Homeಸಿನಿಮಾಕ್ರೀಡೆಫಿಫಾ ಫುಟ್ಬಾಲ್: ಸ್ಪೇನ್ ಮಣಿಸಿ 16ರ ಘಟ್ಟಕ್ಕೆ ಕಾಲಿಟ್ಟ ಜಪಾನ್ - ವಿಶ್ವಕಪ್‌ನಿಂದ ಜರ್ಮನಿ ಔಟ್

ಫಿಫಾ ಫುಟ್ಬಾಲ್: ಸ್ಪೇನ್ ಮಣಿಸಿ 16ರ ಘಟ್ಟಕ್ಕೆ ಕಾಲಿಟ್ಟ ಜಪಾನ್ – ವಿಶ್ವಕಪ್‌ನಿಂದ ಜರ್ಮನಿ ಔಟ್

- Advertisement -
- Advertisement -

2010 ರ ಫಿಫಾ ವಿಶ್ವಕಪ್ ಚಾಂಪಿಯನ್ ಬಲಿಷ್ಟ ಜರ್ಮನಿ ತಂಡವು ಕತಾರ್ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದೆ. ಇದಕ್ಕೆ ಕಾರಣ ಏಷ್ಯಾದ ಉದಯೋನ್ಮುಖ ತಂಡ ಜಪಾನ್. ತನ್ನ ಆರಂಭಿಕ ಪಂದ್ಯದಲ್ಲಿ ಜರ್ಮನಿ ತಂಡವನ್ನು ಬಗ್ಗು ಬಿಡಿದಿದ್ದ ಜಪಾನ್ ಇಂದು ಬಲಿಷ್ಟ ಸ್ಪೇನ್ ತಂಡವನ್ನು ಸಹ ಮಣಿಸಿ (2-1) 16ರ ಘಟ್ಟಕ್ಕೆ ಕಾಲಿಟ್ಟ ಏಷ್ಯಾ ಖಂಡದ ತಂಡವೆನಿಸಿಕೊಂಡಿತು.

ಲೀಗ್ ಹಂತದ ಇ ಗುಂಪಿನಲ್ಲಿ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ 6 ಅಂಕ ಪಡೆದ ಜಪಾನ್ ಸುಲಭವಾಗಿ ನಾಕೌಟ್ ಹಂತಕ್ಕೆ ಪ್ರವೇಶ ಪಡೆಯಿತು. ಜರ್ಮನಿ ಇಂದು ನಡೆದ ಮತ್ತೊಂದು ಪಂದ್ಯದಲ್ಲಿ ಕೋಸ್ಟರಿಕ ವಿರುದ್ದ 4-2 ಅಂತದಲ್ಲಿ ಜಯಗಳಿಸಿದರೂ ಟೂರ್ನಿಯಲ್ಲಿ ಉಳಿಯಲಾಗಲಿಲ್ಲ.

ಸದ್ಯ ಸ್ಪೇನ್ ಮತ್ತು ಜರ್ಮನಿ ತಲಾ ಒಂದು ಗೆಲುವು, ಒಂದು ಸೋಲು ಮತ್ತು ಒಂದು ಡ್ರಾದೊಂದಿಗೆ 4 ಅಂಕ ಗಳಿಸಿವೆ. ಆದರೂ ಇಡೀ ಟೂರ್ನಿಯಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಧಾರದಲ್ಲಿ ಸ್ಪೇನ್ 16ರ ಘಟ್ಟಕ್ಕೆ ಪ್ರವೇಶ ಪಡೆದರೆ ಜರ್ಮನಿ ತಂಡ ತವರಿಗೆ ಪ್ರಯಾಣ ಬೆಳೆಸಬೇಕಿದೆ. ಮೂರು ಪಂದ್ಯಗಳಲ್ಲಿ ಸ್ಪೇನ್ 9 ಗೋಲು ಗಳಿಸಿ ನಾಲ್ಕು ಅಂಕ ಪಡೆದಿದ್ದರೆ, ಜರ್ಮನಿ 6 ಗೋಲು ಗಳಿಸಿ 4 ಅಂಕ ಪಡೆದಿದೆ.

ಇಂದು ನಡೆದ ಪಂದ್ಯದಲ್ಲಿ ಜಪಾನ್ ತಂಡದ ರಿತ್ಸು ಡೋನ್ ಮತ್ತು ಅವೊ ತನಕಾ ತಲಾ ಒಂದೊಂದು ಗೋಲು ಗಳಿಸಿದರೆ, ಸ್ಪೆನ್ ಪರವಾಗಿ ಅಲ್ವಾರೊ ಮೊರಾಟಾ ಒಂದು ಗೋಲು ಗಳಿಸಿದರು.

ಎಫ್ ಗುಂಪಿನಿಂದ ಮೊರಾಕ್ಕೊ ಮತ್ತು ಕ್ರೊವೇಷಿಯಾ, ಡಿ ಗುಂಪಿನಿಂದ ಫ್ರಾನ್ಸ್ ಮತ್ತು ಆಸ್ಟ್ರೇಲಿಯಾ ನಾಕೌಟ್ ಹಂತ ಪ್ರವೇಶಿಸಿವೆ. ಸಿ ಗುಂಪಿನಿಂದ ಅರ್ಜೇಂಟೀನಾ ಮತ್ತು ಪೋಲಾಂಡ್, ಬಿ ಗುಂಪಿನಿಂದ ಇಂಗ್ಲೆಂಡ್ ಮತ್ತು ಅಮೆರಿಕ ಹಾಗೂ ಎ ಗುಂಪಿನಿಂದ ನೆದರ್ಲೆಂಡ್ಸ್ ಮತ್ತು ಸೆನಗಲ್ ನಾಕೌತ್ ಪ್ರವೇಶಿಸಿದ ಇತರ ತಂಡಗಳಾಗಿವೆ.

ಫಿಫಾ ವಿಶ್ವಕಪ್ ಟೂರ್ನಿಯ ಮಾದರೆಯೇನು?

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...