Homeಸಿನಿಮಾಕ್ರೀಡೆಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳ ನಡುವೆಯೇ ಏರುತ್ತಿರುವ ಫಿಫಾ ಫೀವರ್

ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳ ನಡುವೆಯೇ ಏರುತ್ತಿರುವ ಫಿಫಾ ಫೀವರ್

- Advertisement -
- Advertisement -

ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡಾ ಹಬ್ಬವಾದ ಫಿಫಾ 2022 ಫುಟ್‌ಬಾಲ್ ವಿಶ್ವಕಪ್‌ಗೆ ಕತಾರ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ವಿಶ್ವದ ಬಲಿಷ್ಠ 32 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದರೆ, ತಮ್ಮ ನೆಚ್ಚಿನ ತಂಡದ ಗೆಲುವಿಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕ್ರಿಕೆಟನ್ನು ಉಸಿರಾಡುವ ಭಾರತದಲ್ಲೂ ಫುಟ್‌ಬಾಲ್ ಫೀವರ್ ದಿನೇದಿನೇ ಏರುತ್ತಲೇ ಇದೆ. ಕೋಲ್ಕತ್ತಾದ ಬೀದಿಗಳಲ್ಲಿ ಫುಟ್‌ಬಾಲ್ ದಂತಕಥೆಗಳಾದ ಲಿಯೋನಲ್ ಮೆಸ್ಸಿ, ಕ್ರಿಸ್ಟಿಯಾನೋ ರೊನಾಲ್ಡೋ, ನೇಯ್ಮರ್ ಚಿತ್ರಗಳು ರಾರಾಜಿಸುತ್ತಿದ್ದರೆ, ಕೇರಳದಲ್ಲಂತೂ ರಸ್ತೆಗಳ ಇಕ್ಕೆಲಗಳಲ್ಲಿ ಜನಪ್ರಿಯ ಫುಟ್‌ಬಾಲ್ ಆಟಗಾರರ ಕಟೌಟ್‌ಗಳು, ನೆಚ್ಚಿನ ತಂಡಗಳ ಬಾವುಟಗಳು ಕ್ರಿಕೆಟನ್ನೂ ನಾಚಿಸುತ್ತಿವೆ. ಏಕೆಂದರೆ ಫುಟ್‌ಬಾಲ್ ಎಂಬ ಆಟದ ಗಮ್ಮತ್ತೆ ಅಂಥದ್ದು.

ಜಗತ್ತಿನ ಫುಟ್‌ಬಾಲ್ ಕ್ರೀಡೆಯ ಅತ್ಯುನ್ನತ ಪ್ರಶಸ್ತಿ ಫಿಫಾ. ಇದನ್ನು ಸಾಮಾನ್ಯವಾಗಿ ವಿಶ್ವಕಪ್ ಫುಟ್‌ಬಾಲ್ ಎಂದೇ ಕರೆಯುವುದು ವಾಡಿಕೆ. ಈ ಪಂದ್ಯಾವಳಿಯು ಫಿಫಾ (ಅಂತಾರಾಷ್ಟ್ರೀಯ ಫುಟ್‌ಬಾಲ್ ಫೆಡರೇಷನ್) ಸದಸ್ಯ ರಾಷ್ಟ್ರಗಳ ಪುರುಷರ ತಂಡಗಳ ನಡುವೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುತ್ತದೆ. 1930ರಲ್ಲಿ ಮೊಟ್ಟಮೊದಲ ಫಿಫಾ ವಿಶ್ವಕಪ್ ಟೂರ್ನಿಯನ್ನು ಆಯೋಜಿಸಲಾಗಿತ್ತು. 1940 ಮತ್ತು 1944ರಲ್ಲಿ ಎರಡನೇ ಮಹಾಯುದ್ಧದ ಕಾರಣಕ್ಕೆ ಈ ಟೂರ್ನಿಯನ್ನು ಆಯೋಜಿಸಿರಲಿಲ್ಲ. ಉಳಿದಂತೆ ವರ್ಷದಿಂದ ವರ್ಷಕ್ಕೆ ಈ ಕ್ರೀಡಾಕೂಟದ ಜನಪ್ರಿಯತೆ ಮತ್ತಷ್ಟು ಹೆಚ್ಚುತ್ತಲೇ ಇದೆ.

