Homeಕರ್ನಾಟಕಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು, ಮಂಡ್ಯ ಭಾಗದಲ್ಲಿ ಹೆಣ್ಣು ಭ್ರೂಣಗಳನ್ನು ಪತ್ತೆಹಚ್ಚಿ ಹತ್ಯೆ ಮಾಡುತ್ತಿದ್ದ ಭಾರೀ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು ಇದುವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರಿನ ಉದಯಗಿರಿಯ ಮಾತಾ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದನ್‌ ಬಲ್ಲಾಳ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಭ್ರೂಣಗಳ ಹತ್ಯೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡು ಮೂಲದ ವೈದ್ಯ ಡಾ.ತುಳಸಿರಾಮ್‌, ಮಹಿಳೆಯರನ್ನು ಗುರುತಿಸಿ ಕರೆ ತರುತ್ತಿದ್ದ ವಿರೇಶ್‌, ನವೀನ್‌ಕುಮಾರ್‌, ನಯನ್‌ ಕುಮಾರ್‌ ಹಾಗೂ ಶಿವನಂಜೇಗೌಡ, ಮಾತಾ ಆಸ್ಪತ್ರೆಯ ವ್ಯವಸ್ಥಾಪಕಿ ಮೀನಾ, ಲ್ಯಾಬ್ ಟೆಕ್ನೀಷಿಯನ್ ನಿಸಾರ್ ಹಾಗೂ ಸ್ವಾಗತಕಾರ್ತಿ ರಿಜ್ಮಾ ಖಾನಂ ಬಂಧಿತ ಇತರ ಆರೋಪಿಗಳು.

ಮೂರು ವರ್ಷಗಳಲ್ಲಿ 900 ಭ್ರೂಣಗಳ ಹತ್ಯೆ!

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಇದುವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಗರ್ಭಪಾತ ಮಾಡಿದ್ದಾರೆ. ಈ ಹಿಂದೆ ಪ್ರತಿ ತಿಂಗಳು 25ರಿಂದ 27 ಗರ್ಭಪಾತ ಮಾಡಿದ್ದರೆ, 2023 ಜುಲೈ 21ರಿಂದ ಆಗಸ್ಟ್‌ 16ರವರೆಗೆ ಬರೋಬ್ಬರಿ 242 ಗರ್ಭಪಾತ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪ್ರಮುಖ ಆರೋಪಿ ಡಾ.ಚಂದನ್ ಬಳ್ಳಾಲ್, ತನ್ನ ಮಾತಾ ಆಸ್ಪತ್ರೆಯನ್ನು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮೈಸೂರಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಿಂದಲೂ ಮಹಿಳೆಯರುನ್ನು ಗುರುತಿಸಿ ಆರೋಪಿ ವೀರೇಶ್ ಮತ್ತು ತಂಡ ಕರೆ ತರುತ್ತಿತ್ತು. ಕೆಲವರು ಭ್ರೂಣ ಪತ್ತೆಗೆ ಬರುತ್ತಿದ್ದರು ಬಳಿಕ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಿಸುತ್ತಿದ್ದರು. ಇದಕ್ಕಾಗಿ ಆರೋಪಿಗಳು 25 ರಿಂದ 30 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದರು.

ಮೈಸೂರಿನ ಮಾತಾ ಆಸ್ಪತ್ರೆಯಲ್ಲದೇ ಮಂಡ್ಯದ ಕೆಲವು ಕಡೆಯೂ ಭ್ರೂಣ ಪತ್ತೆ ಮತ್ತು ಹತ್ಯೆ ನಡೆಯುತ್ತಿತ್ತು. ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್‌ ಯಂತ್ರ ಇರಿಸಿದ್ದರು. ಹಲವು ವರ್ಷಗಳಿಂದ ಇದು ನಡೆದಿತ್ತು. ಬೈಯಪ್ಪನಹಳ್ಳಿ ಪೊಲೀಸರು ವೀರೇಶ್‌ನನ್ನು ಬಂಧಿಸಿದಾಗ ಈ ಎಲ್ಲಾ ವಿಚಾರ ಬಯಲಾಗಿದೆ ಎಂದು ಬೆಂಗಳೂರು ಪೂರ್ವ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ.

ತನ್ನ ಆಸ್ಪತ್ರೆಯ ಸಿಬ್ಬಂದಿಯ ಬಂಧನದ ವಿಚಾರ ತಿಳಿದು ಡಾ.ಚಂದನ್‌ ಬಲ್ಲಾಳ್‌ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಕಳೆದ ಶನಿವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಂದನ್‌ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಈಗಾಗಲೇ ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ, ಡಾ.ರಾಜಕುಮಾರ್‌ ಆಸ್ಪತ್ರೆಯಲ್ಲಿರುವ ಆಯುರ್ವೇದಿಕ್‌ ಪೈಲ್ಸ್‌ ಡೇ ಕೇರ್‌ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ ಮಾತ್ರವಲ್ಲದೇ ಇತರೆಡೆಗೂ ಭ್ರೂಣ ಹತ್ಯೆ ಜಾಲ ಹಬ್ಬಿರುವ ಶಂಕೆಯಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ.

ಭ್ರೂಣ ಹತ್ಯೆ ಜಾಲ ಪತ್ತೆಯಾಗಿದ್ದು ಹೇಗೆ?

ಅ.15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಿಸದೆ ಹೋಗಿದ್ದರು. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಮೂವರಿಗೆ ಜಾಮೀನು :

ಬಂಧಿತ ಆರೋಪಿಗಳ ಪೈಕಿ ತಮಿಳುನಾಡು ಮೂಲದ ಮಕ್ಕಳ ತಜ್ಞ ಡಾ. ತುಳಸಿರಾಮ್, ಪ್ರಕರಣದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಅವರ ಪತ್ನಿ ಮೀನಾ ಹಾಗೂ ಮಾತಾ ಆಸ್ಪತ್ರೆಯ ಸ್ವಾಗತಗಾರ್ತಿ ನಜ್ಮಾ ಖಾನಂ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದ ಎಂದು ತಿಳಿದು ಬಂದಿದೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಆಯ್ಕೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ : ಉತ್ತರಕಾಶಿ: 17 ದಿನಗಳ ಬಳಿಕ ಸುರಂಗದಿಂದ ಹೊರಬಂದ 41 ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...