ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಕೇಂದ್ರ ಸರ್ಕಾರಿ ನೌಕರರಿಗೆ 2019-2020ರ ಬೋನಸ್ ನೀಡುವುದಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.
ಈ ನಿರ್ಧಾರವನ್ನು ಪ್ರಕಟಿಸಿದ ಜಾವಡೇಕರ್, “ಕನಿಷ್ಠ 30 ಲಕ್ಷ ಗೆಜೆಟೆಡ್ ಅಲ್ಲದ ನೌಕರರು ಇದರಿಂದ ಪ್ರಯೋಜನ ಪಡೆಯುತ್ತಾರೆ. ‘ವಿಜಯದಶಮಿ’ಗೆ ಮುಂಚಿತವಾಗಿ ನೇರ ಲಾಭ ವರ್ಗಾವಣೆಯ ಮೂಲಕ ಬೋನಸ್ ಅನ್ನು ಒಂದೇ ಕಂತಿನಲ್ಲಿ ನೀಡಲಾಗುವುದು” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?
#Cabinet approves adoption of the #JammuAndKashmir Panchayati Raj Act, 1989; move to help establish all the three tiers of grass root level democracy like in other part of the country. pic.twitter.com/8IWLnVTLVZ
— All India Radio News (@airnewsalerts) October 21, 2020
ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್ಲೈಕ್ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ
ಇದರಿಂದ ಸರ್ಕಾರಕ್ಕೆ ಒಟ್ಟು 3,737 ಕೋಟಿ ರೂ. ವೆಚ್ಚವಾಗಲಿದ್ದು, 3.67 ಕೋಟಿ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಹಬ್ಬಕ್ಕಿಂತ ಮುಂಚಿತವಾಗಿ ಸರ್ಕಾರಿ ನೌಕರರನ್ನು ಹುರಿದುಂಬಿಸಲು ಇದು ಸಹಕಾರಿಯಾಗಲಿದೆ.
ಇದನ್ನೂ ಓದಿ: ಫ್ಯಾಕ್ಟ್ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?