HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...