Homeಸಿನಿಮಾಕ್ರೀಡೆಫಿಫಾ ಫುಟ್ಬಾಲ್: ಸ್ಪೇನ್ ಮಣಿಸಿ 16ರ ಘಟ್ಟಕ್ಕೆ ಕಾಲಿಟ್ಟ ಜಪಾನ್ - ವಿಶ್ವಕಪ್‌ನಿಂದ ಜರ್ಮನಿ ಔಟ್

ಫಿಫಾ ಫುಟ್ಬಾಲ್: ಸ್ಪೇನ್ ಮಣಿಸಿ 16ರ ಘಟ್ಟಕ್ಕೆ ಕಾಲಿಟ್ಟ ಜಪಾನ್ – ವಿಶ್ವಕಪ್‌ನಿಂದ ಜರ್ಮನಿ ಔಟ್

- Advertisement -
- Advertisement -

2010 ರ ಫಿಫಾ ವಿಶ್ವಕಪ್ ಚಾಂಪಿಯನ್ ಬಲಿಷ್ಟ ಜರ್ಮನಿ ತಂಡವು ಕತಾರ್ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದೆ. ಇದಕ್ಕೆ ಕಾರಣ ಏಷ್ಯಾದ ಉದಯೋನ್ಮುಖ ತಂಡ ಜಪಾನ್. ತನ್ನ ಆರಂಭಿಕ ಪಂದ್ಯದಲ್ಲಿ ಜರ್ಮನಿ ತಂಡವನ್ನು ಬಗ್ಗು ಬಿಡಿದಿದ್ದ ಜಪಾನ್ ಇಂದು ಬಲಿಷ್ಟ ಸ್ಪೇನ್ ತಂಡವನ್ನು ಸಹ ಮಣಿಸಿ (2-1) 16ರ ಘಟ್ಟಕ್ಕೆ ಕಾಲಿಟ್ಟ ಏಷ್ಯಾ ಖಂಡದ ತಂಡವೆನಿಸಿಕೊಂಡಿತು.

ಲೀಗ್ ಹಂತದ ಇ ಗುಂಪಿನಲ್ಲಿ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ 6 ಅಂಕ ಪಡೆದ ಜಪಾನ್ ಸುಲಭವಾಗಿ ನಾಕೌಟ್ ಹಂತಕ್ಕೆ ಪ್ರವೇಶ ಪಡೆಯಿತು. ಜರ್ಮನಿ ಇಂದು ನಡೆದ ಮತ್ತೊಂದು ಪಂದ್ಯದಲ್ಲಿ ಕೋಸ್ಟರಿಕ ವಿರುದ್ದ 4-2 ಅಂತದಲ್ಲಿ ಜಯಗಳಿಸಿದರೂ ಟೂರ್ನಿಯಲ್ಲಿ ಉಳಿಯಲಾಗಲಿಲ್ಲ.

ಸದ್ಯ ಸ್ಪೇನ್ ಮತ್ತು ಜರ್ಮನಿ ತಲಾ ಒಂದು ಗೆಲುವು, ಒಂದು ಸೋಲು ಮತ್ತು ಒಂದು ಡ್ರಾದೊಂದಿಗೆ 4 ಅಂಕ ಗಳಿಸಿವೆ. ಆದರೂ ಇಡೀ ಟೂರ್ನಿಯಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಧಾರದಲ್ಲಿ ಸ್ಪೇನ್ 16ರ ಘಟ್ಟಕ್ಕೆ ಪ್ರವೇಶ ಪಡೆದರೆ ಜರ್ಮನಿ ತಂಡ ತವರಿಗೆ ಪ್ರಯಾಣ ಬೆಳೆಸಬೇಕಿದೆ. ಮೂರು ಪಂದ್ಯಗಳಲ್ಲಿ ಸ್ಪೇನ್ 9 ಗೋಲು ಗಳಿಸಿ ನಾಲ್ಕು ಅಂಕ ಪಡೆದಿದ್ದರೆ, ಜರ್ಮನಿ 6 ಗೋಲು ಗಳಿಸಿ 4 ಅಂಕ ಪಡೆದಿದೆ.

ಇಂದು ನಡೆದ ಪಂದ್ಯದಲ್ಲಿ ಜಪಾನ್ ತಂಡದ ರಿತ್ಸು ಡೋನ್ ಮತ್ತು ಅವೊ ತನಕಾ ತಲಾ ಒಂದೊಂದು ಗೋಲು ಗಳಿಸಿದರೆ, ಸ್ಪೆನ್ ಪರವಾಗಿ ಅಲ್ವಾರೊ ಮೊರಾಟಾ ಒಂದು ಗೋಲು ಗಳಿಸಿದರು.

ಎಫ್ ಗುಂಪಿನಿಂದ ಮೊರಾಕ್ಕೊ ಮತ್ತು ಕ್ರೊವೇಷಿಯಾ, ಡಿ ಗುಂಪಿನಿಂದ ಫ್ರಾನ್ಸ್ ಮತ್ತು ಆಸ್ಟ್ರೇಲಿಯಾ ನಾಕೌಟ್ ಹಂತ ಪ್ರವೇಶಿಸಿವೆ. ಸಿ ಗುಂಪಿನಿಂದ ಅರ್ಜೇಂಟೀನಾ ಮತ್ತು ಪೋಲಾಂಡ್, ಬಿ ಗುಂಪಿನಿಂದ ಇಂಗ್ಲೆಂಡ್ ಮತ್ತು ಅಮೆರಿಕ ಹಾಗೂ ಎ ಗುಂಪಿನಿಂದ ನೆದರ್ಲೆಂಡ್ಸ್ ಮತ್ತು ಸೆನಗಲ್ ನಾಕೌತ್ ಪ್ರವೇಶಿಸಿದ ಇತರ ತಂಡಗಳಾಗಿವೆ.

ಫಿಫಾ ವಿಶ್ವಕಪ್ ಟೂರ್ನಿಯ ಮಾದರೆಯೇನು?

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...