Homeಅಂತರಾಷ್ಟ್ರೀಯಫಿಫಾ: ದೇಶದ ಮಹಿಳೆಯರು ಮುನ್ನಡೆಸುತ್ತಿರುವ ಕ್ರಾಂತಿಯನ್ನು ಬೆಂಬಲಿಸಿ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ!

ಫಿಫಾ: ದೇಶದ ಮಹಿಳೆಯರು ಮುನ್ನಡೆಸುತ್ತಿರುವ ಕ್ರಾಂತಿಯನ್ನು ಬೆಂಬಲಿಸಿ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ!

- Advertisement -
- Advertisement -

ಫಿಫಾ ವಿಶ್ವಕಪ್‌‌‌‌ ಪಂದ್ಯಾಟದ ವೇಳೆ ಇರಾನ್‌ ತಂಡವು ರಾಷ್ಟ್ರಗೀತೆಯನ್ನು ಹಾಡದೆ ತಮ್ಮ ದೇಶದಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದೆ. ಸೋಮವಾರದಂದು ದೋಹಾದ ಖಲೀಫಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಇರಾನ್ ತಂಡವು ತಮ್ಮ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಒಗ್ಗಟ್ಟು ವ್ಯಕ್ತಪಡಿಸಿದೆ.

ಕಳೆದ ಸೆಪ್ಟೆಂಬರ್ 16 ರಂದು ಹಿಜಾಬ್ ಧರಿಸದ ಕಾರಣಕ್ಕಾಗಿ ದೇಶದ ನೈತಿಕತೆಯ ಪೋಲೀಸರು ಮಹ್ಸಾ ಅಮಿನಿ ಅವರನ್ನು ಬಂಧಿಸಿದ್ದರು. ಇದರ ನಂತರ ಅವರು ಅಲ್ಲಿಯೆ ಹತ್ಯಗೀಡಾಗಿದ್ದರು ಎಂದು ಆರೋಪಿಸಲಾಗಿದೆ. ಅಮಿನಿಯ ಸಾವಿನ ನಂತರ ಇರಾನ್‌ನಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್ ಮತ್ತು ಇರಾನ್‌ ಪಂದ್ಯ ನೋಡಲು ಬಂದ ಇರಾನ್‌ ಅಭಿಮಾನಿಗಳು ಸ್ಟೇಡಿಯಂನಲ್ಲಿ ತಮ್ಮದೇ ಆದ ರಾಷ್ಟ್ರಗೀತೆಯನ್ನು ಹಾಡಿದ್ದು, ತಮ್ಮ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ವಿಡಿಯೊ ಪೋಸ್ಟ್‌ ಮಾಡಿರುವ ಅಫ್ಘಾನ್ ಪುನರ್ವಸತಿ ಮತ್ತು ನಿರಾಶ್ರಿತರ ಸಚಿವರ ಮಾಜಿ ನೀತಿ ವಿಶೇಷ ಸಲಹೆಗಾರ್ತಿ ಶಬ್ನಮ್ ನಸಿಮಿ, “ಈ ರೀತಿ ಮಾಡುವುದು ತಂಡಕ್ಕೆ ದೊಡ್ಡ ಅಪಾಯ ಉಂಟುಮಾಡುತ್ತದೆ. ಇರಾನ್ ಆಡಳಿತವು ತನ್ನ ವಿರುದ್ಧ ಮಾತನಾಡಿದ ಇರಾನ್ ಫುಟ್ಬಾಲ್ ಆಟಗಾರರಿಗೆ ಬಂಧನ ವಾರಂಟ್ ಹೊರಡಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 1948 ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಹಣದ ಕೊರತೆಯಿಂದಲ್ಲ

ಶಬ್ನಮ್ ನಸಿಮಿ ಬ್ರಿಟಿಷ್-ಆಫ್ಘಾನ್ ಸಾಮಾಜಿಕ ಹೋರಾಟಗಾರ್ತಿಯಾಗಿದ್ದು, ರಾಜಕೀಯ ವಿಮರ್ಶಕಿ ಕೂಡಾ ಆಗಿದ್ದಾರೆ. “ದೇಶದ ಮಹಿಳೆಯರ ನೇತೃತ್ವದ ಕ್ರಾಂತಿಯನ್ನು ಬೆಂಬಲಿಸುವ ಸಲುವಾಗಿ ಇರಾನ್‌ನ ರಾಷ್ಟ್ರೀಯ ತಂಡವು ಇಂಗ್ಲೇಂಡ್‌ ವಿರುದ್ಧದ ಆಟ ಪ್ರಾರಂಭಿಸಿದಾಗ ರಾಷ್ಟ್ರಗೀತೆಯನ್ನು ಹಾಡಲಿಲ್ಲ. ಇರಾನಿನ ಜನಸಮೂಹವೂ ತಮ್ಮದೇ ಆದ ರಾಷ್ಟ್ರಗೀತೆಯನ್ನು ಹಾಡುತ್ತಿದ್ದರು. ಅದ್ಭುತ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಇರಾನ್ ತಂಡದ ನಾಯಕ ಎಹ್ಸಾನ್ ಹಾಜಿಸಾಫಿ, “ಅಮಿನಿಯ ಸಾವಿನ ನಂತರ ಭುಗಿಲೆದ್ದ ಕ್ರಾಂತಿಯನ್ನು ಬೆಂಬಲಿಸಲು ತಂಡವು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಸಂಘಟನೆಯ ಪ್ರಕಾರ, ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ 400 ಕ್ಕೂ ಹೆಚ್ಚು ಪ್ರತಿಭಟನಾಕಾರರು ಕೊಲ್ಲಲ್ಪಟ್ಟಿದ್ದಾರೆ ಮತ್ತು 16,000 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಿದ್ದರು!

“ನಮ್ಮ ದೇಶದ ಪರಿಸ್ಥಿತಿಗಳು ಸರಿಯಾಗಿಲ್ಲ ಮತ್ತು ನಮ್ಮ ಜನರು ಸಂತೋಷವಾಗಿಲ್ಲ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು. ನಾವು ಇಲ್ಲಿದ್ದ ಮಾತ್ರಕ್ಕೆ ನಾವು ಅವರ ಧ್ವನಿಯಾಗಬಾರದು ಅಥವಾ ನಾವು ಅವರನ್ನು ಗೌರವಿಸಬಾರದು ಎಂದೇನಿಲ್ಲ” ಎಂದು ಇರಾನ್ ಕ್ಯಾಪ್ಟನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...