Homeಕರ್ನಾಟಕಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು, ಮಂಡ್ಯ ಭಾಗದಲ್ಲಿ ಹೆಣ್ಣು ಭ್ರೂಣಗಳನ್ನು ಪತ್ತೆಹಚ್ಚಿ ಹತ್ಯೆ ಮಾಡುತ್ತಿದ್ದ ಭಾರೀ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು ಇದುವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರಿನ ಉದಯಗಿರಿಯ ಮಾತಾ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದನ್‌ ಬಲ್ಲಾಳ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಭ್ರೂಣಗಳ ಹತ್ಯೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡು ಮೂಲದ ವೈದ್ಯ ಡಾ.ತುಳಸಿರಾಮ್‌, ಮಹಿಳೆಯರನ್ನು ಗುರುತಿಸಿ ಕರೆ ತರುತ್ತಿದ್ದ ವಿರೇಶ್‌, ನವೀನ್‌ಕುಮಾರ್‌, ನಯನ್‌ ಕುಮಾರ್‌ ಹಾಗೂ ಶಿವನಂಜೇಗೌಡ, ಮಾತಾ ಆಸ್ಪತ್ರೆಯ ವ್ಯವಸ್ಥಾಪಕಿ ಮೀನಾ, ಲ್ಯಾಬ್ ಟೆಕ್ನೀಷಿಯನ್ ನಿಸಾರ್ ಹಾಗೂ ಸ್ವಾಗತಕಾರ್ತಿ ರಿಜ್ಮಾ ಖಾನಂ ಬಂಧಿತ ಇತರ ಆರೋಪಿಗಳು.

ಮೂರು ವರ್ಷಗಳಲ್ಲಿ 900 ಭ್ರೂಣಗಳ ಹತ್ಯೆ!

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಇದುವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಗರ್ಭಪಾತ ಮಾಡಿದ್ದಾರೆ. ಈ ಹಿಂದೆ ಪ್ರತಿ ತಿಂಗಳು 25ರಿಂದ 27 ಗರ್ಭಪಾತ ಮಾಡಿದ್ದರೆ, 2023 ಜುಲೈ 21ರಿಂದ ಆಗಸ್ಟ್‌ 16ರವರೆಗೆ ಬರೋಬ್ಬರಿ 242 ಗರ್ಭಪಾತ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪ್ರಮುಖ ಆರೋಪಿ ಡಾ.ಚಂದನ್ ಬಳ್ಳಾಲ್, ತನ್ನ ಮಾತಾ ಆಸ್ಪತ್ರೆಯನ್ನು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮೈಸೂರಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಿಂದಲೂ ಮಹಿಳೆಯರುನ್ನು ಗುರುತಿಸಿ ಆರೋಪಿ ವೀರೇಶ್ ಮತ್ತು ತಂಡ ಕರೆ ತರುತ್ತಿತ್ತು. ಕೆಲವರು ಭ್ರೂಣ ಪತ್ತೆಗೆ ಬರುತ್ತಿದ್ದರು ಬಳಿಕ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಿಸುತ್ತಿದ್ದರು. ಇದಕ್ಕಾಗಿ ಆರೋಪಿಗಳು 25 ರಿಂದ 30 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದರು.

ಮೈಸೂರಿನ ಮಾತಾ ಆಸ್ಪತ್ರೆಯಲ್ಲದೇ ಮಂಡ್ಯದ ಕೆಲವು ಕಡೆಯೂ ಭ್ರೂಣ ಪತ್ತೆ ಮತ್ತು ಹತ್ಯೆ ನಡೆಯುತ್ತಿತ್ತು. ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್‌ ಯಂತ್ರ ಇರಿಸಿದ್ದರು. ಹಲವು ವರ್ಷಗಳಿಂದ ಇದು ನಡೆದಿತ್ತು. ಬೈಯಪ್ಪನಹಳ್ಳಿ ಪೊಲೀಸರು ವೀರೇಶ್‌ನನ್ನು ಬಂಧಿಸಿದಾಗ ಈ ಎಲ್ಲಾ ವಿಚಾರ ಬಯಲಾಗಿದೆ ಎಂದು ಬೆಂಗಳೂರು ಪೂರ್ವ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ.

ತನ್ನ ಆಸ್ಪತ್ರೆಯ ಸಿಬ್ಬಂದಿಯ ಬಂಧನದ ವಿಚಾರ ತಿಳಿದು ಡಾ.ಚಂದನ್‌ ಬಲ್ಲಾಳ್‌ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಕಳೆದ ಶನಿವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಂದನ್‌ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಈಗಾಗಲೇ ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ, ಡಾ.ರಾಜಕುಮಾರ್‌ ಆಸ್ಪತ್ರೆಯಲ್ಲಿರುವ ಆಯುರ್ವೇದಿಕ್‌ ಪೈಲ್ಸ್‌ ಡೇ ಕೇರ್‌ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ ಮಾತ್ರವಲ್ಲದೇ ಇತರೆಡೆಗೂ ಭ್ರೂಣ ಹತ್ಯೆ ಜಾಲ ಹಬ್ಬಿರುವ ಶಂಕೆಯಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ.

ಭ್ರೂಣ ಹತ್ಯೆ ಜಾಲ ಪತ್ತೆಯಾಗಿದ್ದು ಹೇಗೆ?

ಅ.15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಿಸದೆ ಹೋಗಿದ್ದರು. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಮೂವರಿಗೆ ಜಾಮೀನು :

ಬಂಧಿತ ಆರೋಪಿಗಳ ಪೈಕಿ ತಮಿಳುನಾಡು ಮೂಲದ ಮಕ್ಕಳ ತಜ್ಞ ಡಾ. ತುಳಸಿರಾಮ್, ಪ್ರಕರಣದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಅವರ ಪತ್ನಿ ಮೀನಾ ಹಾಗೂ ಮಾತಾ ಆಸ್ಪತ್ರೆಯ ಸ್ವಾಗತಗಾರ್ತಿ ನಜ್ಮಾ ಖಾನಂ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದ ಎಂದು ತಿಳಿದು ಬಂದಿದೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಆಯ್ಕೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ : ಉತ್ತರಕಾಶಿ: 17 ದಿನಗಳ ಬಳಿಕ ಸುರಂಗದಿಂದ ಹೊರಬಂದ 41 ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....