Homeಮುಖಪುಟರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

ರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

- Advertisement -
- Advertisement -

ನೆಲ ಹದ ಮಾಡುವ ಮಳೆಯ ನಿರಿಕ್ಷೆಯಲ್ಲಿರುವ ರೈತರಿಗೆ ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೊಡ್ಡ ಹೊಡೆತ ನೀಡಿದೆ. ರಸ ಗೊಬ್ಬರ ದರಗಳನ್ನು ಏರಿಸುವ ಮೂಲಕ ಅದು ರೈತರನ್ನು ‘ಕೊಲ್ಲಲು’ ಹೊರಟಿದೆಯಾ ಎಂಬ ಪ್ರಶ್ನೆ ಕೇಳಿ ಬರುತ್ತಿವೆ.

ಶೇ. 45-58 ರವೆರೆಗೆ ಇಫ್ಕೋ ಗೊಬ್ಬರದ ದರಗಳನ್ನು ಏರಿಸಿದೆ. ಅಂದರೆ 50 ಕೆಜಿ ಡಿಎಪಿ ಬೆಲೆ 1200 ಇದ್ದುದ್ದು ಏಕಾಏಕಿ 1900 ರೂ ಆಗಿದೆ. ಇದು ದೇಶದ ಕೃಷಿ ವ್ಯವಸ್ಥೆಯನ್ನು ಜರ್ಜರಿತಗೊಳಿಸಲಿದೆ. ಈ ಕುರಿತು ರಾಜ್ಯದ ವಿವಿಧ ಭಾಗಗಳ ರೈತರು, ಕೃಷಿತಜ್ಞರನ್ನು  ನಾನುಗೌರಿ.ಕಾಂ ಮಾತನಾಡಿಸಿತು.

‘ಈ ಸಲ ಗೊಬ್ಬರ ತೆಗೆದುಕೊಳ್ಳಾಕೂ ಮೊದ್ಲು, ಎಣ್ಣಿ (ಕ್ರಿಮಿನಾಶಕ) ತಗೋಳ್ಳೊದೇ ವಾಸಿ’ ಎಂದರು ಸಿಂಧನೂರು ತಾಲೂಕಿನ ಮಾಟೂರಿನ ಯುವ ರೈತ ಬಸನಗೌಡ ಸಂಜಿ.
‘ಅಲ್ರಿ, ಡಿಎಪಿ ಗೊಬ್ಬರದ 50 ಕೆಜಿ ಚಿಲಕ್ಕ 1,900 ರೂ ಅಂತೆ. ಅಂದ್ರ ಈ ಸಲ ಎರಡು ಎಕರೆ ಭತ್ತದ ಬೆಳಗೆ 5-6 ಸಾವಿರ ಹೆಚ್ಚುವರಿ ರೊಕ್ಕ ಹಾಕ್ಬೇಕು. ಅದ್ಯಾವುದೋ ತಾಂತ್ರಿಕ ನೆಪದಲ್ಲಿ ನಮ್ಮ ಕಡೆ ಬೆಳೆದ ಭತ್ತಕ್ಕೆ ಸರಿಯಾದ ಎಂಎಸ್‌ಪಿನೂ ಕೊಡ್ತಾ ಇಲ್ಲ. ಪಂಜಾಬಿನ ರೈತರಂತೆ ನಾವು ಕೂಡ ಸಂಘಟಿತರಾಗುವ ಸಂದರ್ಭವಿದು’ ಎಂದು ಬಸನಗೌಡ ಹೇಳಿದರು.