ಇದೇ ಕಾರಣಕ್ಕೆ ವಿಶ್ವದಲ್ಲೇ ಅತಿ ಹೆಚ್ಚಿನ ಜನ ದೂರದರ್ಶನದ ಮೂಲಕ ವೀಕ್ಷಿಸುವ ಕ್ರೀಡಾಕೂಟ ಎಂಬ ಶ್ರೇಯಕ್ಕೆ ಫಿಫಾ ಪಾತ್ರವಾಗಿದೆ. 2018 ವಿಶ್ವಕಪ್ ರಷ್ಯಾದಲ್ಲಿ ನಡೆದಿತ್ತು. ಇಡೀ ಕೂಟದ ಉದ್ದಕ್ಕೂ 64 ಪಂದ್ಯಗಳು ನಡೆದಿದ್ದವು. ಈ ಪಂದ್ಯಗಳನ್ನು ಟಿವಿಯಲ್ಲಿ ದಾಖಲೆಯ 191 ಮಿಲಿಯನ್ ಜನ ವೀಕ್ಷಿಸಿದ್ದರು ಎಂದರೆ ಫುಟ್‌ಬಾಲ್‌ನ ಜನಪ್ರಿಯತೆ ಎಂಥದ್ದು ಎಂಬುದು ಅರ್ಥವಾಗುತ್ತದೆ. ಪ್ರಸ್ತುತ ವರ್ಷ ಈ ದಾಖಲೆ ಮತ್ತಷ್ಟು ಸುಧಾರಿಸಲಿದೆ ಎಂದು ಅಂದಾಜಿಸಲಾಗಿದೆ. ಈ ವರ್ಷದ ಟೂರ್ನಿಯಲ್ಲಿ ವಿಶ್ವಕಪ್ ಗೆದ್ದ ತಂಡಕ್ಕೆ 42 ಮಿಲಿಯನ್ ಡಾಲರ್ ದೊರೆತರೆ, ಫೈನಲ್‌ನಲ್ಲಿ ಸೋತ ತಂಡಕ್ಕೆ 30 ಮಿಲಿಯನ್ ಡಾಲರ್ ಮತ್ತು ಪ್ರಶಸ್ತಿ ಲಭಿಸಲಿದೆ. ಇನ್ನೂ ಈ ಟೂರ್ನಿಯಲ್ಲಿ ಫಿಫಾ 5.31 ಟ್ರಿಲಿಯನ್ ಲಾಭ ಗಳಿಸಿದರೆ, ಆತಿಥೇಯ ಕತಾರ್ 1.27 ಲಕ್ಷ ಕೋಟಿ ಲಾಭ ನೋಡಲಿದೆ.

ಫುಟ್‌ಬಾಲ್ ಇತಿಹಾಸ ಏನು?

