Homeಸಿನಿಮಾಕ್ರೀಡೆಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ - ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

- Advertisement -
- Advertisement -

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಜಿ ಗುಂಪಿನ ಲೀಗ್ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡವು ಕ್ಯಾಮರೂನ್ ವಿರುದ್ಧ ಏಕೈಕ ಗೋಲಿನಿಂದ (1-0) ಗೆಲುವು ದಾಖಲಿಸಿದೆ. ಆದರೆ ಗೋಲು ಬಾರಿಸಿದ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಸಂಭ್ರಮಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 48ನೇ ನಿಮಿಷದಲ್ಲಿ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಗೋಲು ಗಳಿಸಿದ ಕಾರಣದಿಂದ ಆ ತಂಡ ಗೆಲುವು ದಾಖಲಿಸಿ 3 ಅಂಕ ಸಂಪಾದಿಸಿದತು. ಆದರೆ ಗೋಲು ಗಳಿಸಿದ ನಂತರ ಅವರು ಸಂಭ್ರಮಾಚರಣೆಯ ಬದಲಿಗೆ ತನ್ನ ಎರಡೂ ಕೈ ಎತ್ತಿ ಶರಣಾಗತಿಯಲ್ಲಿರುವಂತೆ ಕಂಡುಬಂದರು. ಅವರು ಮೂಲತಃ ಕ್ಯಾಮರೂನ್ ದೇಶದವರಾಗಿದ್ದು ತನ್ನ ಸ್ವದೇಶದ ವಿರುದ್ಧವೇ ಗೋಲು ಗಳಿಸಿದ್ದು ಅವರು ಸಂಭ್ರಮಿಸದಿರಲು ಕಾರಣವಾಗಿತ್ತು.

ಕ್ಯಾಮರೂನ್‌ನ ರಾಜಧಾನಿ ಯೌಂಡೆಯಲ್ಲಿ ಜನಿಸಿದ ಬ್ರೀಲ್ ಎಂಬೋಲೊ ಬಾಸೆಲ್ ನಗರದಲ್ಲಿ ಬೆಳೆದಿದ್ದರು. ಎಂಟು ವರ್ಷಗಳ ಹಿಂದಿನವರೆಗೆ ಸ್ವಿಸ್ ಪೌರತ್ವವನ್ನು ಪಡೆದಿರದಿದ್ದ ಅವರು ಇದೀಗ ಸ್ವಿಟ್ಜರ್ಲೆಂಡ್‌ನ ಫಾರ್ವರ್ಡ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಜಿ ಗುಂಪಿನಲ್ಲಿ ಈ ದೇಶಗಳ ಜೊತೆಗೆ ಬಲಿಷ್ಠ ಬ್ರೆಜಿಲ್ ಮತ್ತು ಸೆರ್ಬಿಯಾ ತಂಡಗಳಿದ್ದು, ಈ ಪಂದ್ಯದಲ್ಲಿ ಗೆಲ್ಲುವುದು ಎರಡೂ ತಂಡಕ್ಕೂ ಅನಿವಾರ್ಯವಾಗಿತ್ತು. ಆದರೆ ಬ್ರೀಲ್ ಎಂಬೋಲೊ ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಸ್ವಿಜರ್ಲ್ಯಾಂಡ್ ಶುಭಾರಂಭ ಮಾಡಿದ್ದು ಮತ್ತೊಂದು ಪಂದ್ಯ ಗೆಲ್ಲುವ ಮೂಲಕ 16ರ ಹಂತ ಪ್ರವೇಶಿಸಲು ತುದಿಗಾಲಲ್ಲಿ ಕಾಯುತ್ತಿದೆ.

ಕ್ಯಾಮರೂನ್ ದೇಶವು ಇಂದಿನ ಸೋಲಿನೊಂದಿಗೆ ವಿಶ್ವಕಪ್‌ ಪುಟ್ಬಾಲ್ ಪಂದ್ಯದಲ್ಲಿ ಸತತ 8ನೇ ಸೋಲು ಕಂಡ ಅಪಖ್ಯಾತಿ ಒಳಗಾಯಿತು. ಅದರಲ್ಲಿಯೂ ತನ್ನದೇ ದೇಶದ ಆಟಗಾರ ಗೋಲಿನಿಂದ ಪಂದ್ಯ ಸೋತಿದ್ದು ಕ್ಯಾಮರೂನ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಿಸಿತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಚಿಂತಕ ಸುರೇಶ್ ಕಂಜರ್ಪಣೆಯವರು, “ಇಂದಿನ ಫುಟ್ಬಾಲ್ ಪಂದ್ಯದ ಕತೆ ಇದು. ಸ್ವಿಟ್ಜರ್ಲೆಂಡ್‌‌ – ಕ್ಯಾಮರೂನ್ ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್‌‌ ನ ಎಂಬೋಲೋ ಏಕ ಮಾತ್ರ ಗೋಲು ಹೊಡೆದು ಪಂದ್ಯ ಗೆಲ್ಲಿಸಿದ್ದಾನೆ. ವಿಪರ್ಯಾಸವೆಂದರೆ ಈತ ಕ್ಯಾಮರೂನ್ ಸಂಜಾತ. ಈಗ ಸ್ವಿಸ್ ಪ್ರಜೆ! ಆತನ ಮಾನಸಿಕ ಸ್ಥಿತಿ ಎರಡನೇ ಚಿತ್ರದಲ್ಲಿದೆ. ಗೋಲು ಹೊಡೆದ ಮೇಲೆ ಆತ ಸಂಭ್ರಮಿಸದೇ ಕೈ ಎತ್ತಿ ಸುಮ್ಮನೆ ನಿಂತಿದ್ದಾನೆ. ನಮ್ಮಲ್ಲಾಗಿದ್ದರೆ ಇಷ್ಟರೊಳಗೆ ಟು ರುಪೀಸ್ ಪಡೆ ಟ್ರೋಲ್ ಮಾಡಿ, ಆತನನ್ನು ಪಾಕಿಸ್ತಾನಕ್ಕೋ, ಕೈಲಾಸಕ್ಕೋ ಕಳಿಸುತ್ತಿತ್ತು” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...