Homeಸಿನಿಮಾಕ್ರೀಡೆಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ - ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

- Advertisement -
- Advertisement -

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಜಿ ಗುಂಪಿನ ಲೀಗ್ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡವು ಕ್ಯಾಮರೂನ್ ವಿರುದ್ಧ ಏಕೈಕ ಗೋಲಿನಿಂದ (1-0) ಗೆಲುವು ದಾಖಲಿಸಿದೆ. ಆದರೆ ಗೋಲು ಬಾರಿಸಿದ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಸಂಭ್ರಮಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 48ನೇ ನಿಮಿಷದಲ್ಲಿ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಗೋಲು ಗಳಿಸಿದ ಕಾರಣದಿಂದ ಆ ತಂಡ ಗೆಲುವು ದಾಖಲಿಸಿ 3 ಅಂಕ ಸಂಪಾದಿಸಿದತು. ಆದರೆ ಗೋಲು ಗಳಿಸಿದ ನಂತರ ಅವರು ಸಂಭ್ರಮಾಚರಣೆಯ ಬದಲಿಗೆ ತನ್ನ ಎರಡೂ ಕೈ ಎತ್ತಿ ಶರಣಾಗತಿಯಲ್ಲಿರುವಂತೆ ಕಂಡುಬಂದರು. ಅವರು ಮೂಲತಃ ಕ್ಯಾಮರೂನ್ ದೇಶದವರಾಗಿದ್ದು ತನ್ನ ಸ್ವದೇಶದ ವಿರುದ್ಧವೇ ಗೋಲು ಗಳಿಸಿದ್ದು ಅವರು ಸಂಭ್ರಮಿಸದಿರಲು ಕಾರಣವಾಗಿತ್ತು.

ಕ್ಯಾಮರೂನ್‌ನ ರಾಜಧಾನಿ ಯೌಂಡೆಯಲ್ಲಿ ಜನಿಸಿದ ಬ್ರೀಲ್ ಎಂಬೋಲೊ ಬಾಸೆಲ್ ನಗರದಲ್ಲಿ ಬೆಳೆದಿದ್ದರು. ಎಂಟು ವರ್ಷಗಳ ಹಿಂದಿನವರೆಗೆ ಸ್ವಿಸ್ ಪೌರತ್ವವನ್ನು ಪಡೆದಿರದಿದ್ದ ಅವರು ಇದೀಗ ಸ್ವಿಟ್ಜರ್ಲೆಂಡ್‌ನ ಫಾರ್ವರ್ಡ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಜಿ ಗುಂಪಿನಲ್ಲಿ ಈ ದೇಶಗಳ ಜೊತೆಗೆ ಬಲಿಷ್ಠ ಬ್ರೆಜಿಲ್ ಮತ್ತು ಸೆರ್ಬಿಯಾ ತಂಡಗಳಿದ್ದು, ಈ ಪಂದ್ಯದಲ್ಲಿ ಗೆಲ್ಲುವುದು ಎರಡೂ ತಂಡಕ್ಕೂ ಅನಿವಾರ್ಯವಾಗಿತ್ತು. ಆದರೆ ಬ್ರೀಲ್ ಎಂಬೋಲೊ ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಸ್ವಿಜರ್ಲ್ಯಾಂಡ್ ಶುಭಾರಂಭ ಮಾಡಿದ್ದು ಮತ್ತೊಂದು ಪಂದ್ಯ ಗೆಲ್ಲುವ ಮೂಲಕ 16ರ ಹಂತ ಪ್ರವೇಶಿಸಲು ತುದಿಗಾಲಲ್ಲಿ ಕಾಯುತ್ತಿದೆ.

ಕ್ಯಾಮರೂನ್ ದೇಶವು ಇಂದಿನ ಸೋಲಿನೊಂದಿಗೆ ವಿಶ್ವಕಪ್‌ ಪುಟ್ಬಾಲ್ ಪಂದ್ಯದಲ್ಲಿ ಸತತ 8ನೇ ಸೋಲು ಕಂಡ ಅಪಖ್ಯಾತಿ ಒಳಗಾಯಿತು. ಅದರಲ್ಲಿಯೂ ತನ್ನದೇ ದೇಶದ ಆಟಗಾರ ಗೋಲಿನಿಂದ ಪಂದ್ಯ ಸೋತಿದ್ದು ಕ್ಯಾಮರೂನ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಿಸಿತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಚಿಂತಕ ಸುರೇಶ್ ಕಂಜರ್ಪಣೆಯವರು, “ಇಂದಿನ ಫುಟ್ಬಾಲ್ ಪಂದ್ಯದ ಕತೆ ಇದು. ಸ್ವಿಟ್ಜರ್ಲೆಂಡ್‌‌ – ಕ್ಯಾಮರೂನ್ ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್‌‌ ನ ಎಂಬೋಲೋ ಏಕ ಮಾತ್ರ ಗೋಲು ಹೊಡೆದು ಪಂದ್ಯ ಗೆಲ್ಲಿಸಿದ್ದಾನೆ. ವಿಪರ್ಯಾಸವೆಂದರೆ ಈತ ಕ್ಯಾಮರೂನ್ ಸಂಜಾತ. ಈಗ ಸ್ವಿಸ್ ಪ್ರಜೆ! ಆತನ ಮಾನಸಿಕ ಸ್ಥಿತಿ ಎರಡನೇ ಚಿತ್ರದಲ್ಲಿದೆ. ಗೋಲು ಹೊಡೆದ ಮೇಲೆ ಆತ ಸಂಭ್ರಮಿಸದೇ ಕೈ ಎತ್ತಿ ಸುಮ್ಮನೆ ನಿಂತಿದ್ದಾನೆ. ನಮ್ಮಲ್ಲಾಗಿದ್ದರೆ ಇಷ್ಟರೊಳಗೆ ಟು ರುಪೀಸ್ ಪಡೆ ಟ್ರೋಲ್ ಮಾಡಿ, ಆತನನ್ನು ಪಾಕಿಸ್ತಾನಕ್ಕೋ, ಕೈಲಾಸಕ್ಕೋ ಕಳಿಸುತ್ತಿತ್ತು” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...