HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...