆದರೆ ಡಿಎಪಿ ದರ ಹೆಚಾಗಿದ್ದರಿಂದ ಮತ್ತೆ ಗೊಬ್ಬರ ಹಾಕಿದರೆ ನಾವು ಮಾಡಿದ ಖರ್ಚು ಸಹ ನಮ್ಮ ಕೈಗೆ ಸಿಗಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಒಣ ಬೇಸಾಯದವರ ಕಷ್ಟ ಕೇಳುವಂತಿಲ್ಲ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಣ್ಣ ರೈತ ಮಲ್ಲಪ್ಪ ಅವರು, ನಮ್ಮ ಎದುರು ಕೃಷಿ ಸಂಕಷ್ಟದ ಇನ್ನೊಂದು ಆಯಾಮವನ್ನು ಮುಂದೆ ಇಟ್ಟರು. ‘ಹಳ್ಳಿಕಡೆ ಜಮೀನ್ದಾರರು ಬೀಜ, ಗೊಬ್ಬರ ಅಂಗಡಿ ಇಟ್ಟಾರು. ಮೊದ್ಲ ಅಪರಾತಪರಾ ರೇಟು ಹಾಕಿ, ಬಡ್ಡಿ ವಸೂಲಿ ಮಾಡ್ತಾ ಇದ್ದರು. ಈಗ ಗೊಬ್ಬರ ರೇಟು ಜಾಸ್ತಿ ಆದ ಮ್ಯಾಗ ಅವರ ಕಂತ್ರಿಗಿರಿ ಇನ್ನಾಕಿಷ್ಟ ಹೆಚ್ಚಾಗುತ್ತ. ಇಲ್ಲಿ ನಾವು ಮಳಿ ನಂಬಿ ಹೊಲ ಮಾಡೋ ಮಂದಿ. ಎರಡೆಕೆಗೆ ಗೊಬ್ಬರ ಖರ್ಚು 5-6 ಸಾವಿರ ಹೆಚಾದ್ರ, ಸಣ್ಣಪುಟ್ಟ ಹೊಲ ಹೊಂದಿರೋ ಮಂದಿ ಹೊಲ ಲಾವಣಿ ಹಾಕಿ ಎಲ್ಲೇರ ದುಡಿಯಾಕ್ ಹೋಗಬೇಕಾಗುತ್ತದೆ’ ಎಂದು ಮಲ್ಲಪ್ಪ ತಿಳಿಸಿದರು.

‘ಒಂದು ಕೈಗಾರಿಕೆಗೆ ಮೊದಲ ವರ್ಷ ಉಚಿತ ಅಥವಾ ರಿಯಾಯತಿ ದರದಲ್ಲಿ ನೀರು, ವಿದ್ಯುತ್ ಕೊಡುವ ಸರ್ಕಾರ, ಈಗ ರೈತರಿಗೆ ಸಬ್ಸಿಡಿಯಲ್ಲಿ ಗೊಬ್ಬರ ನೀಡಬೇಕು. ನಾಲ್ಕು ತಿಂಗಳಷ್ಟೇ, ಅವರು ಅದರ ಹತ್ತು ಪಟ್ಟು ವಾಪಾಸ್ ನೀಡುತ್ತಾರೆ. ಕಳೆದ ಆರ್ಥಿಕ ವರ್ಷದಲ್ಲಿ ದೇಶದ ಗ್ರಾಮೀಣ ಭಾಗ ಉಳಿದಿದ್ದೇ ರೈತರ ಉತ್ಪನ್ನಗಳಿಂದ. ಹಾಗೆಯೇ ನಗರದವರಿಗೂ ಆಹಾರಧಾನ್ಯ ಸಹಜ ಬೆಲೆಯಲ್ಲಿ ಸಿಕ್ಕಿದ್ದು ರೈತರ ಪರಿಶ್ರಮದಿಂದ. ಸರ್ಕಾರ ಕೃಷಿಯನ್ನೇ ನಾಶ ಮಾಡಲು ಹೊರಟಂತಿದೆ’ ಎಂದು ಕೆ.ಪಿ. ಸುರೇಶ್ ಹೇಳುತ್ತಾರೆ.

ಗೊಬ್ಬರದ ಬೆಲೆ ಏರಿಕೆಗೆ ಕಾರಣವೇನು?: ಶಿವಸುಂದರ್

ಈ ಗೊಬ್ಬರದ ರಾಜಕೀಯ ಕುರಿತು ರಾಜಕೀಯ ಚಿಂತಕ ಶಿವಸುಂದರ್ ಅಭಿಪ್ರಾಯಗಳು ಹೀಗಿವೆ:

ಇದು ಗೊಬ್ಬರ ಕಂಪನಿಗಳು ದಿಢೀರನೆ ತೆಗೆದುಕೊಂಡ ತೀರ್ಮಾನವಲ್ಲ. ಬದಲಿಗೆ ಗೊಬ್ಬರ ಸಬ್ಸಿಡಿಯನ್ನು ಹಂತ ಹಂತವಾಗಿ ಹಿಂತೆಗೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ರೈತವಿರೋಧಿ ನೀತಿಗಳ ತಾರ್ಕಿಕ ಪರಿಣಾಮವೇ ಆಗಿದೆ. ಈ ಗೊಬ್ಬರ ಸಬ್ಸಿಡಿ ಹಿಂತೆಗೆತ ಯೋಜನೆ 1992ರ ಭೋಸ್ಲೆ ಸಮಿತಿಯ ಪರಿಣಾಮವಾಗಿ ಪ್ರಾರಂಭವಾಗಿದ್ದು, ಈಗಿನ ಮೋದಿ ಸರ್ಕಾರದಲ್ಲಿ ತೀವ್ರ ಆಕ್ರಮಣಕಾರಿ ಸ್ವರೂಪವನ್ನು ಪಡೆಯುತ್ತಿದೆ….

