HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...