Homeಮುಖಪುಟರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

ರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

- Advertisement -
- Advertisement -

ನೆಲ ಹದ ಮಾಡುವ ಮಳೆಯ ನಿರಿಕ್ಷೆಯಲ್ಲಿರುವ ರೈತರಿಗೆ ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೊಡ್ಡ ಹೊಡೆತ ನೀಡಿದೆ. ರಸ ಗೊಬ್ಬರ ದರಗಳನ್ನು ಏರಿಸುವ ಮೂಲಕ ಅದು ರೈತರನ್ನು ‘ಕೊಲ್ಲಲು’ ಹೊರಟಿದೆಯಾ ಎಂಬ ಪ್ರಶ್ನೆ ಕೇಳಿ ಬರುತ್ತಿವೆ.

ಶೇ. 45-58 ರವೆರೆಗೆ ಇಫ್ಕೋ ಗೊಬ್ಬರದ ದರಗಳನ್ನು ಏರಿಸಿದೆ. ಅಂದರೆ 50 ಕೆಜಿ ಡಿಎಪಿ ಬೆಲೆ 1200 ಇದ್ದುದ್ದು ಏಕಾಏಕಿ 1900 ರೂ ಆಗಿದೆ. ಇದು ದೇಶದ ಕೃಷಿ ವ್ಯವಸ್ಥೆಯನ್ನು ಜರ್ಜರಿತಗೊಳಿಸಲಿದೆ. ಈ ಕುರಿತು ರಾಜ್ಯದ ವಿವಿಧ ಭಾಗಗಳ ರೈತರು, ಕೃಷಿತಜ್ಞರನ್ನು  ನಾನುಗೌರಿ.ಕಾಂ ಮಾತನಾಡಿಸಿತು.

‘ಈ ಸಲ ಗೊಬ್ಬರ ತೆಗೆದುಕೊಳ್ಳಾಕೂ ಮೊದ್ಲು, ಎಣ್ಣಿ (ಕ್ರಿಮಿನಾಶಕ) ತಗೋಳ್ಳೊದೇ ವಾಸಿ’ ಎಂದರು ಸಿಂಧನೂರು ತಾಲೂಕಿನ ಮಾಟೂರಿನ ಯುವ ರೈತ ಬಸನಗೌಡ ಸಂಜಿ.
‘ಅಲ್ರಿ, ಡಿಎಪಿ ಗೊಬ್ಬರದ 50 ಕೆಜಿ ಚಿಲಕ್ಕ 1,900 ರೂ ಅಂತೆ. ಅಂದ್ರ ಈ ಸಲ ಎರಡು ಎಕರೆ ಭತ್ತದ ಬೆಳಗೆ 5-6 ಸಾವಿರ ಹೆಚ್ಚುವರಿ ರೊಕ್ಕ ಹಾಕ್ಬೇಕು. ಅದ್ಯಾವುದೋ ತಾಂತ್ರಿಕ ನೆಪದಲ್ಲಿ ನಮ್ಮ ಕಡೆ ಬೆಳೆದ ಭತ್ತಕ್ಕೆ ಸರಿಯಾದ ಎಂಎಸ್‌ಪಿನೂ ಕೊಡ್ತಾ ಇಲ್ಲ. ಪಂಜಾಬಿನ ರೈತರಂತೆ ನಾವು ಕೂಡ ಸಂಘಟಿತರಾಗುವ ಸಂದರ್ಭವಿದು’ ಎಂದು ಬಸನಗೌಡ ಹೇಳಿದರು.