1991ರ ತನಕ ಭಾರತ ಸರ್ಕಾರದ ಗೊಬ್ಬರ ನೀತಿಗಳು ಪ್ರಧಾನವಾಗಿ ಗೊಬ್ಬರ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ಅದನ್ನು ಅಗ್ಗದ ದರದಲ್ಲಿ ರೈತಾಪಿಗೆ ತಲುಪಿಸುವ ಬಗ್ಗೆ ಗಮನ ಕೇಂದ್ರೀಕರಿಸಿದ್ದವು. ಹೀಗಾಗಿಯೇ 1977ರಲ್ಲಿ ರಸಗೊಬ್ಬರ ಬೆಲೆ ನಿಯಂತ್ರಣ ಮತ್ತು ಸರಬರಾಜು ನಿಯಮಗಳು ಜಾರಿಗೆ ಬಂದವು. ಅದರಡಿಯಲ್ಲಿ ಸರ್ಕಾರವೇ ಮೊದಲು ಯೂರಿಯಾ ಮತ್ತು ಆ ನಂತರ ಎಲ್ಲಾ ಬಗೆಯ ರಸಗೊಬ್ಬರಗಳಿಗೂ ಮಾರಾಟ ಬೆಲೆಯನ್ನು ನಿಗದಿ ಮಾಡಿತು. ಅದಕ್ಕೇ ಮೀರಿ ಆಗುತ್ತಿದ್ದ ಉತ್ಪಾದನಾ ವಚ್ಚವನ್ನು ನೇರವಾಗಿ ಗೊಬ್ಬರ ಕಂಪನಿಗಳಿಗೆ ಪಾವತಿ ಮಾಡುತ್ತಿತ್ತು. ಹೀಗಾಗಿ 1990ರ ದಶಕದವರೆಗೂ ಎಲ್ಲಾ ಗೊಬ್ಬರಗಳೂ ಯೂರಿಯಾದಷ್ಟೇ ಬೆಲೆಗೆ ಮಾರಾಟವಾಗುತ್ತಿದ್ದವು.

ಆದರೆ 1991ರಲ್ಲಿ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳು ಜಾರಿಗೆ ಬಂದ ನಂತರ ಜನರ ಕಲ್ಯಾಣಕ್ಕಾಗಿ ಮಾಡುತ್ತಿದ್ದ ವೆಚ್ಚಗಳನ್ನು ಕಡಿಮೆ ಮಾಡಿ ಆ ಸಂಪನ್ಮೂಲವನ್ನು ಉದ್ದಿಮೆಗಳ ಲಾಭವನ್ನು ಹೆಚ್ಚಿಸಲು ಬೇಕಾದ ಮೂಲಭೂತ ಸೌಕರ್ಯವನ್ನು ಹೆಚ್ಚಿಸುವುದು ಆರ್ಥಿಕ ತತ್ವವಾಯಿತು.

ಅದರ ಭಾಗವಾಗಿಯೇ ಗೊಬ್ಬರ ನೀತಿಯೂ ಬದಲಾಗಿ, ಗೊಬ್ಬರಕ್ಕೆ ಕೊಡುತ್ತಿದ್ದ ಸಬ್ಸಿಡಿ ಹೊರೆಯನ್ನು ಹಾಗೂ ಆಮದು ಮಾಡಿಕೊಳ್ಳುತ್ತಿರುವುದರಿಂದ ಹೆಚ್ಚುತ್ತಿರುವ ವಿದೇಶಿ ವಿನಿಮಯ ಹೊರೆಯನ್ನು ತಪ್ಪಿಸಿಕೊಳ್ಳುವುದು ಹೇಗೆ ಎಂಬುದೇ 1991ರ ನಂತರದ ಎಲ್ಲಾ ಸರ್ಕಾರಗಳ ಪ್ರಮುಖ ಲಕ್ಷ್ಯವಾಯಿತು. ಅದರ ಭಾಗವಾಗಿ 1992ರಲ್ಲಿ ಯೂರಿಯಾವನ್ನು ಹೊರತುಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳಿಗೆ ಕೊಡುತ್ತಿದ್ದ ಸಬ್ಸಿಡಿಯನ್ನು ಪಾಕ್ಷಿಕವಾಗಿ ಹಿಂತೆಗೆದುಕೊಳ್ಳಲಾಯಿತು. ಹೀಗಾಗಿ ಯೂರಿಯವನ್ನು ಹೊರತು ಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳ ಬೆಲೆ ಹಲವು ಪಟ್ಟು ಏರಿಕೆಯಾಯಿತು. ಸಹಜವಾಗಿಯೇ ಇದರಿಂದ ಯೂರಿಯೇತರ ಗೊಬ್ಬರಗಳ ಬಳಕೆ ಹಾಗೂ ಉತ್ಪಾದನೆಯೂ ಕುಂಠಿತವಾಯಿತು.


ಇದನ್ನೂ ಓದಿ; ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...