‘ಈಗೀಗ ನಮಗೆ ಗೊತ್ತಾಗುತ್ತಿದೆ, ಯೋಗೇಂದ್ರ ಯಾದವ್, ದೇವಿಂದರ್ ಸಿಂಗ್ ಹೇಳುವ ಸತ್ಯಗಳು. ಇವೆಲ್ಲ ನಮ್ಮ ರೈತರಿಗೆ ತಲುಪಲು ನಿಮ್ಮಂತಹ ಮೀಡಿಯಾ ಕನ್ನಡದಲ್ಲಿ ಇನ್ನಷ್ಟು ವಿವರ ಕೊಡಬೇಕು’ ಎಂದರಲ್ಲದೇ, ‘ಭೂರಹಿತರು ಲೀಸ್‌ನಲ್ಲಿ ಒಂದೋ-ಎರಡು ಎಕರೆ ಜಮೀನಿನಿನಲ್ಲಿ ಬೆಳೆದು ಬದುಕು ಕಟ್ಟಕೊಳ್ತಾ ಇದ್ದರು. ಈ ಸಲ ಅವರು ಈ ಅಪಾಯದ ಕೃಷಿ ಮಾಡಂಗಿಲ್ಲ. ಮತ್ತೆ ಗುಳೆ ಹೋಗ್ತಾರೆ ಅಷ್ಟೇ’ ಎಂದು ಆ ಭಾಗದ ವಾಸ್ತವ ಚಿತ್ರಣವನ್ನು ನಮ್ಮ ಮುಂದೆ ಇಟ್ಟರು.

‘ಕಳೆದ ವರ್ಷ ಎಲ್ಲ ಕ್ಷೇತ್ರಗಳೂ ಮುಗ್ಗಟ್ಟಿನಲ್ಲಿದ್ದಾಗ, ಈ ದೇಶದ ಜಿಡಿಪಿಗೆ ಹೆಚ್ಚಿನ ನೆರವು ನಿಡಿದ್ದು ಕೃಷಿ. ಅದು ಎಲ್ಲಾ ಸಂಕಷ್ಟಗಳ ನಡುವೆಯೂ ಈ ದೇಶಕ್ಕೆ ಅನ್ನ ನಿಡಿದೆ. ಈಗ ಗೊಬ್ಬರದ ದರ ಹೆಚ್ಚಿಸಿ ಕೃಷಿ ಕ್ಷೇತ್ರವನ್ನೆ ನಾಶ ಮಾಡಲು ಹೊರಟಿದೆ ಮೋದಿ ಸರ್ಕಾರ’ ಎಂದು ಹಿಂದೆ ಹಲವು ದಶಕಗಳ ಕಾಲ ಕೃಷಿ ಮಾಡಿದ ಲೇಖಕ ಕೆ.ಪಿ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಇದೇ ತರಹದ ಅಭಿಪ್ರಾಯ ವ್ಯಕ್ತಪಡಿಸಿದ ಕೃಷಿ ತಜ್ಞ ಪ್ರಕಾಶ ಕಮ್ಮರಡಿ, ‘ನಾಟಿ, ಬಿತ್ತನೆ ಮಾಡುವ ಈ ಸಂದರ್ಭದಲ್ಲಿ ಇವರು ಗೊಬ್ಬರದ ದರ ಜಾಸ್ತಿ ಮಾಡಿ ರೈತರನ್ನು ಕೊಲ್ಲಲು ಹೊರಟಿದ್ದಾರೆ. ಈ ಸಂದರ್ಭದಲ್ಲಿ ರೈತರು ಹೇಗೋ ಬೀಜದ ತಯಾರಿ ಮಾಡಿಕೊಂಡಿದ್ದಾರೆ. ಆದರೆ 1,900 ರೂಪಾಯಿ ಕೊಟ್ಟು 50ಕೆಜಿಯ ಡಿಎಪಿ ಪಡೆಯಲು ಆಗುತ್ತದಾ? ನಮ್ಮ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಕಳೆದ ಸಾಲಿನ ಶೇ.30ರಷ್ಟು ಕೃಷಿ ಉತ್ಪನ್ನ ಮಾರಾಟವಾಗಿಯೇ ಇಲ್ಲ. ಅದರಲ್ಲಿ ಶೇ. 18ರಷ್ಟು ಹಾಳಾಗಿ ಹೋಗಿದೆ. ರೈತರ ಬಳಿ ಹಣವಿಲ್ಲ. ಚುನಾವಣೆಗಳ ನಂತರ ಈ ಸರ್ಕಾರ ಕ್ರೂರವಾಗಿ ರೈತರ ಮೇಲೆ ಆಕ್ರಮಣ ಮಾಡಿದೆ’ ಎಂದರು.