‘ಈಗೀಗ ನಮಗೆ ಗೊತ್ತಾಗುತ್ತಿದೆ, ಯೋಗೇಂದ್ರ ಯಾದವ್, ದೇವಿಂದರ್ ಸಿಂಗ್ ಹೇಳುವ ಸತ್ಯಗಳು. ಇವೆಲ್ಲ ನಮ್ಮ ರೈತರಿಗೆ ತಲುಪಲು ನಿಮ್ಮಂತಹ ಮೀಡಿಯಾ ಕನ್ನಡದಲ್ಲಿ ಇನ್ನಷ್ಟು ವಿವರ ಕೊಡಬೇಕು’ ಎಂದರಲ್ಲದೇ, ‘ಭೂರಹಿತರು ಲೀಸ್‌ನಲ್ಲಿ ಒಂದೋ-ಎರಡು ಎಕರೆ ಜಮೀನಿನಿನಲ್ಲಿ ಬೆಳೆದು ಬದುಕು ಕಟ್ಟಕೊಳ್ತಾ ಇದ್ದರು. ಈ ಸಲ ಅವರು ಈ ಅಪಾಯದ ಕೃಷಿ ಮಾಡಂಗಿಲ್ಲ. ಮತ್ತೆ ಗುಳೆ ಹೋಗ್ತಾರೆ ಅಷ್ಟೇ’ ಎಂದು ಆ ಭಾಗದ ವಾಸ್ತವ ಚಿತ್ರಣವನ್ನು ನಮ್ಮ ಮುಂದೆ ಇಟ್ಟರು.

‘ಕಳೆದ ವರ್ಷ ಎಲ್ಲ ಕ್ಷೇತ್ರಗಳೂ ಮುಗ್ಗಟ್ಟಿನಲ್ಲಿದ್ದಾಗ, ಈ ದೇಶದ ಜಿಡಿಪಿಗೆ ಹೆಚ್ಚಿನ ನೆರವು ನಿಡಿದ್ದು ಕೃಷಿ. ಅದು ಎಲ್ಲಾ ಸಂಕಷ್ಟಗಳ ನಡುವೆಯೂ ಈ ದೇಶಕ್ಕೆ ಅನ್ನ ನಿಡಿದೆ. ಈಗ ಗೊಬ್ಬರದ ದರ ಹೆಚ್ಚಿಸಿ ಕೃಷಿ ಕ್ಷೇತ್ರವನ್ನೆ ನಾಶ ಮಾಡಲು ಹೊರಟಿದೆ ಮೋದಿ ಸರ್ಕಾರ’ ಎಂದು ಹಿಂದೆ ಹಲವು ದಶಕಗಳ ಕಾಲ ಕೃಷಿ ಮಾಡಿದ ಲೇಖಕ ಕೆ.ಪಿ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಇದೇ ತರಹದ ಅಭಿಪ್ರಾಯ ವ್ಯಕ್ತಪಡಿಸಿದ ಕೃಷಿ ತಜ್ಞ ಪ್ರಕಾಶ ಕಮ್ಮರಡಿ, ‘ನಾಟಿ, ಬಿತ್ತನೆ ಮಾಡುವ ಈ ಸಂದರ್ಭದಲ್ಲಿ ಇವರು ಗೊಬ್ಬರದ ದರ ಜಾಸ್ತಿ ಮಾಡಿ ರೈತರನ್ನು ಕೊಲ್ಲಲು ಹೊರಟಿದ್ದಾರೆ. ಈ ಸಂದರ್ಭದಲ್ಲಿ ರೈತರು ಹೇಗೋ ಬೀಜದ ತಯಾರಿ ಮಾಡಿಕೊಂಡಿದ್ದಾರೆ. ಆದರೆ 1,900 ರೂಪಾಯಿ ಕೊಟ್ಟು 50ಕೆಜಿಯ ಡಿಎಪಿ ಪಡೆಯಲು ಆಗುತ್ತದಾ? ನಮ್ಮ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಕಳೆದ ಸಾಲಿನ ಶೇ.30ರಷ್ಟು ಕೃಷಿ ಉತ್ಪನ್ನ ಮಾರಾಟವಾಗಿಯೇ ಇಲ್ಲ. ಅದರಲ್ಲಿ ಶೇ. 18ರಷ್ಟು ಹಾಳಾಗಿ ಹೋಗಿದೆ. ರೈತರ ಬಳಿ ಹಣವಿಲ್ಲ. ಚುನಾವಣೆಗಳ ನಂತರ ಈ ಸರ್ಕಾರ ಕ್ರೂರವಾಗಿ ರೈತರ ಮೇಲೆ ಆಕ್ರಮಣ ಮಾಡಿದೆ’ ಎಂದರು.

