Homeಸಿನಿಮಾಕ್ರೀಡೆಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ - ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

- Advertisement -
- Advertisement -

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಜಿ ಗುಂಪಿನ ಲೀಗ್ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡವು ಕ್ಯಾಮರೂನ್ ವಿರುದ್ಧ ಏಕೈಕ ಗೋಲಿನಿಂದ (1-0) ಗೆಲುವು ದಾಖಲಿಸಿದೆ. ಆದರೆ ಗೋಲು ಬಾರಿಸಿದ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಸಂಭ್ರಮಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 48ನೇ ನಿಮಿಷದಲ್ಲಿ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಗೋಲು ಗಳಿಸಿದ ಕಾರಣದಿಂದ ಆ ತಂಡ ಗೆಲುವು ದಾಖಲಿಸಿ 3 ಅಂಕ ಸಂಪಾದಿಸಿದತು. ಆದರೆ ಗೋಲು ಗಳಿಸಿದ ನಂತರ ಅವರು ಸಂಭ್ರಮಾಚರಣೆಯ ಬದಲಿಗೆ ತನ್ನ ಎರಡೂ ಕೈ ಎತ್ತಿ ಶರಣಾಗತಿಯಲ್ಲಿರುವಂತೆ ಕಂಡುಬಂದರು. ಅವರು ಮೂಲತಃ ಕ್ಯಾಮರೂನ್ ದೇಶದವರಾಗಿದ್ದು ತನ್ನ ಸ್ವದೇಶದ ವಿರುದ್ಧವೇ ಗೋಲು ಗಳಿಸಿದ್ದು ಅವರು ಸಂಭ್ರಮಿಸದಿರಲು ಕಾರಣವಾಗಿತ್ತು.

ಕ್ಯಾಮರೂನ್‌ನ ರಾಜಧಾನಿ ಯೌಂಡೆಯಲ್ಲಿ ಜನಿಸಿದ ಬ್ರೀಲ್ ಎಂಬೋಲೊ ಬಾಸೆಲ್ ನಗರದಲ್ಲಿ ಬೆಳೆದಿದ್ದರು. ಎಂಟು ವರ್ಷಗಳ ಹಿಂದಿನವರೆಗೆ ಸ್ವಿಸ್ ಪೌರತ್ವವನ್ನು ಪಡೆದಿರದಿದ್ದ ಅವರು ಇದೀಗ ಸ್ವಿಟ್ಜರ್ಲೆಂಡ್‌ನ ಫಾರ್ವರ್ಡ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಜಿ ಗುಂಪಿನಲ್ಲಿ ಈ ದೇಶಗಳ ಜೊತೆಗೆ ಬಲಿಷ್ಠ ಬ್ರೆಜಿಲ್ ಮತ್ತು ಸೆರ್ಬಿಯಾ ತಂಡಗಳಿದ್ದು, ಈ ಪಂದ್ಯದಲ್ಲಿ ಗೆಲ್ಲುವುದು ಎರಡೂ ತಂಡಕ್ಕೂ ಅನಿವಾರ್ಯವಾಗಿತ್ತು. ಆದರೆ ಬ್ರೀಲ್ ಎಂಬೋಲೊ ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಸ್ವಿಜರ್ಲ್ಯಾಂಡ್ ಶುಭಾರಂಭ ಮಾಡಿದ್ದು ಮತ್ತೊಂದು ಪಂದ್ಯ ಗೆಲ್ಲುವ ಮೂಲಕ 16ರ ಹಂತ ಪ್ರವೇಶಿಸಲು ತುದಿಗಾಲಲ್ಲಿ ಕಾಯುತ್ತಿದೆ.

ಕ್ಯಾಮರೂನ್ ದೇಶವು ಇಂದಿನ ಸೋಲಿನೊಂದಿಗೆ ವಿಶ್ವಕಪ್‌ ಪುಟ್ಬಾಲ್ ಪಂದ್ಯದಲ್ಲಿ ಸತತ 8ನೇ ಸೋಲು ಕಂಡ ಅಪಖ್ಯಾತಿ ಒಳಗಾಯಿತು. ಅದರಲ್ಲಿಯೂ ತನ್ನದೇ ದೇಶದ ಆಟಗಾರ ಗೋಲಿನಿಂದ ಪಂದ್ಯ ಸೋತಿದ್ದು ಕ್ಯಾಮರೂನ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಿಸಿತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಚಿಂತಕ ಸುರೇಶ್ ಕಂಜರ್ಪಣೆಯವರು, “ಇಂದಿನ ಫುಟ್ಬಾಲ್ ಪಂದ್ಯದ ಕತೆ ಇದು. ಸ್ವಿಟ್ಜರ್ಲೆಂಡ್‌‌ – ಕ್ಯಾಮರೂನ್ ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್‌‌ ನ ಎಂಬೋಲೋ ಏಕ ಮಾತ್ರ ಗೋಲು ಹೊಡೆದು ಪಂದ್ಯ ಗೆಲ್ಲಿಸಿದ್ದಾನೆ. ವಿಪರ್ಯಾಸವೆಂದರೆ ಈತ ಕ್ಯಾಮರೂನ್ ಸಂಜಾತ. ಈಗ ಸ್ವಿಸ್ ಪ್ರಜೆ! ಆತನ ಮಾನಸಿಕ ಸ್ಥಿತಿ ಎರಡನೇ ಚಿತ್ರದಲ್ಲಿದೆ. ಗೋಲು ಹೊಡೆದ ಮೇಲೆ ಆತ ಸಂಭ್ರಮಿಸದೇ ಕೈ ಎತ್ತಿ ಸುಮ್ಮನೆ ನಿಂತಿದ್ದಾನೆ. ನಮ್ಮಲ್ಲಾಗಿದ್ದರೆ ಇಷ್ಟರೊಳಗೆ ಟು ರುಪೀಸ್ ಪಡೆ ಟ್ರೋಲ್ ಮಾಡಿ, ಆತನನ್ನು ಪಾಕಿಸ್ತಾನಕ್ಕೋ, ಕೈಲಾಸಕ್ಕೋ ಕಳಿಸುತ್ತಿತ್ತು” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...