ಮಂಡ್ಯದ ಎಲೆಚಾಕನಹಳ್ಳಿಯ ಸಣ್ಣ ರೈತ ವೈ.ಜೆ. ಸ್ವಾಮಿ ಮಾತನಾಡಿ, ‘ಮುಕ್ಕಾಲು ಎಕರೆಯಲ್ಲಿ ಚೊಟ್ ಪೈರು (ಬೀನ್ಸ್ ತರಹದ ತರಕಾರಿ) ಹಾಕಿದ್ದೇವೆ. ಈಗ ಕೆಜಿಗೆ 15 ರೂ ದರ ಇದೆ. ಆದರೆ ಡಿಎಪಿ ದರ ಹೆಚಾಗಿದ್ದರಿಂದ ಮತ್ತೆ ಗೊಬ್ಬರ ಹಾಕಿದರೆ ನಾವು ಮಾಡಿದ ಖರ್ಚು ಸಹ ನಮ್ಮ ಕೈಗೆ ಸಿಗಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಒಣ ಬೇಸಾಯದವರ ಕಷ್ಟ ಕೇಳುವಂತಿಲ್ಲ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಣ್ಣ ರೈತ ಮಲ್ಲಪ್ಪ ಅವರು, ನಮ್ಮ ಎದುರು ಕೃಷಿ ಸಂಕಷ್ಟದ ಇನ್ನೊಂದು ಆಯಾಮವನ್ನು ಮುಂದೆ ಇಟ್ಟರು. ‘ಹಳ್ಳಿಕಡೆ ಜಮೀನ್ದಾರರು ಬೀಜ, ಗೊಬ್ಬರ ಅಂಗಡಿ ಇಟ್ಟಾರು. ಮೊದ್ಲ ಅಪರಾತಪರಾ ರೇಟು ಹಾಕಿ, ಬಡ್ಡಿ ವಸೂಲಿ ಮಾಡ್ತಾ ಇದ್ದರು. ಈಗ ಗೊಬ್ಬರ ರೇಟು ಜಾಸ್ತಿ ಆದ ಮ್ಯಾಗ ಅವರ ಕಂತ್ರಿಗಿರಿ ಇನ್ನಾಕಿಷ್ಟ ಹೆಚ್ಚಾಗುತ್ತ. ಇಲ್ಲಿ ನಾವು ಮಳಿ ನಂಬಿ ಹೊಲ ಮಾಡೋ ಮಂದಿ. ಎರಡೆಕೆಗೆ ಗೊಬ್ಬರ ಖರ್ಚು 5-6 ಸಾವಿರ ಹೆಚಾದ್ರ, ಸಣ್ಣಪುಟ್ಟ ಹೊಲ ಹೊಂದಿರೋ ಮಂದಿ ಹೊಲ ಲಾವಣಿ ಹಾಕಿ ಎಲ್ಲೇರ ದುಡಿಯಾಕ್ ಹೋಗಬೇಕಾಗುತ್ತದೆ’ ಎಂದು ಮಲ್ಲಪ್ಪ ತಿಳಿಸಿದರು.