ಮಂಡ್ಯದ ಎಲೆಚಾಕನಹಳ್ಳಿಯ ಸಣ್ಣ ರೈತ ವೈ.ಜೆ. ಸ್ವಾಮಿ ಮಾತನಾಡಿ, ‘ಮುಕ್ಕಾಲು ಎಕರೆಯಲ್ಲಿ ಚೊಟ್ ಪೈರು (ಬೀನ್ಸ್ ತರಹದ ತರಕಾರಿ) ಹಾಕಿದ್ದೇವೆ. ಈಗ ಕೆಜಿಗೆ 15 ರೂ ದರ ಇದೆ. ಆದರೆ ಡಿಎಪಿ ದರ ಹೆಚಾಗಿದ್ದರಿಂದ ಮತ್ತೆ ಗೊಬ್ಬರ ಹಾಕಿದರೆ ನಾವು ಮಾಡಿದ ಖರ್ಚು ಸಹ ನಮ್ಮ ಕೈಗೆ ಸಿಗಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಒಣ ಬೇಸಾಯದವರ ಕಷ್ಟ ಕೇಳುವಂತಿಲ್ಲ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಣ್ಣ ರೈತ ಮಲ್ಲಪ್ಪ ಅವರು, ನಮ್ಮ ಎದುರು ಕೃಷಿ ಸಂಕಷ್ಟದ ಇನ್ನೊಂದು ಆಯಾಮವನ್ನು ಮುಂದೆ ಇಟ್ಟರು. ‘ಹಳ್ಳಿಕಡೆ ಜಮೀನ್ದಾರರು ಬೀಜ, ಗೊಬ್ಬರ ಅಂಗಡಿ ಇಟ್ಟಾರು. ಮೊದ್ಲ ಅಪರಾತಪರಾ ರೇಟು ಹಾಕಿ, ಬಡ್ಡಿ ವಸೂಲಿ ಮಾಡ್ತಾ ಇದ್ದರು. ಈಗ ಗೊಬ್ಬರ ರೇಟು ಜಾಸ್ತಿ ಆದ ಮ್ಯಾಗ ಅವರ ಕಂತ್ರಿಗಿರಿ ಇನ್ನಾಕಿಷ್ಟ ಹೆಚ್ಚಾಗುತ್ತ. ಇಲ್ಲಿ ನಾವು ಮಳಿ ನಂಬಿ ಹೊಲ ಮಾಡೋ ಮಂದಿ. ಎರಡೆಕೆಗೆ ಗೊಬ್ಬರ ಖರ್ಚು 5-6 ಸಾವಿರ ಹೆಚಾದ್ರ, ಸಣ್ಣಪುಟ್ಟ ಹೊಲ ಹೊಂದಿರೋ ಮಂದಿ ಹೊಲ ಲಾವಣಿ ಹಾಕಿ ಎಲ್ಲೇರ ದುಡಿಯಾಕ್ ಹೋಗಬೇಕಾಗುತ್ತದೆ’ ಎಂದು ಮಲ್ಲಪ್ಪ ತಿಳಿಸಿದರು.