ಚೆಂಡನ್ನು ಕಾಲಿನಿಂದ ಒದೆಯುವ ಮೂಲಕ ಗೋಲು ಗಳಿಸುವ ಫುಟ್‌ಬಾಲ್ ಆಟಕ್ಕೆ ಯೂರೋಪ್‌ನಷ್ಟೇ ಪ್ರಾಚೀನ ಇತಿಹಾಸವಿದೆ. ಯೂರೋಪ್ ದೇಶಗಳ ಪಾಲಿಗೆ ಫುಟ್‌ಬಾಲ್ ಎಂಬುದು ಅಲ್ಲಿನ ಪರಂಪರೆ ಮತ್ತು ಪ್ರಾಚೀನ ಸಂಪ್ರದಾಯಗಳ ಭಾಗ. ಹಿಂದಿನಿಂದಲೂ ಅಲ್ಲಿನ ರೈತರು ಕುಟುಂಬಸಮೇತರಾಗಿ ಈ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿದ್ದರು ಎಂದು ಅಲ್ಲಿನ ಇತಿಹಾಸದ ಪುಟಗಳಲ್ಲಿ ಉಲ್ಲೇಖಿಸಲಾಗಿದೆ. 18-19ನೇ ಶತಮಾನಗಳಲ್ಲಿ ಯೂರೋಪಿನ ಇಂಗ್ಲಿಷ್ ಪಬ್ಲಿಕ್ ಶಾಲೆಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಈ ಆಟವನ್ನು ಸ್ಪರ್ಧಾತ್ಮಕಗೊಳಿಸಲಾಯಿತು. ತದನಂತರದ ಕಾಲದಲ್ಲಿ ಬ್ರಿಟಿಷರು ಈ ಆಟವನ್ನು ತಮ್ಮ ವಸಾಹತು ರಾಷ್ಟ್ರಗಳಿಗೂ ಪರಿಚಯಿಸಿದರು. ಈ ಮೂಲಕ ಫುಟ್‌ಬಾಲ್ ಮತ್ತಷ್ಟು ಜನಪ್ರಿಯವಾಯಿತು. ಇಂದು ವಿಶ್ವದಲ್ಲೇ ಅತಿಹೆಚ್ಚು ಜನಪ್ರಿಯತೆಯನ್ನು ಹೊಂದಿರುವ ಕ್ರೀಡೆಗಳ ಪಟ್ಟಿಯಲ್ಲಿ ಫುಟ್‌ಬಾಲ್‌ಗೆ ಅಗ್ರಸ್ಥಾನ ಎಂದರೆ ತಪ್ಪಾಗಲಾರದು.

ಇದನ್ನೂ ಓದಿ: ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ವಿಶ್ವಕಪ್

ಕ್ರೀಡಾಲೋಕದಲ್ಲಿ ಒಲಿಂಪಿಕ್ಸ್‌ಗೆ ತನ್ನದೇ ಆದ ಸ್ಥಾನವಿದೆ. ಆದರೆ 1904ರಲ್ಲಿ ಸ್ಥಾಪಿತವಾದ ಫಿಫಾ ಒಲಿಂಪಿಕ್ಸ್‌ನ ಹೊರಗೆ ಒಂದು ಜಾಗತಿಕ ಮಟ್ಟದ ಫುಟ್‌ಬಾಲ್ ಕ್ರೀಡಾಕೂಟವನ್ನು ಆಯೋಜಿಸಲು ಕ್ರಮಕೈಗೊಂಡಿತ್ತು. ಆದರೆ ಆರಂಭದ ಯತ್ನಗಳು ಸಫಲವಾಗಲಿಲ್ಲ. ಬ್ರಿಟಿಷ್ ಫುಟ್‌ಬಾಲ್ ಅಸೋಸಿಯೇಷನ್ ಮತ್ತು ಫಿಫಾದ ನಡುವೆ ಸಾಕಷ್ಟು ತಿಕ್ಕಾಟ ನಡೆದು ಕೊನೆಗೆ ಫಿಫಾ ಒಲಿಂಪಿಕ್ ಫುಟ್‌ಬಾಲ್‌ಗೆ ಮಾನ್ಯತೆ ನೀಡಿತು, ಅಲ್ಲದೆ 1920ರ ಒಲಿಂಪಿಕ್ಸ್‌ನಲ್ಲಿ ಫುಟ್‌ಬಾಲ್ ಪಂದ್ಯಾವಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿತು. ಹೀಗೆ ನಿಜವಾದ ಅರ್ಥದಲ್ಲಿ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಂದ್ಯಾವಳಿಯು ಮೊದಲ ಬಾರಿಗೆ 1920ರಲ್ಲಿ ಒಲಿಂಪಿಕ್ಸ್‌ನಲ್ಲಿ ಜರುಗಿತು.