‘ಒಂದು ಕೈಗಾರಿಕೆಗೆ ಮೊದಲ ವರ್ಷ ಉಚಿತ ಅಥವಾ ರಿಯಾಯತಿ ದರದಲ್ಲಿ ನೀರು, ವಿದ್ಯುತ್ ಕೊಡುವ ಸರ್ಕಾರ, ಈಗ ರೈತರಿಗೆ ಸಬ್ಸಿಡಿಯಲ್ಲಿ ಗೊಬ್ಬರ ನೀಡಬೇಕು. ನಾಲ್ಕು ತಿಂಗಳಷ್ಟೇ, ಅವರು ಅದರ ಹತ್ತು ಪಟ್ಟು ವಾಪಾಸ್ ನೀಡುತ್ತಾರೆ. ಕಳೆದ ಆರ್ಥಿಕ ವರ್ಷದಲ್ಲಿ ದೇಶದ ಗ್ರಾಮೀಣ ಭಾಗ ಉಳಿದಿದ್ದೇ ರೈತರ ಉತ್ಪನ್ನಗಳಿಂದ. ಹಾಗೆಯೇ ನಗರದವರಿಗೂ ಆಹಾರಧಾನ್ಯ ಸಹಜ ಬೆಲೆಯಲ್ಲಿ ಸಿಕ್ಕಿದ್ದು ರೈತರ ಪರಿಶ್ರಮದಿಂದ. ಸರ್ಕಾರ ಕೃಷಿಯನ್ನೇ ನಾಶ ಮಾಡಲು ಹೊರಟಂತಿದೆ’ ಎಂದು ಕೆ.ಪಿ. ಸುರೇಶ್ ಹೇಳುತ್ತಾರೆ.

ಗೊಬ್ಬರದ ಬೆಲೆ ಏರಿಕೆಗೆ ಕಾರಣವೇನು?: ಶಿವಸುಂದರ್

ಈ ಗೊಬ್ಬರದ ರಾಜಕೀಯ ಕುರಿತು ರಾಜಕೀಯ ಚಿಂತಕ ಶಿವಸುಂದರ್ ಅಭಿಪ್ರಾಯಗಳು ಹೀಗಿವೆ:

ಇದು ಗೊಬ್ಬರ ಕಂಪನಿಗಳು ದಿಢೀರನೆ ತೆಗೆದುಕೊಂಡ ತೀರ್ಮಾನವಲ್ಲ. ಬದಲಿಗೆ ಗೊಬ್ಬರ ಸಬ್ಸಿಡಿಯನ್ನು ಹಂತ ಹಂತವಾಗಿ ಹಿಂತೆಗೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ರೈತವಿರೋಧಿ ನೀತಿಗಳ ತಾರ್ಕಿಕ ಪರಿಣಾಮವೇ ಆಗಿದೆ. ಈ ಗೊಬ್ಬರ ಸಬ್ಸಿಡಿ ಹಿಂತೆಗೆತ ಯೋಜನೆ 1992ರ ಭೋಸ್ಲೆ ಸಮಿತಿಯ ಪರಿಣಾಮವಾಗಿ ಪ್ರಾರಂಭವಾಗಿದ್ದು, ಈಗಿನ ಮೋದಿ ಸರ್ಕಾರದಲ್ಲಿ ತೀವ್ರ ಆಕ್ರಮಣಕಾರಿ ಸ್ವರೂಪವನ್ನು ಪಡೆಯುತ್ತಿದೆ….

