Homeಸಿನಿಮಾಕ್ರೀಡೆಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ - ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

- Advertisement -
- Advertisement -

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಜಿ ಗುಂಪಿನ ಲೀಗ್ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡವು ಕ್ಯಾಮರೂನ್ ವಿರುದ್ಧ ಏಕೈಕ ಗೋಲಿನಿಂದ (1-0) ಗೆಲುವು ದಾಖಲಿಸಿದೆ. ಆದರೆ ಗೋಲು ಬಾರಿಸಿದ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಸಂಭ್ರಮಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 48ನೇ ನಿಮಿಷದಲ್ಲಿ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಗೋಲು ಗಳಿಸಿದ ಕಾರಣದಿಂದ ಆ ತಂಡ ಗೆಲುವು ದಾಖಲಿಸಿ 3 ಅಂಕ ಸಂಪಾದಿಸಿದತು. ಆದರೆ ಗೋಲು ಗಳಿಸಿದ ನಂತರ ಅವರು ಸಂಭ್ರಮಾಚರಣೆಯ ಬದಲಿಗೆ ತನ್ನ ಎರಡೂ ಕೈ ಎತ್ತಿ ಶರಣಾಗತಿಯಲ್ಲಿರುವಂತೆ ಕಂಡುಬಂದರು. ಅವರು ಮೂಲತಃ ಕ್ಯಾಮರೂನ್ ದೇಶದವರಾಗಿದ್ದು ತನ್ನ ಸ್ವದೇಶದ ವಿರುದ್ಧವೇ ಗೋಲು ಗಳಿಸಿದ್ದು ಅವರು ಸಂಭ್ರಮಿಸದಿರಲು ಕಾರಣವಾಗಿತ್ತು.

ಕ್ಯಾಮರೂನ್‌ನ ರಾಜಧಾನಿ ಯೌಂಡೆಯಲ್ಲಿ ಜನಿಸಿದ ಬ್ರೀಲ್ ಎಂಬೋಲೊ ಬಾಸೆಲ್ ನಗರದಲ್ಲಿ ಬೆಳೆದಿದ್ದರು. ಎಂಟು ವರ್ಷಗಳ ಹಿಂದಿನವರೆಗೆ ಸ್ವಿಸ್ ಪೌರತ್ವವನ್ನು ಪಡೆದಿರದಿದ್ದ ಅವರು ಇದೀಗ ಸ್ವಿಟ್ಜರ್ಲೆಂಡ್‌ನ ಫಾರ್ವರ್ಡ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಜಿ ಗುಂಪಿನಲ್ಲಿ ಈ ದೇಶಗಳ ಜೊತೆಗೆ ಬಲಿಷ್ಠ ಬ್ರೆಜಿಲ್ ಮತ್ತು ಸೆರ್ಬಿಯಾ ತಂಡಗಳಿದ್ದು, ಈ ಪಂದ್ಯದಲ್ಲಿ ಗೆಲ್ಲುವುದು ಎರಡೂ ತಂಡಕ್ಕೂ ಅನಿವಾರ್ಯವಾಗಿತ್ತು. ಆದರೆ ಬ್ರೀಲ್ ಎಂಬೋಲೊ ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಸ್ವಿಜರ್ಲ್ಯಾಂಡ್ ಶುಭಾರಂಭ ಮಾಡಿದ್ದು ಮತ್ತೊಂದು ಪಂದ್ಯ ಗೆಲ್ಲುವ ಮೂಲಕ 16ರ ಹಂತ ಪ್ರವೇಶಿಸಲು ತುದಿಗಾಲಲ್ಲಿ ಕಾಯುತ್ತಿದೆ.

ಕ್ಯಾಮರೂನ್ ದೇಶವು ಇಂದಿನ ಸೋಲಿನೊಂದಿಗೆ ವಿಶ್ವಕಪ್‌ ಪುಟ್ಬಾಲ್ ಪಂದ್ಯದಲ್ಲಿ ಸತತ 8ನೇ ಸೋಲು ಕಂಡ ಅಪಖ್ಯಾತಿ ಒಳಗಾಯಿತು. ಅದರಲ್ಲಿಯೂ ತನ್ನದೇ ದೇಶದ ಆಟಗಾರ ಗೋಲಿನಿಂದ ಪಂದ್ಯ ಸೋತಿದ್ದು ಕ್ಯಾಮರೂನ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಿಸಿತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಚಿಂತಕ ಸುರೇಶ್ ಕಂಜರ್ಪಣೆಯವರು, “ಇಂದಿನ ಫುಟ್ಬಾಲ್ ಪಂದ್ಯದ ಕತೆ ಇದು. ಸ್ವಿಟ್ಜರ್ಲೆಂಡ್‌‌ – ಕ್ಯಾಮರೂನ್ ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್‌‌ ನ ಎಂಬೋಲೋ ಏಕ ಮಾತ್ರ ಗೋಲು ಹೊಡೆದು ಪಂದ್ಯ ಗೆಲ್ಲಿಸಿದ್ದಾನೆ. ವಿಪರ್ಯಾಸವೆಂದರೆ ಈತ ಕ್ಯಾಮರೂನ್ ಸಂಜಾತ. ಈಗ ಸ್ವಿಸ್ ಪ್ರಜೆ! ಆತನ ಮಾನಸಿಕ ಸ್ಥಿತಿ ಎರಡನೇ ಚಿತ್ರದಲ್ಲಿದೆ. ಗೋಲು ಹೊಡೆದ ಮೇಲೆ ಆತ ಸಂಭ್ರಮಿಸದೇ ಕೈ ಎತ್ತಿ ಸುಮ್ಮನೆ ನಿಂತಿದ್ದಾನೆ. ನಮ್ಮಲ್ಲಾಗಿದ್ದರೆ ಇಷ್ಟರೊಳಗೆ ಟು ರುಪೀಸ್ ಪಡೆ ಟ್ರೋಲ್ ಮಾಡಿ, ಆತನನ್ನು ಪಾಕಿಸ್ತಾನಕ್ಕೋ, ಕೈಲಾಸಕ್ಕೋ ಕಳಿಸುತ್ತಿತ್ತು” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....