ತರುವಾಯ ಫಿಫಾ ತನ್ನದೇ ಆದ ವಿಶ್ವ ಫುಟ್‌ಬಾಲ್ ಚಾಂಪಿಯನ್‌ಶಿಪ್ ನಡೆಸುವ ತನ್ನ ಹಳೆಯ ಯೋಜನೆಗೆ ಮತ್ತೆ ಜೀವ ತುಂಬಿ 1930ರಲ್ಲಿ ಉರುಗ್ವೆಯಲ್ಲಿ ಪ್ರಪ್ರಥಮ ಫುಟ್‌ಬಾಲ್ ವಿಶ್ವಕಪ್ ಪಂದ್ಯಾವಳಿಯನ್ನು ಆಯೋಜಿಸಲು ಮುಂದಾಯಿತು. 1924 ಮತ್ತು 1928ರ ಒಲಿಂಪಿಕ್ಸ್‌ನಲ್ಲಿ ಉರುಗ್ವೆ ತಂಡವು ಫುಟ್‌ಬಾಲ್ ಸ್ವರ್ಣಪದಕ ಪಡೆದಿತ್ತು. ಅಲ್ಲದೇ ಉರುಗ್ವೆಯು 1930ರಲ್ಲಿ ತನ್ನ ಸ್ವಾತಂತ್ರ್ಯೋತ್ಸವದ ಶತಮಾನವನ್ನು ಆಚರಿಸಲು ಮುಂದಾಗಿತ್ತು. ಹೀಗಾಗಿ ಸಹಜವಾಗಿಯೇ ಮೊದಲ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯನ್ನು ಆಯೋಜಿಸುವ ಅವಕಾಶವನ್ನು ಯೂರೋಪ್ ದೇಶಗಳ ಕಡು ವಿರೋಧದ ನಡುವೆಯೂ ಉರುಗ್ವೆ ಪಡೆದುಕೊಂಡಿತು. ಈ ಪಂದ್ಯಾವಳಿಯ ಕನಸನ್ನು ನನಸಾಗಿಸುವಲ್ಲಿ ಫಿಫಾದ ಅಂದಿನ ಅಧ್ಯಕ್ಷ ಜೂಲ್ಸ್ ರಿಮೆ ಪ್ರಧಾನ ಪಾತ್ರ ವಹಿಸಿದ್ದರು. ನಂತರ ನಡೆದದ್ದೆಲ್ಲವೂ ಇತಿಹಾಸ.

ವಿವಾದದಲ್ಲಿ ಫಿಫಾ ಮತ್ತು ಕತಾರ್

ಫಿಫಾ 2014ರ ವಿಶ್ವಕಪ್ ಟೂರ್ನಿ ನಡೆಯುತ್ತಿರುವಾಗಲೇ 2018ರ ವಿಶ್ವಕಪ್ ಆತಿಥ್ಯವನ್ನು ರಷ್ಯಾಗೆ ಹಾಗೂ 2022ರ ವಿಶ್ವಕಪ್ ಆತಿಥ್ಯವನ್ನು ಕತಾರ್ ದೇಶಕ್ಕೆ ನೀಡಲಾಗಿತ್ತು. ಕತಾರ್ ಹಿಂಬಾಗಿಲಿನ ಮೂಲಕ ತನ್ನ ಹಣ ಬಲದ ಸಹಾಯದಿಂದಲೇ ಈ ಆತಿಥ್ಯವನ್ನು ಗಳಿಸಿದೆ ಎಂಬ ಆರೋಪ ಅಂದಿನಿಂದಲೂ ಚಾಲ್ತಿಯಲ್ಲಿದೆ. ಫಿಫಾ ವಿಶ್ವಕಪ್ ಆಯೋಜಿಸಿದ ಮೊದಲ ಅರಬ್ ರಾಷ್ಟ್ರ ಎಂಬ ಶ್ರೇಯಕ್ಕೆ ಕತಾರ್ ಪಾತ್ರವಾಗಿರುವುದೇನೋ ನಿಜ. ಆದರೆ, ವಿವಾದಗಳು ಮಾತ್ರ ಸದ್ಯಕ್ಕಂತೂ ಕತಾರ್ ಮತ್ತು ಫಿಫಾವನ್ನು ಬೆಂಬಿಡದೆ ಕಾಡುತ್ತಿದೆ.

