Homeಕರ್ನಾಟಕಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು, ಮಂಡ್ಯ ಭಾಗದಲ್ಲಿ ಹೆಣ್ಣು ಭ್ರೂಣಗಳನ್ನು ಪತ್ತೆಹಚ್ಚಿ ಹತ್ಯೆ ಮಾಡುತ್ತಿದ್ದ ಭಾರೀ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು ಇದುವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರಿನ ಉದಯಗಿರಿಯ ಮಾತಾ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದನ್‌ ಬಲ್ಲಾಳ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಭ್ರೂಣಗಳ ಹತ್ಯೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡು ಮೂಲದ ವೈದ್ಯ ಡಾ.ತುಳಸಿರಾಮ್‌, ಮಹಿಳೆಯರನ್ನು ಗುರುತಿಸಿ ಕರೆ ತರುತ್ತಿದ್ದ ವಿರೇಶ್‌, ನವೀನ್‌ಕುಮಾರ್‌, ನಯನ್‌ ಕುಮಾರ್‌ ಹಾಗೂ ಶಿವನಂಜೇಗೌಡ, ಮಾತಾ ಆಸ್ಪತ್ರೆಯ ವ್ಯವಸ್ಥಾಪಕಿ ಮೀನಾ, ಲ್ಯಾಬ್ ಟೆಕ್ನೀಷಿಯನ್ ನಿಸಾರ್ ಹಾಗೂ ಸ್ವಾಗತಕಾರ್ತಿ ರಿಜ್ಮಾ ಖಾನಂ ಬಂಧಿತ ಇತರ ಆರೋಪಿಗಳು.

ಮೂರು ವರ್ಷಗಳಲ್ಲಿ 900 ಭ್ರೂಣಗಳ ಹತ್ಯೆ!

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಇದುವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಗರ್ಭಪಾತ ಮಾಡಿದ್ದಾರೆ. ಈ ಹಿಂದೆ ಪ್ರತಿ ತಿಂಗಳು 25ರಿಂದ 27 ಗರ್ಭಪಾತ ಮಾಡಿದ್ದರೆ, 2023 ಜುಲೈ 21ರಿಂದ ಆಗಸ್ಟ್‌ 16ರವರೆಗೆ ಬರೋಬ್ಬರಿ 242 ಗರ್ಭಪಾತ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪ್ರಮುಖ ಆರೋಪಿ ಡಾ.ಚಂದನ್ ಬಳ್ಳಾಲ್, ತನ್ನ ಮಾತಾ ಆಸ್ಪತ್ರೆಯನ್ನು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮೈಸೂರಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಿಂದಲೂ ಮಹಿಳೆಯರುನ್ನು ಗುರುತಿಸಿ ಆರೋಪಿ ವೀರೇಶ್ ಮತ್ತು ತಂಡ ಕರೆ ತರುತ್ತಿತ್ತು. ಕೆಲವರು ಭ್ರೂಣ ಪತ್ತೆಗೆ ಬರುತ್ತಿದ್ದರು ಬಳಿಕ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಿಸುತ್ತಿದ್ದರು. ಇದಕ್ಕಾಗಿ ಆರೋಪಿಗಳು 25 ರಿಂದ 30 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದರು.

ಮೈಸೂರಿನ ಮಾತಾ ಆಸ್ಪತ್ರೆಯಲ್ಲದೇ ಮಂಡ್ಯದ ಕೆಲವು ಕಡೆಯೂ ಭ್ರೂಣ ಪತ್ತೆ ಮತ್ತು ಹತ್ಯೆ ನಡೆಯುತ್ತಿತ್ತು. ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್‌ ಯಂತ್ರ ಇರಿಸಿದ್ದರು. ಹಲವು ವರ್ಷಗಳಿಂದ ಇದು ನಡೆದಿತ್ತು. ಬೈಯಪ್ಪನಹಳ್ಳಿ ಪೊಲೀಸರು ವೀರೇಶ್‌ನನ್ನು ಬಂಧಿಸಿದಾಗ ಈ ಎಲ್ಲಾ ವಿಚಾರ ಬಯಲಾಗಿದೆ ಎಂದು ಬೆಂಗಳೂರು ಪೂರ್ವ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ.

ತನ್ನ ಆಸ್ಪತ್ರೆಯ ಸಿಬ್ಬಂದಿಯ ಬಂಧನದ ವಿಚಾರ ತಿಳಿದು ಡಾ.ಚಂದನ್‌ ಬಲ್ಲಾಳ್‌ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಕಳೆದ ಶನಿವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಂದನ್‌ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಈಗಾಗಲೇ ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ, ಡಾ.ರಾಜಕುಮಾರ್‌ ಆಸ್ಪತ್ರೆಯಲ್ಲಿರುವ ಆಯುರ್ವೇದಿಕ್‌ ಪೈಲ್ಸ್‌ ಡೇ ಕೇರ್‌ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ ಮಾತ್ರವಲ್ಲದೇ ಇತರೆಡೆಗೂ ಭ್ರೂಣ ಹತ್ಯೆ ಜಾಲ ಹಬ್ಬಿರುವ ಶಂಕೆಯಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ.

ಭ್ರೂಣ ಹತ್ಯೆ ಜಾಲ ಪತ್ತೆಯಾಗಿದ್ದು ಹೇಗೆ?

ಅ.15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಿಸದೆ ಹೋಗಿದ್ದರು. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಮೂವರಿಗೆ ಜಾಮೀನು :

ಬಂಧಿತ ಆರೋಪಿಗಳ ಪೈಕಿ ತಮಿಳುನಾಡು ಮೂಲದ ಮಕ್ಕಳ ತಜ್ಞ ಡಾ. ತುಳಸಿರಾಮ್, ಪ್ರಕರಣದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಅವರ ಪತ್ನಿ ಮೀನಾ ಹಾಗೂ ಮಾತಾ ಆಸ್ಪತ್ರೆಯ ಸ್ವಾಗತಗಾರ್ತಿ ನಜ್ಮಾ ಖಾನಂ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದ ಎಂದು ತಿಳಿದು ಬಂದಿದೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಆಯ್ಕೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ : ಉತ್ತರಕಾಶಿ: 17 ದಿನಗಳ ಬಳಿಕ ಸುರಂಗದಿಂದ ಹೊರಬಂದ 41 ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...