Homeಸಿನಿಮಾಕ್ರೀಡೆಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ - ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

- Advertisement -
- Advertisement -

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಜಿ ಗುಂಪಿನ ಲೀಗ್ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡವು ಕ್ಯಾಮರೂನ್ ವಿರುದ್ಧ ಏಕೈಕ ಗೋಲಿನಿಂದ (1-0) ಗೆಲುವು ದಾಖಲಿಸಿದೆ. ಆದರೆ ಗೋಲು ಬಾರಿಸಿದ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಸಂಭ್ರಮಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 48ನೇ ನಿಮಿಷದಲ್ಲಿ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಗೋಲು ಗಳಿಸಿದ ಕಾರಣದಿಂದ ಆ ತಂಡ ಗೆಲುವು ದಾಖಲಿಸಿ 3 ಅಂಕ ಸಂಪಾದಿಸಿದತು. ಆದರೆ ಗೋಲು ಗಳಿಸಿದ ನಂತರ ಅವರು ಸಂಭ್ರಮಾಚರಣೆಯ ಬದಲಿಗೆ ತನ್ನ ಎರಡೂ ಕೈ ಎತ್ತಿ ಶರಣಾಗತಿಯಲ್ಲಿರುವಂತೆ ಕಂಡುಬಂದರು. ಅವರು ಮೂಲತಃ ಕ್ಯಾಮರೂನ್ ದೇಶದವರಾಗಿದ್ದು ತನ್ನ ಸ್ವದೇಶದ ವಿರುದ್ಧವೇ ಗೋಲು ಗಳಿಸಿದ್ದು ಅವರು ಸಂಭ್ರಮಿಸದಿರಲು ಕಾರಣವಾಗಿತ್ತು.

ಕ್ಯಾಮರೂನ್‌ನ ರಾಜಧಾನಿ ಯೌಂಡೆಯಲ್ಲಿ ಜನಿಸಿದ ಬ್ರೀಲ್ ಎಂಬೋಲೊ ಬಾಸೆಲ್ ನಗರದಲ್ಲಿ ಬೆಳೆದಿದ್ದರು. ಎಂಟು ವರ್ಷಗಳ ಹಿಂದಿನವರೆಗೆ ಸ್ವಿಸ್ ಪೌರತ್ವವನ್ನು ಪಡೆದಿರದಿದ್ದ ಅವರು ಇದೀಗ ಸ್ವಿಟ್ಜರ್ಲೆಂಡ್‌ನ ಫಾರ್ವರ್ಡ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಜಿ ಗುಂಪಿನಲ್ಲಿ ಈ ದೇಶಗಳ ಜೊತೆಗೆ ಬಲಿಷ್ಠ ಬ್ರೆಜಿಲ್ ಮತ್ತು ಸೆರ್ಬಿಯಾ ತಂಡಗಳಿದ್ದು, ಈ ಪಂದ್ಯದಲ್ಲಿ ಗೆಲ್ಲುವುದು ಎರಡೂ ತಂಡಕ್ಕೂ ಅನಿವಾರ್ಯವಾಗಿತ್ತು. ಆದರೆ ಬ್ರೀಲ್ ಎಂಬೋಲೊ ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಸ್ವಿಜರ್ಲ್ಯಾಂಡ್ ಶುಭಾರಂಭ ಮಾಡಿದ್ದು ಮತ್ತೊಂದು ಪಂದ್ಯ ಗೆಲ್ಲುವ ಮೂಲಕ 16ರ ಹಂತ ಪ್ರವೇಶಿಸಲು ತುದಿಗಾಲಲ್ಲಿ ಕಾಯುತ್ತಿದೆ.

ಕ್ಯಾಮರೂನ್ ದೇಶವು ಇಂದಿನ ಸೋಲಿನೊಂದಿಗೆ ವಿಶ್ವಕಪ್‌ ಪುಟ್ಬಾಲ್ ಪಂದ್ಯದಲ್ಲಿ ಸತತ 8ನೇ ಸೋಲು ಕಂಡ ಅಪಖ್ಯಾತಿ ಒಳಗಾಯಿತು. ಅದರಲ್ಲಿಯೂ ತನ್ನದೇ ದೇಶದ ಆಟಗಾರ ಗೋಲಿನಿಂದ ಪಂದ್ಯ ಸೋತಿದ್ದು ಕ್ಯಾಮರೂನ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಿಸಿತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಚಿಂತಕ ಸುರೇಶ್ ಕಂಜರ್ಪಣೆಯವರು, “ಇಂದಿನ ಫುಟ್ಬಾಲ್ ಪಂದ್ಯದ ಕತೆ ಇದು. ಸ್ವಿಟ್ಜರ್ಲೆಂಡ್‌‌ – ಕ್ಯಾಮರೂನ್ ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್‌‌ ನ ಎಂಬೋಲೋ ಏಕ ಮಾತ್ರ ಗೋಲು ಹೊಡೆದು ಪಂದ್ಯ ಗೆಲ್ಲಿಸಿದ್ದಾನೆ. ವಿಪರ್ಯಾಸವೆಂದರೆ ಈತ ಕ್ಯಾಮರೂನ್ ಸಂಜಾತ. ಈಗ ಸ್ವಿಸ್ ಪ್ರಜೆ! ಆತನ ಮಾನಸಿಕ ಸ್ಥಿತಿ ಎರಡನೇ ಚಿತ್ರದಲ್ಲಿದೆ. ಗೋಲು ಹೊಡೆದ ಮೇಲೆ ಆತ ಸಂಭ್ರಮಿಸದೇ ಕೈ ಎತ್ತಿ ಸುಮ್ಮನೆ ನಿಂತಿದ್ದಾನೆ. ನಮ್ಮಲ್ಲಾಗಿದ್ದರೆ ಇಷ್ಟರೊಳಗೆ ಟು ರುಪೀಸ್ ಪಡೆ ಟ್ರೋಲ್ ಮಾಡಿ, ಆತನನ್ನು ಪಾಕಿಸ್ತಾನಕ್ಕೋ, ಕೈಲಾಸಕ್ಕೋ ಕಳಿಸುತ್ತಿತ್ತು” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...