ಕತಾರ್ ದೇಶವು 2013ರಲ್ಲಿ ದೋಹಾ ವಿಶ್ವಕಪ್ ಆಯೋಜಿಸುವ ಬಿಡ್‌ಅನ್ನು ಗೆದ್ದಾಗಲೇ, ಹಲವು ಮಾನವ ಹಕ್ಕುಗಳ ಸಂಘಟನೆಗಳು ಇದನ್ನು ವಿರೋಧಿಸಿದ್ದವು. ಕ್ರೀಡೆ ಎಂಬುದು ಶಾಂತಿ, ಸಮಾನತೆ ಮತ್ತು ಸೌಹಾರ್ದತೆಯ ಸಂಕೇತ. ಆದರೆ, ಮಾನವ ಹಕ್ಕುಗಳ ವಿಚಾರದಲ್ಲಿ ಕಳಪೆ ಸಾಧನೆ ಹೊಂದಿರುವ ಕತಾರ್‌ಗೆ ದೋಹಾ ವಿಶ್ವಕಪ್ ಆಯೋಜನೆಯ ಅವಕಾಶ ನೀಡಿದ್ದು ಸರಿಯಲ್ಲ ಎಂದು ವಾದಿಸಿದ್ದವು. ಅದರಲ್ಲೂ ವಿಶೇಷವಾಗಿ LGBT ಹಕ್ಕುಗಳು, ನಾಗರಿಕ ಸ್ವಾತಂತ್ರ್ಯ ಮತ್ತು ವಲಸೆ ಕಾರ್ಮಿಕರ ಚಿಕಿತ್ಸೆ ವಿಚಾರದಲ್ಲಿ ಕತಾರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ಕಳಪೆ ದಾಖಲೆ ಹೊಂದಿದೆ. ಹೀಗಾಗಿ ಕ್ರೀಡಾಕೂಟದ ಆಯೋಜನೆ ಅವಕಾಶವನ್ನು ಕತಾರ್‌ಗೆ ನೀಡಬಾರದು ಎಂಬ ವಾದ ಮುನ್ನೆಲೆಗೆ ಬಂದಿತ್ತು. ಆದರೆ, ಈ ವಿವಾದ ತಣ್ಣಗಾಗುವ ಮೊದಲೆ ಫಿಫಾ ಆಯೋಜಿಸುವ ಅವಕಾಶವೂ ಕತಾರ್ ಪಾಲಾಗಿದ್ದು ಕ್ರೀಡಾ ಅಭಿಮಾನಿಗಳನ್ನು ಕೆರಳಿಸಿತ್ತು.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಹೀಗಾಗಿ ಫಿಫಾ ಮತ್ತು ಫುಟ್‌ಬಾಲ್ ಅಭಿಮಾನಿಗಳು ಕತಾರ್ ವಿಶ್ವಕಪ್ ಆಯೋಜಿಸುವ ಅವಕಾಶ ನೀಡಿದ್ದಕ್ಕೆ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಅಲ್ಲದೆ, ಕಳೆದ ನಾಲ್ಕು ವರ್ಷಗಳಿಂದ ಎಲ್ಲೇ ಫುಟ್‌ಬಾಲ್ ಪಂದ್ಯಾವಳಿ ನಡೆದರೂ ಅಭಿಮಾನಿಗಳು ಬಾಯ್ಕಾಟ್‌ಕತಾರ್2022 ಎಂಬ ಬ್ಯಾನರ್‌ಗಳನ್ನು ಹಿಡಿದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದರು. ಆದರೂ, ಫಿಫಾ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.

ಪರಿಣಾಮ ಕತಾರ್‌ನ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಖಂಡಿಸಿ ಆಸ್ಟ್ರೇಲಿಯಾ ತಂಡವು ಈಗಾಗಲೇ ವೀಡಿಯೊ ಒಂದನ್ನು ಬಿಡುಗಡೆ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ಡೆನ್ಮಾರ್ಕ್ ತಂಡ ಇಡೀ ಟೂರ್ನಿಯ ಉದ್ದಕ್ಕೂ ಕಪ್ಪು ಬಣ್ಣದ ಪಟ್ಟಿ ಧರಿಸಿ ಆಡಲು ನಿರ್ಧರಿಸಿದೆ. ಇಂಗ್ಲೆಂಡ್‌ನ ಸ್ಟಾರ್ ಆಟಗಾರ ಹ್ಯಾರಿ ಕೇನ್ ಮತ್ತು ಯುರೋಪಿಯನ್ ತಂಡಗಳ ನಾಯಕರು ’ಒನ್‌ಲವ್’ ಆರ್ಮ್‌ಬ್ಯಾಂಡ್‌ಗಳನ್ನು ಧರಿಸಿ ಆಡುವುದಾಗಿ ತಿಳಿಸಿದ್ದಾರೆ. ಕತಾರ್‌ನಲ್ಲಿ ಮಾನವ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂಬ ಕಾರಣಕ್ಕೆ ಪಾಪ್ ಸಂಗೀತ ಲೋಕದ ಖ್ಯಾತ ತಾರೆ ದುವಾ ಲಿಪಾ ಫಿಫಾ ಉದ್ಘಾಟನಾ ಸಮಾರಂಭದಲ್ಲಿ ತಾನು ಪ್ರದರ್ಶನ ನೀಡುವುದಿಲ್ಲ ಎಂದು ಫಿಫಾ ಅವಕಾಶವನ್ನು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಶ್ವಕಪ್ ಗೆದ್ದ ತಂಡಗಳಿವು!

