HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...