‘ಒಂದು ಕೈಗಾರಿಕೆಗೆ ಮೊದಲ ವರ್ಷ ಉಚಿತ ಅಥವಾ ರಿಯಾಯತಿ ದರದಲ್ಲಿ ನೀರು, ವಿದ್ಯುತ್ ಕೊಡುವ ಸರ್ಕಾರ, ಈಗ ರೈತರಿಗೆ ಸಬ್ಸಿಡಿಯಲ್ಲಿ ಗೊಬ್ಬರ ನೀಡಬೇಕು. ನಾಲ್ಕು ತಿಂಗಳಷ್ಟೇ, ಅವರು ಅದರ ಹತ್ತು ಪಟ್ಟು ವಾಪಾಸ್ ನೀಡುತ್ತಾರೆ. ಕಳೆದ ಆರ್ಥಿಕ ವರ್ಷದಲ್ಲಿ ದೇಶದ ಗ್ರಾಮೀಣ ಭಾಗ ಉಳಿದಿದ್ದೇ ರೈತರ ಉತ್ಪನ್ನಗಳಿಂದ. ಹಾಗೆಯೇ ನಗರದವರಿಗೂ ಆಹಾರಧಾನ್ಯ ಸಹಜ ಬೆಲೆಯಲ್ಲಿ ಸಿಕ್ಕಿದ್ದು ರೈತರ ಪರಿಶ್ರಮದಿಂದ. ಸರ್ಕಾರ ಕೃಷಿಯನ್ನೇ ನಾಶ ಮಾಡಲು ಹೊರಟಂತಿದೆ’ ಎಂದು ಕೆ.ಪಿ. ಸುರೇಶ್ ಹೇಳುತ್ತಾರೆ.

ಗೊಬ್ಬರದ ಬೆಲೆ ಏರಿಕೆಗೆ ಕಾರಣವೇನು?: ಶಿವಸುಂದರ್

ಈ ಗೊಬ್ಬರದ ರಾಜಕೀಯ ಕುರಿತು ರಾಜಕೀಯ ಚಿಂತಕ ಶಿವಸುಂದರ್ ಅಭಿಪ್ರಾಯಗಳು ಹೀಗಿವೆ:

ಇದು ಗೊಬ್ಬರ ಕಂಪನಿಗಳು ದಿಢೀರನೆ ತೆಗೆದುಕೊಂಡ ತೀರ್ಮಾನವಲ್ಲ. ಬದಲಿಗೆ ಗೊಬ್ಬರ ಸಬ್ಸಿಡಿಯನ್ನು ಹಂತ ಹಂತವಾಗಿ ಹಿಂತೆಗೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ರೈತವಿರೋಧಿ ನೀತಿಗಳ ತಾರ್ಕಿಕ ಪರಿಣಾಮವೇ ಆಗಿದೆ. ಈ ಗೊಬ್ಬರ ಸಬ್ಸಿಡಿ ಹಿಂತೆಗೆತ ಯೋಜನೆ 1992ರ ಭೋಸ್ಲೆ ಸಮಿತಿಯ ಪರಿಣಾಮವಾಗಿ ಪ್ರಾರಂಭವಾಗಿದ್ದು, ಈಗಿನ ಮೋದಿ ಸರ್ಕಾರದಲ್ಲಿ ತೀವ್ರ ಆಕ್ರಮಣಕಾರಿ ಸ್ವರೂಪವನ್ನು ಪಡೆಯುತ್ತಿದೆ….