1930 ರಿಂದ 2018ರ ನಡುವೆ ಒಟ್ಟು 21 ಬಾರಿ ವಿಶ್ವಕಪ್ ಫುಟ್‌ಬಾಲ್ ಟೂರ್ನಿ ಜರುಗಿದೆ. ಈ ಪೈಕಿ ಖ್ಯಾತ ಬ್ರೆಜಿಲ್ ತಂಡ 5 ವಿಶ್ವಕಪ್‌ನಲ್ಲಿ ಗೆಲ್ಲುವ ಮೂಲಕ ಫುಟ್‌ಬಾಲ್ ಲೋಕದಲ್ಲಿ ಪಾರಮ್ಯ ಸಾಧಿಸಿದೆ. ಇದು ತಂಡವೊಂದರ ಅತಿಹೆಚ್ಚು ಗೆಲುವು. ಇನ್ನೂ ಜರ್ಮನಿ ಮತ್ತು ಇಟಲಿ ತಲಾ 4 ಬಾರಿ ಹಾಗೂ ದಕ್ಷಿಣ ಅಮೆರಿಕದ ಪುಟ್ಟ ರಾಷ್ಟ್ರ ಉರುಗ್ವೆ, ಅರ್ಜೆಂಟೀನಾ ಮತ್ತು ಫ್ರಾನ್ಸ್ ಎರಡು ಬಾರಿ ವಿಶ್ವಕಪ್‌ಅನ್ನು ತನ್ನ ಮುಡಿಗೇರಿಸಿಕೊಂಡಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ದೇಶಗಳು ತಲಾ ಒಂದು ಬಾರಿ ವಿಶ್ವಕಪ್ ವಿಜಯಿಗಳಾಗಿವೆ.

ಫುಟ್‌ಬಾಲ್ ಅಂದರೆ ಮೆಸ್ಸಿ, ರೊನಾಲ್ಡೋ ಅಷ್ಟೇ ಅಲ್ಲ

ಭಾರತದ ಬಹುಸಂಖ್ಯಾತರ ಮಟ್ಟಿಗೆ ಫುಟ್‌ಬಾಲ್ ಎಂದ ತಕ್ಷಣ ತಟ್ಟನೆ ನೆನಪಾಗುವುದು ಅರ್ಜೆಂಟೀನಾದ ಲಿಯೊನೆಲ್ ಮೆಸ್ಸಿ, ಪೋರ್ಚುಗೀಸ್‌ನ ಕ್ರಿಸ್ಟಿಯಾನೋ ರೊನಾಲ್ಡೊ ಮತ್ತು ಬ್ರೆಜಿಲ್ ದೇಶದ ನೇಯ್ಮರ್ ಹೆಸರು ಮಾತ್ರ. ಆದರೆ, ಜಾಗತಿಕ ಫುಟ್‌ಬಾಲ್‌ನಲ್ಲಿ ಪ್ರಸ್ತುತ ಇವರಿಗಿಂತ ಸದ್ದು ಮಾಡುತ್ತಿರುವ, ತಂಡದ ಪಾಲಿಗೆ ಅತಿಮುಖ್ಯವಾಗಿರುವ ಹಾಗೂ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಹಲವಾರು ಆಟಗಾರರಿದ್ದಾರೆ.

