Homeಸಿನಿಮಾಕ್ರೀಡೆಫಿಫಾ ಫುಟ್ಬಾಲ್: ಸ್ಪೇನ್ ಮಣಿಸಿ 16ರ ಘಟ್ಟಕ್ಕೆ ಕಾಲಿಟ್ಟ ಜಪಾನ್ - ವಿಶ್ವಕಪ್‌ನಿಂದ ಜರ್ಮನಿ ಔಟ್

ಫಿಫಾ ಫುಟ್ಬಾಲ್: ಸ್ಪೇನ್ ಮಣಿಸಿ 16ರ ಘಟ್ಟಕ್ಕೆ ಕಾಲಿಟ್ಟ ಜಪಾನ್ – ವಿಶ್ವಕಪ್‌ನಿಂದ ಜರ್ಮನಿ ಔಟ್

- Advertisement -
- Advertisement -

2010 ರ ಫಿಫಾ ವಿಶ್ವಕಪ್ ಚಾಂಪಿಯನ್ ಬಲಿಷ್ಟ ಜರ್ಮನಿ ತಂಡವು ಕತಾರ್ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದೆ. ಇದಕ್ಕೆ ಕಾರಣ ಏಷ್ಯಾದ ಉದಯೋನ್ಮುಖ ತಂಡ ಜಪಾನ್. ತನ್ನ ಆರಂಭಿಕ ಪಂದ್ಯದಲ್ಲಿ ಜರ್ಮನಿ ತಂಡವನ್ನು ಬಗ್ಗು ಬಿಡಿದಿದ್ದ ಜಪಾನ್ ಇಂದು ಬಲಿಷ್ಟ ಸ್ಪೇನ್ ತಂಡವನ್ನು ಸಹ ಮಣಿಸಿ (2-1) 16ರ ಘಟ್ಟಕ್ಕೆ ಕಾಲಿಟ್ಟ ಏಷ್ಯಾ ಖಂಡದ ತಂಡವೆನಿಸಿಕೊಂಡಿತು.

ಲೀಗ್ ಹಂತದ ಇ ಗುಂಪಿನಲ್ಲಿ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ 6 ಅಂಕ ಪಡೆದ ಜಪಾನ್ ಸುಲಭವಾಗಿ ನಾಕೌಟ್ ಹಂತಕ್ಕೆ ಪ್ರವೇಶ ಪಡೆಯಿತು. ಜರ್ಮನಿ ಇಂದು ನಡೆದ ಮತ್ತೊಂದು ಪಂದ್ಯದಲ್ಲಿ ಕೋಸ್ಟರಿಕ ವಿರುದ್ದ 4-2 ಅಂತದಲ್ಲಿ ಜಯಗಳಿಸಿದರೂ ಟೂರ್ನಿಯಲ್ಲಿ ಉಳಿಯಲಾಗಲಿಲ್ಲ.

ಸದ್ಯ ಸ್ಪೇನ್ ಮತ್ತು ಜರ್ಮನಿ ತಲಾ ಒಂದು ಗೆಲುವು, ಒಂದು ಸೋಲು ಮತ್ತು ಒಂದು ಡ್ರಾದೊಂದಿಗೆ 4 ಅಂಕ ಗಳಿಸಿವೆ. ಆದರೂ ಇಡೀ ಟೂರ್ನಿಯಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಧಾರದಲ್ಲಿ ಸ್ಪೇನ್ 16ರ ಘಟ್ಟಕ್ಕೆ ಪ್ರವೇಶ ಪಡೆದರೆ ಜರ್ಮನಿ ತಂಡ ತವರಿಗೆ ಪ್ರಯಾಣ ಬೆಳೆಸಬೇಕಿದೆ. ಮೂರು ಪಂದ್ಯಗಳಲ್ಲಿ ಸ್ಪೇನ್ 9 ಗೋಲು ಗಳಿಸಿ ನಾಲ್ಕು ಅಂಕ ಪಡೆದಿದ್ದರೆ, ಜರ್ಮನಿ 6 ಗೋಲು ಗಳಿಸಿ 4 ಅಂಕ ಪಡೆದಿದೆ.

ಇಂದು ನಡೆದ ಪಂದ್ಯದಲ್ಲಿ ಜಪಾನ್ ತಂಡದ ರಿತ್ಸು ಡೋನ್ ಮತ್ತು ಅವೊ ತನಕಾ ತಲಾ ಒಂದೊಂದು ಗೋಲು ಗಳಿಸಿದರೆ, ಸ್ಪೆನ್ ಪರವಾಗಿ ಅಲ್ವಾರೊ ಮೊರಾಟಾ ಒಂದು ಗೋಲು ಗಳಿಸಿದರು.

ಎಫ್ ಗುಂಪಿನಿಂದ ಮೊರಾಕ್ಕೊ ಮತ್ತು ಕ್ರೊವೇಷಿಯಾ, ಡಿ ಗುಂಪಿನಿಂದ ಫ್ರಾನ್ಸ್ ಮತ್ತು ಆಸ್ಟ್ರೇಲಿಯಾ ನಾಕೌಟ್ ಹಂತ ಪ್ರವೇಶಿಸಿವೆ. ಸಿ ಗುಂಪಿನಿಂದ ಅರ್ಜೇಂಟೀನಾ ಮತ್ತು ಪೋಲಾಂಡ್, ಬಿ ಗುಂಪಿನಿಂದ ಇಂಗ್ಲೆಂಡ್ ಮತ್ತು ಅಮೆರಿಕ ಹಾಗೂ ಎ ಗುಂಪಿನಿಂದ ನೆದರ್ಲೆಂಡ್ಸ್ ಮತ್ತು ಸೆನಗಲ್ ನಾಕೌತ್ ಪ್ರವೇಶಿಸಿದ ಇತರ ತಂಡಗಳಾಗಿವೆ.

ಫಿಫಾ ವಿಶ್ವಕಪ್ ಟೂರ್ನಿಯ ಮಾದರೆಯೇನು?

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...