HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....