ಫ್ರಾನ್ಸ್ ದೇಶಕ್ಕಾಗಿ ಆಡುತ್ತಿರುವ ಕೈಲಿಯನ್ ಎಂಬಪ್ಪೆ ಪ್ರಸ್ತುತ ವಿಶ್ವದ ನಂಬರ್ ೧ ಆಟಗಾರ. ಫಾರ್ವರ್ಡ್ ಪೊಸಿಷನ್‌ನಲ್ಲಿ ಆಡುವ ಕೈಲಿಯನ್ ಎಂಬಪ್ಪೆ ಪಂದ್ಯದ ಫಿನಿಶರ್ ಆಗಿ ಸಾಕಷ್ಟು ಹೆಸರು ಮಾಡಿದ್ದಾರೆ. ಫ್ರಾನ್ಸ್ ದೇಶಕ್ಕಾಗಿ ಫಾರ್ವರ್ಡ್ ಪೊಸಿಷನ್‌ನಲ್ಲೇ ಆಡುವ ಮತ್ತೋರ್ವ ಆಟಗಾರ ಕರೀಮ್ ಬೆಂಜೆಮಾ ವಿಶ್ವದ ನಂಬರ್ ೨ ಶ್ರೇಯಾಂಕಿತ ಆಟಗಾರ.

ಇನ್ನೂ ಬೆಲ್ಜಿಯಂ ದೇಶದ ಆಟಗಾರರಾದ ಕೆವಿನ್ ಡಿ ಬ್ರೂಯ್ನೆ ಮತ್ತು ಥಿಬೌಟ್ ಕೋರ್ಟೊಯಿಸ್, ಪೋಲೆಂಡ್‌ನ ರಾಬರ್ಟ್ ಲೆವಾಂಡೋಸ್ಕಿ, ಕ್ರೊವೇಶಿಯಾದ ಲ್ಯೂಕ್ ಮೊಡ್ರಿಕ್, ಬ್ರೆಜಿಲ್‌ನ ವಿನಿಸಿಯಸ್ ಜೂನಿಯರ್, ಸೆನೆಗಲ್‌ನ ಸೆಡಿಯೋ ಮಾನೆ, ಇಂಗ್ಲೆಂಡ್‌ನ ಹ್ಯಾರಿ ಕೇನ್ ಸೇರಿದಂತೆ ಹಲವು ಆಟಗಾರರು ಯೂರೋಪಿನ ಶ್ರೀಮಂತ ಫುಟ್‌ಬಾಲ್ ಲೀಗ್‌ಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಈ ಆಟಗಾರರ ಪ್ರದರ್ಶನದ ಮೇಲೂ ಫುಟ್‌ಬಾಲ್ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆಗಳಿವೆ.

ಫಿಫಾ ಟೂರ್ನಿ ವೀಕ್ಷಣೆ ಹೇಗೆ?

ಫಿಫಾ ವಿಶ್ವಕಪ್ 2022 ಪಂದ್ಯಗಳನ್ನು ಭಾರತದ ಹೊಸ ಪ್ರೀಮಿಯರ್ ಸ್ಪೋರ್ಟ್ಸ್ ನೆಟ್ವರ್ಕ್ ವಯಾಕಾಮ್18ನ ಸ್ಪೋರ್ಟ್ಸ್18 ಮತ್ತು ಸ್ಪೋರ್ಟ್ಸ್18 ಹೆಚ್‌ಡಿ ಟಿವಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಭಾರತದಲ್ಲಿ ಈ ಚಾನೆಲ್‌ಗಳನ್ನು ಹೊರತುಪಡಿಸಿ ಜಿಯೋ ಸಿನಿಮಾ ಆ್ಯಪ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತ ಲೈವ್ ಸ್ಟ್ರೀಮಿಂಗ್ ಲಭ್ಯವಿದೆ.

ಅಶೋಕ್ ಕುಮಾರ್

ಅಶೋಕ್ ಕುಮಾರ್
ಮೂಲತಃ ಭದ್ರಾವತಿಯವರಾದ ಅಶೋಕ್, ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವಿ ಯುವ ಪತ್ರಕರ್ತರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...