HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...