1991ರ ತನಕ ಭಾರತ ಸರ್ಕಾರದ ಗೊಬ್ಬರ ನೀತಿಗಳು ಪ್ರಧಾನವಾಗಿ ಗೊಬ್ಬರ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ಅದನ್ನು ಅಗ್ಗದ ದರದಲ್ಲಿ ರೈತಾಪಿಗೆ ತಲುಪಿಸುವ ಬಗ್ಗೆ ಗಮನ ಕೇಂದ್ರೀಕರಿಸಿದ್ದವು. ಹೀಗಾಗಿಯೇ 1977ರಲ್ಲಿ ರಸಗೊಬ್ಬರ ಬೆಲೆ ನಿಯಂತ್ರಣ ಮತ್ತು ಸರಬರಾಜು ನಿಯಮಗಳು ಜಾರಿಗೆ ಬಂದವು. ಅದರಡಿಯಲ್ಲಿ ಸರ್ಕಾರವೇ ಮೊದಲು ಯೂರಿಯಾ ಮತ್ತು ಆ ನಂತರ ಎಲ್ಲಾ ಬಗೆಯ ರಸಗೊಬ್ಬರಗಳಿಗೂ ಮಾರಾಟ ಬೆಲೆಯನ್ನು ನಿಗದಿ ಮಾಡಿತು. ಅದಕ್ಕೇ ಮೀರಿ ಆಗುತ್ತಿದ್ದ ಉತ್ಪಾದನಾ ವಚ್ಚವನ್ನು ನೇರವಾಗಿ ಗೊಬ್ಬರ ಕಂಪನಿಗಳಿಗೆ ಪಾವತಿ ಮಾಡುತ್ತಿತ್ತು. ಹೀಗಾಗಿ 1990ರ ದಶಕದವರೆಗೂ ಎಲ್ಲಾ ಗೊಬ್ಬರಗಳೂ ಯೂರಿಯಾದಷ್ಟೇ ಬೆಲೆಗೆ ಮಾರಾಟವಾಗುತ್ತಿದ್ದವು.

ಆದರೆ 1991ರಲ್ಲಿ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳು ಜಾರಿಗೆ ಬಂದ ನಂತರ ಜನರ ಕಲ್ಯಾಣಕ್ಕಾಗಿ ಮಾಡುತ್ತಿದ್ದ ವೆಚ್ಚಗಳನ್ನು ಕಡಿಮೆ ಮಾಡಿ ಆ ಸಂಪನ್ಮೂಲವನ್ನು ಉದ್ದಿಮೆಗಳ ಲಾಭವನ್ನು ಹೆಚ್ಚಿಸಲು ಬೇಕಾದ ಮೂಲಭೂತ ಸೌಕರ್ಯವನ್ನು ಹೆಚ್ಚಿಸುವುದು ಆರ್ಥಿಕ ತತ್ವವಾಯಿತು.

ಅದರ ಭಾಗವಾಗಿಯೇ ಗೊಬ್ಬರ ನೀತಿಯೂ ಬದಲಾಗಿ, ಗೊಬ್ಬರಕ್ಕೆ ಕೊಡುತ್ತಿದ್ದ ಸಬ್ಸಿಡಿ ಹೊರೆಯನ್ನು ಹಾಗೂ ಆಮದು ಮಾಡಿಕೊಳ್ಳುತ್ತಿರುವುದರಿಂದ ಹೆಚ್ಚುತ್ತಿರುವ ವಿದೇಶಿ ವಿನಿಮಯ ಹೊರೆಯನ್ನು ತಪ್ಪಿಸಿಕೊಳ್ಳುವುದು ಹೇಗೆ ಎಂಬುದೇ 1991ರ ನಂತರದ ಎಲ್ಲಾ ಸರ್ಕಾರಗಳ ಪ್ರಮುಖ ಲಕ್ಷ್ಯವಾಯಿತು. ಅದರ ಭಾಗವಾಗಿ 1992ರಲ್ಲಿ ಯೂರಿಯಾವನ್ನು ಹೊರತುಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳಿಗೆ ಕೊಡುತ್ತಿದ್ದ ಸಬ್ಸಿಡಿಯನ್ನು ಪಾಕ್ಷಿಕವಾಗಿ ಹಿಂತೆಗೆದುಕೊಳ್ಳಲಾಯಿತು. ಹೀಗಾಗಿ ಯೂರಿಯವನ್ನು ಹೊರತು ಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳ ಬೆಲೆ ಹಲವು ಪಟ್ಟು ಏರಿಕೆಯಾಯಿತು. ಸಹಜವಾಗಿಯೇ ಇದರಿಂದ ಯೂರಿಯೇತರ ಗೊಬ್ಬರಗಳ ಬಳಕೆ ಹಾಗೂ ಉತ್ಪಾದನೆಯೂ ಕುಂಠಿತವಾಯಿತು.


ಇದನ್ನೂ ಓದಿ; ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...