HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...