Homeಕರ್ನಾಟಕಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು, ಮಂಡ್ಯ ಭಾಗದಲ್ಲಿ ಹೆಣ್ಣು ಭ್ರೂಣಗಳನ್ನು ಪತ್ತೆಹಚ್ಚಿ ಹತ್ಯೆ ಮಾಡುತ್ತಿದ್ದ ಭಾರೀ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು ಇದುವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರಿನ ಉದಯಗಿರಿಯ ಮಾತಾ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದನ್‌ ಬಲ್ಲಾಳ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಭ್ರೂಣಗಳ ಹತ್ಯೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡು ಮೂಲದ ವೈದ್ಯ ಡಾ.ತುಳಸಿರಾಮ್‌, ಮಹಿಳೆಯರನ್ನು ಗುರುತಿಸಿ ಕರೆ ತರುತ್ತಿದ್ದ ವಿರೇಶ್‌, ನವೀನ್‌ಕುಮಾರ್‌, ನಯನ್‌ ಕುಮಾರ್‌ ಹಾಗೂ ಶಿವನಂಜೇಗೌಡ, ಮಾತಾ ಆಸ್ಪತ್ರೆಯ ವ್ಯವಸ್ಥಾಪಕಿ ಮೀನಾ, ಲ್ಯಾಬ್ ಟೆಕ್ನೀಷಿಯನ್ ನಿಸಾರ್ ಹಾಗೂ ಸ್ವಾಗತಕಾರ್ತಿ ರಿಜ್ಮಾ ಖಾನಂ ಬಂಧಿತ ಇತರ ಆರೋಪಿಗಳು.

ಮೂರು ವರ್ಷಗಳಲ್ಲಿ 900 ಭ್ರೂಣಗಳ ಹತ್ಯೆ!

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಇದುವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಗರ್ಭಪಾತ ಮಾಡಿದ್ದಾರೆ. ಈ ಹಿಂದೆ ಪ್ರತಿ ತಿಂಗಳು 25ರಿಂದ 27 ಗರ್ಭಪಾತ ಮಾಡಿದ್ದರೆ, 2023 ಜುಲೈ 21ರಿಂದ ಆಗಸ್ಟ್‌ 16ರವರೆಗೆ ಬರೋಬ್ಬರಿ 242 ಗರ್ಭಪಾತ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪ್ರಮುಖ ಆರೋಪಿ ಡಾ.ಚಂದನ್ ಬಳ್ಳಾಲ್, ತನ್ನ ಮಾತಾ ಆಸ್ಪತ್ರೆಯನ್ನು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮೈಸೂರಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಿಂದಲೂ ಮಹಿಳೆಯರುನ್ನು ಗುರುತಿಸಿ ಆರೋಪಿ ವೀರೇಶ್ ಮತ್ತು ತಂಡ ಕರೆ ತರುತ್ತಿತ್ತು. ಕೆಲವರು ಭ್ರೂಣ ಪತ್ತೆಗೆ ಬರುತ್ತಿದ್ದರು ಬಳಿಕ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಿಸುತ್ತಿದ್ದರು. ಇದಕ್ಕಾಗಿ ಆರೋಪಿಗಳು 25 ರಿಂದ 30 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದರು.

ಮೈಸೂರಿನ ಮಾತಾ ಆಸ್ಪತ್ರೆಯಲ್ಲದೇ ಮಂಡ್ಯದ ಕೆಲವು ಕಡೆಯೂ ಭ್ರೂಣ ಪತ್ತೆ ಮತ್ತು ಹತ್ಯೆ ನಡೆಯುತ್ತಿತ್ತು. ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್‌ ಯಂತ್ರ ಇರಿಸಿದ್ದರು. ಹಲವು ವರ್ಷಗಳಿಂದ ಇದು ನಡೆದಿತ್ತು. ಬೈಯಪ್ಪನಹಳ್ಳಿ ಪೊಲೀಸರು ವೀರೇಶ್‌ನನ್ನು ಬಂಧಿಸಿದಾಗ ಈ ಎಲ್ಲಾ ವಿಚಾರ ಬಯಲಾಗಿದೆ ಎಂದು ಬೆಂಗಳೂರು ಪೂರ್ವ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ.

ತನ್ನ ಆಸ್ಪತ್ರೆಯ ಸಿಬ್ಬಂದಿಯ ಬಂಧನದ ವಿಚಾರ ತಿಳಿದು ಡಾ.ಚಂದನ್‌ ಬಲ್ಲಾಳ್‌ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಕಳೆದ ಶನಿವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಂದನ್‌ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಈಗಾಗಲೇ ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ, ಡಾ.ರಾಜಕುಮಾರ್‌ ಆಸ್ಪತ್ರೆಯಲ್ಲಿರುವ ಆಯುರ್ವೇದಿಕ್‌ ಪೈಲ್ಸ್‌ ಡೇ ಕೇರ್‌ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ ಮಾತ್ರವಲ್ಲದೇ ಇತರೆಡೆಗೂ ಭ್ರೂಣ ಹತ್ಯೆ ಜಾಲ ಹಬ್ಬಿರುವ ಶಂಕೆಯಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ.

ಭ್ರೂಣ ಹತ್ಯೆ ಜಾಲ ಪತ್ತೆಯಾಗಿದ್ದು ಹೇಗೆ?

ಅ.15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಿಸದೆ ಹೋಗಿದ್ದರು. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಮೂವರಿಗೆ ಜಾಮೀನು :

ಬಂಧಿತ ಆರೋಪಿಗಳ ಪೈಕಿ ತಮಿಳುನಾಡು ಮೂಲದ ಮಕ್ಕಳ ತಜ್ಞ ಡಾ. ತುಳಸಿರಾಮ್, ಪ್ರಕರಣದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಅವರ ಪತ್ನಿ ಮೀನಾ ಹಾಗೂ ಮಾತಾ ಆಸ್ಪತ್ರೆಯ ಸ್ವಾಗತಗಾರ್ತಿ ನಜ್ಮಾ ಖಾನಂ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದ ಎಂದು ತಿಳಿದು ಬಂದಿದೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಆಯ್ಕೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ : ಉತ್ತರಕಾಶಿ: 17 ದಿನಗಳ ಬಳಿಕ ಸುರಂಗದಿಂದ ಹೊರಬಂದ 41 ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...