1991ರ ತನಕ ಭಾರತ ಸರ್ಕಾರದ ಗೊಬ್ಬರ ನೀತಿಗಳು ಪ್ರಧಾನವಾಗಿ ಗೊಬ್ಬರ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ಅದನ್ನು ಅಗ್ಗದ ದರದಲ್ಲಿ ರೈತಾಪಿಗೆ ತಲುಪಿಸುವ ಬಗ್ಗೆ ಗಮನ ಕೇಂದ್ರೀಕರಿಸಿದ್ದವು. ಹೀಗಾಗಿಯೇ 1977ರಲ್ಲಿ ರಸಗೊಬ್ಬರ ಬೆಲೆ ನಿಯಂತ್ರಣ ಮತ್ತು ಸರಬರಾಜು ನಿಯಮಗಳು ಜಾರಿಗೆ ಬಂದವು. ಅದರಡಿಯಲ್ಲಿ ಸರ್ಕಾರವೇ ಮೊದಲು ಯೂರಿಯಾ ಮತ್ತು ಆ ನಂತರ ಎಲ್ಲಾ ಬಗೆಯ ರಸಗೊಬ್ಬರಗಳಿಗೂ ಮಾರಾಟ ಬೆಲೆಯನ್ನು ನಿಗದಿ ಮಾಡಿತು. ಅದಕ್ಕೇ ಮೀರಿ ಆಗುತ್ತಿದ್ದ ಉತ್ಪಾದನಾ ವಚ್ಚವನ್ನು ನೇರವಾಗಿ ಗೊಬ್ಬರ ಕಂಪನಿಗಳಿಗೆ ಪಾವತಿ ಮಾಡುತ್ತಿತ್ತು. ಹೀಗಾಗಿ 1990ರ ದಶಕದವರೆಗೂ ಎಲ್ಲಾ ಗೊಬ್ಬರಗಳೂ ಯೂರಿಯಾದಷ್ಟೇ ಬೆಲೆಗೆ ಮಾರಾಟವಾಗುತ್ತಿದ್ದವು.

ಆದರೆ 1991ರಲ್ಲಿ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳು ಜಾರಿಗೆ ಬಂದ ನಂತರ ಜನರ ಕಲ್ಯಾಣಕ್ಕಾಗಿ ಮಾಡುತ್ತಿದ್ದ ವೆಚ್ಚಗಳನ್ನು ಕಡಿಮೆ ಮಾಡಿ ಆ ಸಂಪನ್ಮೂಲವನ್ನು ಉದ್ದಿಮೆಗಳ ಲಾಭವನ್ನು ಹೆಚ್ಚಿಸಲು ಬೇಕಾದ ಮೂಲಭೂತ ಸೌಕರ್ಯವನ್ನು ಹೆಚ್ಚಿಸುವುದು ಆರ್ಥಿಕ ತತ್ವವಾಯಿತು.

ಅದರ ಭಾಗವಾಗಿಯೇ ಗೊಬ್ಬರ ನೀತಿಯೂ ಬದಲಾಗಿ, ಗೊಬ್ಬರಕ್ಕೆ ಕೊಡುತ್ತಿದ್ದ ಸಬ್ಸಿಡಿ ಹೊರೆಯನ್ನು ಹಾಗೂ ಆಮದು ಮಾಡಿಕೊಳ್ಳುತ್ತಿರುವುದರಿಂದ ಹೆಚ್ಚುತ್ತಿರುವ ವಿದೇಶಿ ವಿನಿಮಯ ಹೊರೆಯನ್ನು ತಪ್ಪಿಸಿಕೊಳ್ಳುವುದು ಹೇಗೆ ಎಂಬುದೇ 1991ರ ನಂತರದ ಎಲ್ಲಾ ಸರ್ಕಾರಗಳ ಪ್ರಮುಖ ಲಕ್ಷ್ಯವಾಯಿತು. ಅದರ ಭಾಗವಾಗಿ 1992ರಲ್ಲಿ ಯೂರಿಯಾವನ್ನು ಹೊರತುಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳಿಗೆ ಕೊಡುತ್ತಿದ್ದ ಸಬ್ಸಿಡಿಯನ್ನು ಪಾಕ್ಷಿಕವಾಗಿ ಹಿಂತೆಗೆದುಕೊಳ್ಳಲಾಯಿತು. ಹೀಗಾಗಿ ಯೂರಿಯವನ್ನು ಹೊರತು ಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳ ಬೆಲೆ ಹಲವು ಪಟ್ಟು ಏರಿಕೆಯಾಯಿತು. ಸಹಜವಾಗಿಯೇ ಇದರಿಂದ ಯೂರಿಯೇತರ ಗೊಬ್ಬರಗಳ ಬಳಕೆ ಹಾಗೂ ಉತ್ಪಾದನೆಯೂ ಕುಂಠಿತವಾಯಿತು.


ಇದನ್ನೂ ಓದಿ; ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...