Homeಕರ್ನಾಟಕಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು, ಮಂಡ್ಯ ಭಾಗದಲ್ಲಿ ಹೆಣ್ಣು ಭ್ರೂಣಗಳನ್ನು ಪತ್ತೆಹಚ್ಚಿ ಹತ್ಯೆ ಮಾಡುತ್ತಿದ್ದ ಭಾರೀ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು ಇದುವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರಿನ ಉದಯಗಿರಿಯ ಮಾತಾ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದನ್‌ ಬಲ್ಲಾಳ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಭ್ರೂಣಗಳ ಹತ್ಯೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡು ಮೂಲದ ವೈದ್ಯ ಡಾ.ತುಳಸಿರಾಮ್‌, ಮಹಿಳೆಯರನ್ನು ಗುರುತಿಸಿ ಕರೆ ತರುತ್ತಿದ್ದ ವಿರೇಶ್‌, ನವೀನ್‌ಕುಮಾರ್‌, ನಯನ್‌ ಕುಮಾರ್‌ ಹಾಗೂ ಶಿವನಂಜೇಗೌಡ, ಮಾತಾ ಆಸ್ಪತ್ರೆಯ ವ್ಯವಸ್ಥಾಪಕಿ ಮೀನಾ, ಲ್ಯಾಬ್ ಟೆಕ್ನೀಷಿಯನ್ ನಿಸಾರ್ ಹಾಗೂ ಸ್ವಾಗತಕಾರ್ತಿ ರಿಜ್ಮಾ ಖಾನಂ ಬಂಧಿತ ಇತರ ಆರೋಪಿಗಳು.

ಮೂರು ವರ್ಷಗಳಲ್ಲಿ 900 ಭ್ರೂಣಗಳ ಹತ್ಯೆ!

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಇದುವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಗರ್ಭಪಾತ ಮಾಡಿದ್ದಾರೆ. ಈ ಹಿಂದೆ ಪ್ರತಿ ತಿಂಗಳು 25ರಿಂದ 27 ಗರ್ಭಪಾತ ಮಾಡಿದ್ದರೆ, 2023 ಜುಲೈ 21ರಿಂದ ಆಗಸ್ಟ್‌ 16ರವರೆಗೆ ಬರೋಬ್ಬರಿ 242 ಗರ್ಭಪಾತ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪ್ರಮುಖ ಆರೋಪಿ ಡಾ.ಚಂದನ್ ಬಳ್ಳಾಲ್, ತನ್ನ ಮಾತಾ ಆಸ್ಪತ್ರೆಯನ್ನು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮೈಸೂರಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಿಂದಲೂ ಮಹಿಳೆಯರುನ್ನು ಗುರುತಿಸಿ ಆರೋಪಿ ವೀರೇಶ್ ಮತ್ತು ತಂಡ ಕರೆ ತರುತ್ತಿತ್ತು. ಕೆಲವರು ಭ್ರೂಣ ಪತ್ತೆಗೆ ಬರುತ್ತಿದ್ದರು ಬಳಿಕ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಿಸುತ್ತಿದ್ದರು. ಇದಕ್ಕಾಗಿ ಆರೋಪಿಗಳು 25 ರಿಂದ 30 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದರು.

ಮೈಸೂರಿನ ಮಾತಾ ಆಸ್ಪತ್ರೆಯಲ್ಲದೇ ಮಂಡ್ಯದ ಕೆಲವು ಕಡೆಯೂ ಭ್ರೂಣ ಪತ್ತೆ ಮತ್ತು ಹತ್ಯೆ ನಡೆಯುತ್ತಿತ್ತು. ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್‌ ಯಂತ್ರ ಇರಿಸಿದ್ದರು. ಹಲವು ವರ್ಷಗಳಿಂದ ಇದು ನಡೆದಿತ್ತು. ಬೈಯಪ್ಪನಹಳ್ಳಿ ಪೊಲೀಸರು ವೀರೇಶ್‌ನನ್ನು ಬಂಧಿಸಿದಾಗ ಈ ಎಲ್ಲಾ ವಿಚಾರ ಬಯಲಾಗಿದೆ ಎಂದು ಬೆಂಗಳೂರು ಪೂರ್ವ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ.

ತನ್ನ ಆಸ್ಪತ್ರೆಯ ಸಿಬ್ಬಂದಿಯ ಬಂಧನದ ವಿಚಾರ ತಿಳಿದು ಡಾ.ಚಂದನ್‌ ಬಲ್ಲಾಳ್‌ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಕಳೆದ ಶನಿವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಂದನ್‌ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಈಗಾಗಲೇ ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ, ಡಾ.ರಾಜಕುಮಾರ್‌ ಆಸ್ಪತ್ರೆಯಲ್ಲಿರುವ ಆಯುರ್ವೇದಿಕ್‌ ಪೈಲ್ಸ್‌ ಡೇ ಕೇರ್‌ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ ಮಾತ್ರವಲ್ಲದೇ ಇತರೆಡೆಗೂ ಭ್ರೂಣ ಹತ್ಯೆ ಜಾಲ ಹಬ್ಬಿರುವ ಶಂಕೆಯಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ.

ಭ್ರೂಣ ಹತ್ಯೆ ಜಾಲ ಪತ್ತೆಯಾಗಿದ್ದು ಹೇಗೆ?

ಅ.15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಿಸದೆ ಹೋಗಿದ್ದರು. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಮೂವರಿಗೆ ಜಾಮೀನು :

ಬಂಧಿತ ಆರೋಪಿಗಳ ಪೈಕಿ ತಮಿಳುನಾಡು ಮೂಲದ ಮಕ್ಕಳ ತಜ್ಞ ಡಾ. ತುಳಸಿರಾಮ್, ಪ್ರಕರಣದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಅವರ ಪತ್ನಿ ಮೀನಾ ಹಾಗೂ ಮಾತಾ ಆಸ್ಪತ್ರೆಯ ಸ್ವಾಗತಗಾರ್ತಿ ನಜ್ಮಾ ಖಾನಂ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದ ಎಂದು ತಿಳಿದು ಬಂದಿದೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಆಯ್ಕೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ : ಉತ್ತರಕಾಶಿ: 17 ದಿನಗಳ ಬಳಿಕ ಸುರಂಗದಿಂದ ಹೊರಬಂದ 41 ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...