Homeಸಿನಿಮಾಕ್ರೀಡೆಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ - ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

- Advertisement -
- Advertisement -

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಜಿ ಗುಂಪಿನ ಲೀಗ್ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡವು ಕ್ಯಾಮರೂನ್ ವಿರುದ್ಧ ಏಕೈಕ ಗೋಲಿನಿಂದ (1-0) ಗೆಲುವು ದಾಖಲಿಸಿದೆ. ಆದರೆ ಗೋಲು ಬಾರಿಸಿದ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಸಂಭ್ರಮಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 48ನೇ ನಿಮಿಷದಲ್ಲಿ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಗೋಲು ಗಳಿಸಿದ ಕಾರಣದಿಂದ ಆ ತಂಡ ಗೆಲುವು ದಾಖಲಿಸಿ 3 ಅಂಕ ಸಂಪಾದಿಸಿದತು. ಆದರೆ ಗೋಲು ಗಳಿಸಿದ ನಂತರ ಅವರು ಸಂಭ್ರಮಾಚರಣೆಯ ಬದಲಿಗೆ ತನ್ನ ಎರಡೂ ಕೈ ಎತ್ತಿ ಶರಣಾಗತಿಯಲ್ಲಿರುವಂತೆ ಕಂಡುಬಂದರು. ಅವರು ಮೂಲತಃ ಕ್ಯಾಮರೂನ್ ದೇಶದವರಾಗಿದ್ದು ತನ್ನ ಸ್ವದೇಶದ ವಿರುದ್ಧವೇ ಗೋಲು ಗಳಿಸಿದ್ದು ಅವರು ಸಂಭ್ರಮಿಸದಿರಲು ಕಾರಣವಾಗಿತ್ತು.

ಕ್ಯಾಮರೂನ್‌ನ ರಾಜಧಾನಿ ಯೌಂಡೆಯಲ್ಲಿ ಜನಿಸಿದ ಬ್ರೀಲ್ ಎಂಬೋಲೊ ಬಾಸೆಲ್ ನಗರದಲ್ಲಿ ಬೆಳೆದಿದ್ದರು. ಎಂಟು ವರ್ಷಗಳ ಹಿಂದಿನವರೆಗೆ ಸ್ವಿಸ್ ಪೌರತ್ವವನ್ನು ಪಡೆದಿರದಿದ್ದ ಅವರು ಇದೀಗ ಸ್ವಿಟ್ಜರ್ಲೆಂಡ್‌ನ ಫಾರ್ವರ್ಡ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಜಿ ಗುಂಪಿನಲ್ಲಿ ಈ ದೇಶಗಳ ಜೊತೆಗೆ ಬಲಿಷ್ಠ ಬ್ರೆಜಿಲ್ ಮತ್ತು ಸೆರ್ಬಿಯಾ ತಂಡಗಳಿದ್ದು, ಈ ಪಂದ್ಯದಲ್ಲಿ ಗೆಲ್ಲುವುದು ಎರಡೂ ತಂಡಕ್ಕೂ ಅನಿವಾರ್ಯವಾಗಿತ್ತು. ಆದರೆ ಬ್ರೀಲ್ ಎಂಬೋಲೊ ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಸ್ವಿಜರ್ಲ್ಯಾಂಡ್ ಶುಭಾರಂಭ ಮಾಡಿದ್ದು ಮತ್ತೊಂದು ಪಂದ್ಯ ಗೆಲ್ಲುವ ಮೂಲಕ 16ರ ಹಂತ ಪ್ರವೇಶಿಸಲು ತುದಿಗಾಲಲ್ಲಿ ಕಾಯುತ್ತಿದೆ.

ಕ್ಯಾಮರೂನ್ ದೇಶವು ಇಂದಿನ ಸೋಲಿನೊಂದಿಗೆ ವಿಶ್ವಕಪ್‌ ಪುಟ್ಬಾಲ್ ಪಂದ್ಯದಲ್ಲಿ ಸತತ 8ನೇ ಸೋಲು ಕಂಡ ಅಪಖ್ಯಾತಿ ಒಳಗಾಯಿತು. ಅದರಲ್ಲಿಯೂ ತನ್ನದೇ ದೇಶದ ಆಟಗಾರ ಗೋಲಿನಿಂದ ಪಂದ್ಯ ಸೋತಿದ್ದು ಕ್ಯಾಮರೂನ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಿಸಿತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಚಿಂತಕ ಸುರೇಶ್ ಕಂಜರ್ಪಣೆಯವರು, “ಇಂದಿನ ಫುಟ್ಬಾಲ್ ಪಂದ್ಯದ ಕತೆ ಇದು. ಸ್ವಿಟ್ಜರ್ಲೆಂಡ್‌‌ – ಕ್ಯಾಮರೂನ್ ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್‌‌ ನ ಎಂಬೋಲೋ ಏಕ ಮಾತ್ರ ಗೋಲು ಹೊಡೆದು ಪಂದ್ಯ ಗೆಲ್ಲಿಸಿದ್ದಾನೆ. ವಿಪರ್ಯಾಸವೆಂದರೆ ಈತ ಕ್ಯಾಮರೂನ್ ಸಂಜಾತ. ಈಗ ಸ್ವಿಸ್ ಪ್ರಜೆ! ಆತನ ಮಾನಸಿಕ ಸ್ಥಿತಿ ಎರಡನೇ ಚಿತ್ರದಲ್ಲಿದೆ. ಗೋಲು ಹೊಡೆದ ಮೇಲೆ ಆತ ಸಂಭ್ರಮಿಸದೇ ಕೈ ಎತ್ತಿ ಸುಮ್ಮನೆ ನಿಂತಿದ್ದಾನೆ. ನಮ್ಮಲ್ಲಾಗಿದ್ದರೆ ಇಷ್ಟರೊಳಗೆ ಟು ರುಪೀಸ್ ಪಡೆ ಟ್ರೋಲ್ ಮಾಡಿ, ಆತನನ್ನು ಪಾಕಿಸ್ತಾನಕ್ಕೋ, ಕೈಲಾಸಕ್ಕೋ ಕಳಿಸುತ್ತಿತ್ತು” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...